ಬಿಹಾರ ಆಶ್ರಮ ತಾಣಗಳಲ್ಲಿನ ರೇಪ್ ಕೇಸ್ ಸಿಬಿಐ ತನಿಖೆಗೆ
ನವದೆಹಲಿ, ನವೆಂಬರ್ 28: ಮುಜಾಫರ್ ಪುರ ಸೇರಿದಂತೆ ಬಿಹಾರದ 17ಕ್ಕೂ ಅಧಿಕ ಆಶ್ರಮ ತಾಣಗಳಲ್ಲಿ ನಡೆದಿರುವ ಅತ್ಯಾಚಾರ, ಲೈಂಗಿಕ ಕಿರುಕುಳ ಪ್ರಕರಣದ ತನಿಖೆಯನ್ನು ಸೆಂಟ್ರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ (ಸಿಬಿಐ) ಗೆ ವಹಿಸಿ ಸುಪ್ರೀಂಕೋರ್ಟ್ ಇಂದು(ನವೆಂಬರ್ 28) ಆದೇಶ ಹೊರಡಿಸಿದೆ.
ಈ ಪ್ರಕರಣದ ವಿಚಾರಣೆ ನಡೆಸಿರುವ ಸುಪ್ರೀಂಕೋರ್ಟ್, ಮಂಗಳವಾರದಂದು ಬಿಹಾರ್ ಸರ್ಕಾರಕ್ಕೆ ಛೀಮಾರಿ ಹಾಕಿತ್ತು. ಪ್ರಕರಣದ ತನಿಖೆ ಹಳ್ಳಹಿಡಿಯುವಂತೆ ಮಾಡಿದ್ದಕ್ಕೆ ತರಾಟೆಗೆ ತೆಗೆದುಕೊಂಡಿತ್ತು.

ಈ ಪ್ರಕರಣದಲ್ಲಿ ಎಫ್ಐಆರ್ ಹಾಕುವುದರಿಂದ ಹಿಡಿದು ಸೆಕ್ಷನ್ 377 ಸೇರಿಸುವ ತನಕ ಹಾಗೂ ಪೋಸ್ಕೋ ಕಾಯ್ದೆಯಡಿಯಲ್ಲಿ ಕೇಸು ದಾಖಲಿಸಿಕೊಂಡು ತನಿಖೆ ತೀವ್ರಗೊಳಿಸುವ ತನಕ ಎಲ್ಲದರಲ್ಲೂ ವಿಳಂಬ ನೀತಿ ಅನುಸರಿಸಲಾಗಿರುವುದೇಕೆ ಎಂದು ಸರ್ಕಾರವನ್ನು ಕೋರ್ಟ್ ಪ್ರಶ್ನಿಸಿತ್ತು.
ನಿತೀಶ್ ಕುಮಾರ್ ಅವರ ಕ್ಯಾಬಿನೆಟ್ ನಲ್ಲಿ ಸಮಾಜ ಕಲ್ಯಾಣ ಖಾತೆ ಸಚಿವೆಯಾಗಿದ್ದ ಮಂಜು ವರ್ಮಾ ಅವರು ಈ ಪ್ರಮುಖದ ಆರೋಪಿಯಾಗಿದ್ದರು. ಮಂಜು ಅವರು ತಮ್ಮ ಮೇಲೆ ಆರೋಪ ಕೇಳಿ ಬಂದ ಬಳಿಕ, ರಾಜೀನಾಮೆ ನೀಡಿ ನಾಪತ್ತೆಯಾಗಿದ್ದರು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯಾಗಿರುವ ಮಾಜಿ ಸಚಿವೆ ಮಂಜು ವರ್ಮಾ ಅವರನ್ನು ಇನ್ನು ಏಕೆ ಬಂಧಿಸಿಲ್ಲ ಎಂದು ಪ್ರಶ್ನಿಸಿದ್ದ ಸುಪ್ರೀಂಕೋರ್ಟ್, ಬಿಹಾರದ ಟಾಪ್ ಪೊಲೀಸ್ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿತ್ತು. ಇದಾದ ಬಳಿಕ ಮಂಜು ವರ್ಮಾ ಅವರು ಇತ್ತೀಚೆಗೆ ಕೋರ್ಟಿಗೆ ಶರಣಾಗಿದ್ದರು.
ಮಂಜು ವರ್ಮಾ ಅವರ ಪತ್ನಿ ಚಂದ್ರಶೇಖರ್ ಅವರು ಕಳೆದ ತಿಂಗಳು, ಮಂಜುಹಾಲ್ ಜಿಲ್ಲಾ ನ್ಯಾಯಾಲಯದ ಮುಂದೆ ಶರಣಾಗಿದ್ದಾರೆ. ಮುಜಾಫರ್ ಪುರದ ಆಶ್ರಯ ಕೇಂದ್ರಗಳಲ್ಲಿ ಅತ್ಯಾಚಾರ, ಲೈಂಗಿಕ ಕಿರುಕುಳಗಳು ನಡೆದಿದ್ದು, ಬ್ರಜೇಶ್ ಠಾಕೂರ್ ಎಂಬ ವ್ಯಕ್ತಿ ಮುಖ್ಯ ಆರೋಪಿಯಾಗಿದ್ದಾನೆ ಬ್ರಜೇಶ್ ಜತೆಗೆ ಚಂದ್ರಶೇಖರ್ ವರ್ಮಾ ಅವರು ಅನೇಕ ಬಾರಿ ಫೋನ್ ಕರೆ ಮೂಲಕ ಮಾತನಾಡಿರುವುದು ಪತ್ತೆಯಾಗಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications