Breaking; ಮೆಟ್ಟಿಲಿನಿಂದ ಬಿದ್ದ ಲಾಲೂ, ಆಸ್ಪತ್ರೆಗೆ ದಾಖಲು
ಪಾಟ್ನಾ, ಜುಲೈ 04; ಆರ್ಜೆಡಿ ಮುಖ್ಯಸ್ಥ, ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲೂ ಪ್ರಸಾದ್ ಯಾದವ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ಹೇಳಿದ್ದಾರೆ.
ಸೋಮವಾರ ಮುಂಜಾನೆ 3.30ರ ಸುಮಾರಿಗೆ ಪಾಟ್ನಾದಲ್ಲಿರುವ ಪರಾಸ್ ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗಕ್ಕೆ ಲಾಲೂ ಪ್ರಸಾದ್ ಯಾದವ್ ದಾಖಲಾಗಿದ್ದಾರೆ. ಐಸಿಯುನಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.
74 ವರ್ಷದ ಲಾಲೂ ಪ್ರಸಾದ್ ಯಾದವ್ ಮನೆಯಲ್ಲಿ ಮೆಟ್ಟಿಲು ಇಳಿಯುವಾಗ ಆಯತಪ್ಪಿ ಬಿದ್ದಿದ್ದಾರೆ. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದುಬಂದಿದೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಲಾಲೂ ಪ್ರಸಾದ್ ಯಾದವ್ಗೆ ಈಗ ಎಡಭುಜದ ಮೂಳೆ ಮುರಿದು ಹೋಗಿದೆ.
My hero
— Rohini Acharya (@RohiniAcharya2) July 5, 2022
My backbone Papa🙏
Get well soon 🤞
हर बाधाओं से जिसने पाई है मुक्ति
करोड़ों लोगों की दुआएं है जिनकी शक्ति🙏 pic.twitter.com/36ndAbRnTG

ಲಾಲೂ ಪ್ರಸಾದ್ ಯಾದವ್ ಅವರ ಭುಜ ಮತ್ತು ಮೊಣಕಾಲಿನ ಭಾಗದಲ್ಲಿ ಗಾಯಗಳಾಗಿವೆ. ಆಸ್ಪತ್ರೆಯ ನುರಿತ ವೈದ್ಯರ ತಂಡ ಅವರ ಆರೋಗ್ಯದ ಬಗ್ಗೆ ತೀವ್ರ ನಿಗಾವಹಿಸಿದೆ ಎಂದು ಆಸ್ಪತ್ರೆಯ ವೈದ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಲಾಲೂ ಪ್ರಸಾದ್ ಪುತ್ರಿ ರೋಹಿಣಿ ಆಚಾರ್ಯ ಹಾಸಿಗೆ ಮೇಲೆ ಲಾಲೂ ಮಲಗಿರುವ ಚಿತ್ರಗಳನ್ನು ಟ್ವೀಟ್ ಮಾಡಿದ್ದಾರೆ 'ನನ್ನ ಹಿರೋ ನಮ್ಮ ಅಪ್ಪ' ಅವರು ಬೇಗ ಗುಣಮುಖರಾಲಿ ಎಂದು ಬರೆದಿದ್ದಾರೆ.
ಮೇವು ಹಗರಣದಲ್ಲಿ ಅಪರಾಧಿಯಾಗಿ ಶಿಕ್ಷೆ ಅನುಭವಿಸುತ್ತಿದ್ದ ಲಾಲೂ ಪ್ರಸಾದ್ ಯಾದವ್ ಜೈಲಿನಲ್ಲಿದ್ದಾಗಲೇ ಆರೋಗ್ಯ ಹದಗೆಟ್ಟಿತ್ತು. ಬಳಿಕ ಅವರು ರಾಂಚಿಯ ರಿಮ್ಸ್ನಲ್ಲಿ ಚಿಕಿತ್ಸೆ ಪಡೆದಿದ್ದರು. ಬಳಿಕ ಅವರ ಆರೋಗ್ಯ ತೀವ್ರವಾದ ಹದಗೆಟ್ಟ ಬಳಿಕ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
ಆರೋಗ್ಯದ ಕಾರಣ ನೀಡಿ ಅವರು ಜಾಮೀನು ಪಡೆದಿದ್ದಾರೆ. ಪತ್ನಿ ರಾಬ್ರಿ ದೇವಿ ಜೊತೆಗೆ ಅವರು ಪಾಟ್ನಾದ ನಿವಾಸದಲ್ಲಿ ವಾಸವಾಗಿದ್ದರು. ನಿವಾಸದಲ್ಲಿ ಮೆಟ್ಟಿಲು ಇಳಿಯುವಾಗ ಕಾಲು ಜಾರಿ ಬಿದ್ದು ಅವರು ಗಾಯಗೊಂಡಿದ್ದಾರೆ.
Patna, Bihar | Lalu Prasad Yadav reached our emergency at around 3.30 am at night. His condition was unstable due to his recent shoulder accident. Doctors observing him in ICU, condition stable: Dr Asif Rehman, Medical Superintendent Paras hospital pic.twitter.com/0m1s1EUx7f
— ANI (@ANI) July 4, 2022
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications