ಮೇವು ಹಗರಣ 5ನೇ ಕೇಸ್: ಲಾಲೂ ಪ್ರಸಾದ್ ಯಾದವ್ ತಪ್ಪಿತಸ್ಥ
ರಾಂಚಿ, ಫೆ.15: ಮೇವು ಹಗರಣಕ್ಕೆ ಸಂಬಂಧಿಸಿದ ಐದನೇ ಪ್ರಕರಣದಲ್ಲಿ ಆರ್ಜೆಡಿ ಮುಖಂಡ ಲಾಲೂ ಪ್ರಸಾದ್ ಯಾದವ್ಗೆ ಹಿನ್ನಡೆಯಾಗಿದೆ. ಲಾಲೂ ಪ್ರಸಾದ್ ಯಾದವ್ ದೋಷಿ ಎಂದು ರಾಂಚಿಯ ವಿಶೇಷ ಕೇಂದ್ರೀಯ ತನಿಖಾ ದಳ (ಸಿಬಿಐ) ನ್ಯಾಯಾಲಯ ಮಂಗಳವಾರ ತೀರ್ಪು ನೀಡಿದೆ.
ಜಾರ್ಖಂಡ್ನ ಡೊರಾಂಡಾ ಖಜಾನೆಯಿಂದ 139 ಕೋಟಿ ರೂಪಾಯಿಗೂ ಹೆಚ್ಚು ಹಣವನ್ನು ಅಕ್ರಮವಾಗಿ ಹಿಂತೆಗೆದುಕೊಂಡ ಪ್ರಕರಣದಲ್ಲಿ ಅವರು ವಿಶೇಷ ಸಿಬಿಐ ನ್ಯಾಯಾಲಯದ ಮುಂದೆ ಖುದ್ದು ಹಾಜರಾಗಿದ್ದರು.
ನಾಲ್ಕನೇ ಪ್ರಕರಣ: ರಾಂಚಿಯ ಸಿಬಿಐ ವಿಶೇಷ ನ್ಯಾಯಾಲಯ 7 ವರ್ಷಗಳ ಜೈಲು ಶಿಕ್ಷೆ ವಿಧಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟು 30 ಲಕ್ಷ ರೂ.ಗಳ ದಂಡವನ್ನೂ ಹಾಕಲಾಗಿತ್ತು.

ಲಾಲೂ ಪ್ರಸಾದ್ ಯಾದವ್ ಬಿಹಾರದ ಮುಖ್ಯಮಂತ್ರಿಯಾಗಿದ್ದ ಸಮಯದಲ್ಲಿ ದುಮ್ಕಾ ಖಜಾನೆಯಲ್ಲಿ ನಡೆದ 3.13 ಕೋಟಿ ರೂ. ಅವ್ಯವಹಾರಕ್ಕೆ ಸಂಬಂಧಿಸಿದ ಹಗರಣ ಇದಾಗಿದೆ.
ಇದಕ್ಕೂ ಮುನ್ನ ಮೇವು ಹಗರಣಕ್ಕೆ ಸಂಬಂಧಿಸಿದಂತೆ ಹೊರಬಿದ್ದ ನಾಲಕು ಪ್ರಕರಣಗಳಲ್ಲೂ ದೋಷಿ ಎಂದು ಪರಿಗಣಿಸಲಾಗಿದ್ದ ಲಾಲೂ ಯಾದವ್, ಒಟ್ಟು 13.5 ವರ್ಷ ಜೈಲು ಶಿಕ್ಷೆಗೆ ಗುರಿಯಾಗಿದ್ದರು. ಇದೀಗ ಅದಕ್ಕೆ ಹೆಚ್ಚುವರಿ 7 ವರ್ಷ ಸೇರ್ಪಡೆಯಾದಂತಾಗಿದೆ. ಈ ಮೂಲಕ ನಾಲ್ಕು ಹಗರಣಗಳಿಂದ ಲಾಲೂ ಪ್ರಸಾದ್ ಯಾದವ್ ಒಟ್ಟು 20.5 ವರ್ಷ ಜೈಲು ಶಿಕ್ಷೆ ಅನುಭವಿಸಬೇಕಿದೆ.
ಮೂರು ಪ್ರಕರಣದಲ್ಲಿ ಜಾಮೀನು:
ಲಾಲೂ ಪ್ರಸಾದ್ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಚೈಬಾಸಾ ಖಜಾನೆಯಲ್ಲಿ 33.67 ಕೋಟಿ ಅವ್ಯವಹಾರ ಪ್ರಕರಣದ ಮೇಲೆ 2017ರಿಂದಲೂ ಜೈಲು ಶಿಕ್ಷೆ ಅನುಭವಿಸುತ್ತಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಲಾಲೂ ಸೇರಿ ಒಟ್ಟು 16 ಮಂದಿಗೆ ಜೈಲು ಶಿಕ್ಷೆ ವಿಧಿಸಲಾಗಿತ್ತು. ಈ ಬಹುಕೋಟಿ ಮೇವು ಹಗರಣದಲ್ಲಿ ನಾಲ್ಕು ಪ್ರಕರಣಗಳನ್ನು ಎದುರಿಸುತ್ತಿರುವ ಲಾಲೂ ಪ್ರಸಾದ್ ಅವರಿಗೆ ಮೂರು ಪ್ರಕರಣದಲ್ಲಿ ಈಗಾಗಲೇ ಜಾಮೀನು ದೊರೆತಿದೆ.
ಲಾಲೂ ಪ್ರಸಾದ್ ಆರೋಗ್ಯ ಹದಗೆಟ್ಟ ಕಾರಣ ಈಚೆಗೆ ಅವರನ್ನು ದೆಹಲಿಯ ಏಮ್ಸ್ಗೆ ದಾಖಲಿಸಲಾಗಿತ್ತು. ತಮ್ಮ ಶಿಕ್ಷೆಯ ಅವಧಿಯನ್ನು ಅರ್ಧ ಪೂರೈಸಿದ್ದು, ಜಾಮೀನು ನೀಡಬೇಕೆಂದು ಕೋರಿ ಅವರು ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಫೆಬ್ರವರಿಯಲ್ಲಿ ಜಾಮೀನು ತಿರಸ್ಕರಿಸಲಾಗಿತ್ತು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications