ಪವಿತ್ರ ಗಂಗೆಯಲ್ಲಿ ತೇಲುತ್ತಿದೆ 150ಕ್ಕೂ ಹೆಚ್ಚು ಕೋವಿಡ್ ಸೋಂಕಿತರ ಶವ
ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ, ಹಾಗೆಯೇ ಕೊರೊನಾ ಸೋಂಕಿತರ ಅಂತ್ಯಕ್ರಿಯೆಗೂ ಸ್ಮಶಾನದೆದುರು ಸಾಲುಗಟ್ಟಿ ನಿಲ್ಲುವಂತಾಗಿದೆ. ಇನ್ನು ಗಂಗಾ ನದಿಯಲ್ಲಿ ಕೋವಿಡ್ ಮೃತ ದೇಹಗಳು ತೇಲುತ್ತಿರುವ ದೃಶ್ಯಗಳು ಕಂಡು ಬಂದಿದೆ.
ಹಾಗೆಯೇ ಅಂತ್ಯಸಂಸ್ಕಾರ ನಡೆಸದೇ ಗಂಗಾ ನದಿಯಲ್ಲಿ ಕೊರೊನಾ ಸೋಂಕಿತರ ಶವಗಳನ್ನು ಎಸೆಯುತ್ತಿರುವ ವಿಚಾರ ಬೆಳಕಿಗೆ ಬಂದಿದೆ.
ಅಂತ್ಯಕ್ರಿಯೆಗೆ ಹೆಚ್ಚಿನ ಹಣ ವಸೂಲಿ ಮಾಡುತ್ತಿರುವ ಹಿನ್ನಲೆ ಕುಟುಂಬಸ್ಥರು ಸೋಂಕಿತರ ಮೃತದೇಹವನ್ನು ಗಂಗಾ ನದಿಗೆ ಎಸೆಯುತ್ತಿದ್ದಾರೆ.
ಬಿಹಾರದ ಬುಕ್ಸರ್ ಗ್ರಾಮದ ಗಂಗಾ ನದಿ ತಟದಲ್ಲಿ 150ಕ್ಕೂ ಹೆಚ್ಚು ಮೃತದೇಹಗಳು ತೇಲುತ್ತಿದ್ದು, ಇದು ಗ್ರಾಮಸ್ಥರಲ್ಲಿ ಭೀತಿ ಮೂಡಿಸಿದೆ. ಈ ಕುರಿತು ತನಿಖೆ ನಡೆಸುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಉತ್ತರ ಪ್ರದೇಶದ ಪೂರ್ವದ ಗಡಿಗೆ ಹೊಂದಿಕೊಂಡಿರುವ ಬಕ್ಸಾರ್ನ ಚೌಸಾ ಗ್ರಾಮದಲ್ಲಿ ಈ ಘಟನೆ ನಡೆಯುತ್ತಿದೆ.

ಶವಸಂಸ್ಥಾರದ ದುಬಾರಿ ವೆಚ್ಚದಿಂದ ಬಡವರು ಶವಗಳನ್ನು ನದಿಗೆ ತೇಲಿಬಿಡುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಶವ ಸಂಸ್ಕಾರಕ್ಕೆ 30 ರಿಂದ 40 ಸಾವಿರವನ್ನು ಕೇಳುತ್ತಿದ್ದಾರೆ. ಇದು ಬಡವರಿಗೆ ಬಲು ಹೊರೆಯಾಗಿದ್ದು, ವಿಧಿಯಿಲ್ಲದೇ ಅವರು ಈ ಕಾರ್ಯಕ್ಕೆ ಮುಂದಾಗಿದ್ದಾರೆ. ಶವಗಳನ್ನು ಬೀದಿ ನಾಯಿಗಳು ಒಂದು ವೇಳೆ ತಿಂದರೆ ಅವುಗಳಿಗೂ ಸೋಂಕು ತಗಲುವ ಸಾಧ್ಯತೆ ಇದೆ ಎಂದಿದ್ದಾರೆ.
ಈ ಘಟನೆ ಬೆಳಕಿಗೆ ಬಂದಾಕ್ಷಣದ ಗ್ರಾಮಸ್ಥರು ಸ್ಥಳೀಯ ಅಧಿಕಾರಿಗಳಿಗೆ ತಿಳಿಸಿದ್ದಾರೆ. ನದಿಯಲ್ಲಿ 30 ರಿಂದ 40 ಹೆಣಗಳು ತೇಲುತ್ತಿದ್ದು, ಬೀದಿನಾಯಿಗಳು ತಡದಲ್ಲಿಯೇ ಅಲೆಯುತ್ತಿವೆ.
ಇದರಲ್ಲಿ ಅನೇಕ ಶವಗಳು ಕೋವಿಡ್ ಸೋಂಕಿತರದ್ದು ಎಂದು ಸಾಮಾಜಿಕ ಹೋರಾಟಗಾರ ಮತ್ತು ಸ್ಥಳೀಯ ವಕೀಲ ಅಶ್ವಿನ್ ವರ್ಮ ತಿಳಿಸಿದ್ದಾರೆ ಎಂದು ದಿ ಹಿಂದೂ ವರದಿ ಮಾಡಿದೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications