163 + 80 ಆರ್ ಜೆ ಡಿ-ಕಾಂಗ್ರೆಸ್ ಹೊಸ ಸೂತ್ರದಡಿಯಲ್ಲಿ ಕಣಕ್ಕೆ
ಪಾಟ್ನಾ, ಆ. 13: ಬಿಹಾರ ವಿಧಾನಸಭೆಯ ಅವಧಿ ನವೆಂಬರ್ 29ಕ್ಕೆ ಅಂತ್ಯಗೊಳ್ಳಲಿದೆ. ನಿಗದಿತ ಸಮಯದಲ್ಲಿ ಚುನಾವಣೆ ನಡೆಸುವುದಾಗಿ ಕೇಂದ್ರ ಚುನಾವಣಾ ಆಯೋಗ ಹೇಳಿದೆ. ಈ ನಡುವೆ ಮಹಾಘಟಬಂಧನ್ ಸೀಟು ಹಂಚಿಕೆ ಬಗ್ಗೆ ಚರ್ಚೆ ಆರಂಭಿಸಿದೆ.
ಮುಂಬರುವ ಚುನಾವಣೆಯಲ್ಲಿ ಜಯಗಳಿಸುವ ಮೂಲಕ ಸತತ ನಾಲ್ಕನೆಯ ಅವಧಿಯಲ್ಲಿ ಗದ್ದುಗೆಗೆ ಏರಲು ನಿತೀಶ್ ಕುಮಾರ್ ಸಿದ್ಧತೆ ನಡೆಸಿದ್ದಾರೆ. ಅವರ ನಾಗಾಲೋಟಕ್ಕೆ ಕಡಿವಾಣ ಹಾಕಲು ಆರ್ಜೆಡಿ ಮುಖಂಡ ಲಾಲು ಪ್ರಸಾದ್ ಮಗ ತೇಜಸ್ವಿ ಯಾದವ್ ತುದಿಗಾಲಲ್ಲಿ ನಿಂತಿದ್ದಾರೆ.
ಬಿಹಾರ ವಿಧಾನಸಭೆಯಲ್ಲಿ 243 ಸ್ಥಾನಗಳಿದ್ದು, ಆರ್ ಜೆ ಡಿ 81 ಹಾಗೂ ಕಾಂಗ್ರೆಸ್ 27 ಸ್ಥಾನ ಹೊಂದಿವೆ. ಈಗ 163 + 80 ಸೂತ್ರದಡಿಯಲ್ಲಿ ಸೀಟು ಹಂಚಿಕೆ ಸರಿ ಹೊಂದಿಸಲು ವಿಕಾಸ್ ಶೀಲ್ ಇನ್ಸಾನ್ ಪಾರ್ಟಿ(ವಿಐಪಿ) ಜೊತೆಗೆ ಸಿಪಿಐ -ಎಂಎಲ್ ಜೊತೆಗೆ ಆರ್ ಜೆಡಿ ಮಾತುಕತೆ ನಡೆಸಿದೆ. ಜೊತೆಗೆ ಬಹುಜನ ಸಮಾಜವಾದಿ ಪಾರ್ಟಿ ಕೂಡಾ ಕೈಜೋಡಿಸಲಿದೆ. ಇನ್ನೊಂದೆಡೆ ರಾಷ್ಟ್ರೀಯ ಲೋಕ ಸಮತಾ ಪಾರ್ಟಿ, ಹಿಂದೂಸ್ತಾನಿ ಆವಾಯಂ ಪಾರ್ಟಿ(ಸೆಕ್ಯುಲರ್) ಜೊತೆಗೆ ಸಿಪಿಐ ಜೊತೆ ಕಾಂಗ್ರೆಸ್ ಮಾತುಕತೆ ನಡೆಸಿ 80 ಸ್ಥಾನ ಸರಿ ಹೊಂದಿಸಲಿದೆ.

ಹೆಚ್ಚು ಸಣ್ಣ ಪುಟ್ಟ ಪಕ್ಷಗಳನ್ನು ಒಗ್ಗೂಡಿಸಿಕೊಂಡು ಮುನ್ನಡೆಸುವುದು ಎರಡು ದೊಡ್ಡ ಪಕ್ಷಗಳ ಜವಾಬ್ದಾರಿಯಾಗಿದೆ. ಕಾಂಗ್ರೆಸ್ ಇನ್ನೂ 10 ಸ್ಥಾನಗಳನ್ನು ಪಡೆದುಕೊಳ್ಳಬಹುದಾಗಿತ್ತು ಎಂದು ಎಐಸಿಸಿ ಬಿಹಾರ ಉಸ್ತುವಾರಿ ಶಕ್ತಿ ಸಿಂಗ್ ಗೋಹಿಲ್ ಹೇಳಿದ್ದಾರೆ.
ಎಡಪಕ್ಷಗಳನ್ನು ಮೈತ್ರಿಕೂಟಕ್ಕೆ ಸೇರಿಸಿಕೊಂಡು ಮಹಾ ಘಟಬಂಧನ್ ಇನ್ನಷ್ಟು ವಿಸ್ತಾರಗೊಂಡಿದೆ. ಸೀಟುಗಳ ಹಂಚಿಕೆ ಬಗ್ಗೆ ಚರ್ಚೆ ನಡೆಸಲಾಗಿದೆ. 163 + 80 ಆರ್ ಜೆ ಡಿ-ಕಾಂಗ್ರೆಸ್ ಹೊಸ ಸೂತ್ರದಡಿಯಲ್ಲಿ ಚುನಾವಣೆ ಕಣಕ್ಕಿಳಿಯುವುದು ಇನ್ನೂ ಖಚಿತವಾಗಿಲ್ಲ ಎಂದು ಆರ್ ಜೆ ಡಿ ವಕ್ತಾರ ಮೃತ್ಯುಂಜಯ್ ತಿವಾರಿ ಹೇಳಿದ್ದಾರೆ.
ಆರ್ ಎಲ್ ಎಸ್ ಪಿ, ಎಚ್ಎಎಂ(ಸೆಕ್ಯುಲರ್) ಹಾಗೂ ಎಡಪಕ್ಷಗಳನ್ನು ಸಂಭಾಳಿಸುವುದು ಆರ್ ಜೆ ಡಿ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ಸ್ವಲ್ಪ ಕಷ್ಟಕರವಾಗಬಹುದು ಎಂದು ವಿಶ್ಲೇಷಿಸಲಾಗಿದೆ.
-
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ












Click it and Unblock the Notifications