'' ಸಿಎಂ ನಿತೀಶ್ ವರ್ಚುಯಲ್ ಪ್ರಚಾರ, ಸೂಪರ್ ಡೂಪರ್ ಫ್ಲಾಪ್''
ಪಾಟ್ನಾ,ಸೆ. 9: ಕೊರೊನಾವೈರಸ್ ಸೋಂಕು ಹರಡುವ ಭೀತಿ ನಡುವೆ ಕೇಂದ್ರ ಚುನಾವಣಾ ಆಯೋಗವು ನಿಗದಿಯಂತೆ ಬಿಹಾರದಲ್ಲಿ ವಿಧಾನಸಭೆ ಚುನಾವಣೆ ನಡೆಸಲು ಆಯೋಗ ಸಿದ್ಧವಾಗಿದೆ. ಇನ್ನೊಂದೆಡೆ ರಾಜಕೀಯ ಮೈತ್ರಿಕೂಟಗಳು ಸೀಟು ಹಂಚಿಕೆ, ಚುನಾವಣೆ ಪ್ರಚಾರ ಆರಂಭಿಸಿದೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ವರ್ಚುಯಲ್ ಸಮಾವೇಶ ನಡೆಸಿ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಿದರು. ಭಾಷಣದುದ್ದಕ್ಕೂ ಲಾಲೂ ಪ್ರಸಾದ್ ಯಾದವ್ ಕುಟುಂಬದ ಬಗ್ಗೆ ಮಾತನಾಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ವಿರೋಧ ಪಕ್ಷ ನಾಯಕ, ಆರ್ ಜೆ ಡಿ ಮುಖಂಡ ತೇಜಸ್ವಿ ಯಾದವ್, ಸಿಎಂ ನಿತೀಶ್ ವರ್ಚುಯಲ್ ಪ್ರಚಾರ, ಸೂಪರ್ ಡೂಪರ್ ಫ್ಲಾಪ್ ಆಗಿದೆ ಎಂದಿದ್ದಾರೆ.
Recommended Video
ಇದಕ್ಕೂ ಮುನ್ನ ನ್ಯಾಷನಲ್ ಕ್ರೈಂ ರೆಕಾರ್ಡ್ಸ್ ಬ್ಯುರೋ ಅಂಕಿ ಅಂಶದ ಪ್ರಕಾರ ಬಿಹಾರದಲ್ಲಿ ಅಪರಾಧ ಪ್ರಕರಣಗಳ ಪ್ರಮಾಣ ಶೇ 40ರಷ್ಟಿದೆ. ಪ್ರತಿ 4 ಗಂಟೆಗಳಿಗೊಮ್ಮೆ ಅತ್ಯಾಚಾರ, 5 ಗಂಟೆಗಳಿಗೊಮ್ಮೆ ಕೊಲೆಯಾಗುತ್ತಿದೆ. ಜನರನ್ನು ಭಯದ ವಾತಾವರಣದಲ್ಲಿಡಲು ನಿತೀಶ್ ಕುಮಾರ್ ಬಯಸಿದ್ದಾರೆ ಎಂದು ತೇಜಸ್ವಿ ಯಾದವ್ ಹೇಳಿದ್ದನ್ನು ಇಲ್ಲಿ ಸ್ಮರಿಸಬಹುದು.
ಡಿಜಿಟಲ್ ವೇದಿಕೆ ಬಳಸಿಕೊಂಡು ನಿತೀಶ್ ಅವರು ಕೈಗೊಂಡ ಚುನಾವಣಾ ಪ್ರಚಾರಕ್ಕೆ ಸುಮಾರು 15,000 ವೀಕ್ಷಣೆ ಮಾತ್ರ ಸಿಕ್ಕಿದೆ. ಈ ಸಮಾವೇಶ ಸೂಪರ್ ಡೂಪರ್ ಫ್ಲಾಪ್ ಆಗಿದೆ, ಈ ಬಗ್ಗೆ ಹೆಚ್ಚಿನ ಪ್ರಚಾರ ನೀಡಿದ್ದ ನಿತೀಶ್ ಅವರಿಗೆ ಈಗ ವಾಸ್ತವದ ಅರಿವಾಗಿರಬೇಕು, ಡಿಸ್ ಲೈಕ್ ಗಳನ್ನು ಎದುರಿಸಲು ಸಿದ್ಧರಾಗಬೇಕು. ಆತ್ಮವಿಶ್ವಾಸ ಇಲ್ಲದ ಮೊದಲ ಭಾಷಣದಿಂದ ಚುನಾವಣೆಗೆ ಮುನ್ನವೇ ಸೋಲೊಪ್ಪಿಕೊಂಡಂತಾಗಿದೆ ಎಂದು ತೇಜಸ್ವಿ ಪ್ರತಿಕ್ರಿಯಿಸಿದ್ದಾರೆ.

ನಾನು ಸಿಎಂ ನಿತೀಶ್ ಬಳಿ 10 ಪ್ರಮುಖ ಪ್ರಶ್ನೆಗಳನ್ನು ಕೇಳಿದ್ದೆ, ದುರಾದೃಷ್ಟವಶಾತ್ ಅವರು ಒಂದೇ ಒಂದು ಪ್ರಶ್ನೆಗೂ ಉತ್ತರಿಸಿಲ್ಲ, ವಿಪಕ್ಷ ನಾಯಕನ ಪ್ರಶ್ನೆಗೆ ಉತ್ತರಿಸಲು ಆಗದ ಸಿಎಂ ಈಗ ಜನರ ಪ್ರಶ್ನೆಗೆ ಹೇಗೆ ಉತ್ತರಿಸುತ್ತಾರೆ ನೋಡೋಣ, ಜನ ಕಲ್ಯಾಣದ ಬಗ್ಗೆ ನಾನು ಪ್ರಶ್ನೆ ಮಾಡುತ್ತಲೇ ಇರುತ್ತೇನೆ ಎಂದರು.

ಬಿಹಾರ ಇಂದು ದುಃಸ್ಥಿತಿಯಲ್ಲಿದೆ
10 ಲಕ್ಷ ಮಂದಿಗೆ ಉದ್ಯೋಗ ಕಲ್ಪಿಸಿರುವುದಾಗಿ ನಿತೀಶ್ ಹೇಳಿದ್ದಾರೆ. ಆದರೆ ಪಟ್ಟಿ ನೀಡಲು ಹೆದರುತ್ತಿದ್ದಾರೆ ಏಕೆ? ಶಿಕ್ಷಕರ ನೇಮಕ ಕುರಿತ ಪತ್ರ ಕಾಣೆಯಾಗಿದೆ, ಪೊಲೀಸ್ ಇಲಾಖೆಯಲ್ಲಿ 50,000 ಹುದ್ದೆಗಳು ಖಾಲಿಯಿವೆ. ಒಂದು ಲಕ್ಷ ಜನತೆಗೆ 77 ಪೊಲೀಸರು ಲಭ್ಯವಾಗಿದ್ದಾರೆ ಅಷ್ಟೇ. ಬಿಹಾರದ ಆರೋಗ್ಯ ಇಲಾಖೆಯಲ್ಲೂ ನೇಮಕಾತಿಯಾಗಿಲ್ಲ. ಒಟ್ಟಾರೆ, ವಿವಿಧ ಇಲಾಖೆಗಳಲ್ಲಿ 4.5 ಲಕ್ಷ ಹುದ್ದೆಗಳು ಖಾಲಿಯಿವೆ. ಇನ್ನೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ನಿರ್ಮಿಸಿಲ್ಲ ಏಕೆ ಎಂದು ತೇಜಸ್ವಿ ಪ್ರಶ್ನಿಸಿದ್ದಾರೆ.
-
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
ಕರ್ನಾಟಕ PGCET 2026 ಅಧಿಸೂಚನೆ ಪ್ರಕಟ: ಎಂಬಿಎ ಸೇರಿ ವಿವಿಧ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಮಾರ್ಚ್ 23 ರಿಂದ ಅರ್ಜಿ ಆಹ್ವಾನ -
ವಿಶ್ವಮಾತೆ ಎನ್ನುತ್ತಾ ಶ್ರೀಚಾಮುಂಡೇಶ್ವರಿಯ ಕನ್ನಡ ಹಾಡು ಹಂಚಿಕೊಂಡ ಪ್ರಧಾನಿ ಮೋದಿ -
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications