ಸ್ನೇಹಿತರ ಜೊತೆ ಚಾಟಿಂಗ್: ಊಟಕ್ಕೆ ಬಾ ಎಂದು ಒತ್ತಾಯಿಸಿದ್ದಕ್ಕೆ ಅಮ್ಮನಿಗೆ ಗುಂಡಿಕ್ಕಿದ ಮಗ
ಪಾಟ್ನಾ, ಜುಲೈ 23: ಊಟ ಮಾಡಲು ಬಾ ಎಂದು ಪದೇ ಪದೇ ಒತ್ತಾಯಿಸಿದ ಕಾರಣಕ್ಕಾಗಿ ಅಮ್ಮನಿಗೆ ಮಗನೇ ಗುಂಡಿಕ್ಕಿರುವ ಘಟನೆ ಬಿಹಾರದ ಪಾಟ್ನಾದಲ್ಲಿ ನಡೆದಿದೆ. ಮರಾಂಚಿ ಪೊಲೀಸ್ ಠಾಣೆ ವ್ಯಾಪ್ತಿಯ ಸೀತಾಪುರ ಗ್ರಾಮದಲ್ಲಿ ಮಂಗಳವಾರ ರಾತ್ರಿ ಸುಮಾರು 10.30ರ ಸಮಯದಲ್ಲಿ ಈ ಘಟನೆ ಸಂಭವಿಸಿದ್ದು, 20 ವರ್ಷದ ಯುವಕ ಹಾಗೂ ಆತನ ಬಳಿಯಿದ್ದ ಪಿಸ್ತೂಲನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
Recommended Video
ಹಲ್ಲೆಗೊಳಗಾದ ಮಹಿಳೆಯನ್ನು 55 ವರ್ಷದ ಮಂಜು ದೇವಿ ಎಂದು ಗುರುತಿಸಲಾಗಿದ್ದು ಆಕೆಯನ್ನು ಮೊದಲು ಬೆಗುಸರೈನ ಖಾಸಗಿ ಆಸ್ಪತ್ರೆಗೆ ಸೇರಿಸಲಾಯಿತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಬುಧವಾರ ಅವರನ್ನು ಪಾಟ್ನಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ (ಪಿಎಂಸಿಹೆಚ್) ಕಳುಹಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಅಂಗದ್ (20 ವರ್ಷ) ಮಂಗಳವಾರ ರಾತ್ರಿ ಮನೆ ಹೊರಗೆ ಕೆಲವು ಸ್ನೇಹಿತರ ಜೊತೆ ಸತತವಾಗಿ ಮಾತನಾಡಿಕೊಂಡು ನಿಂತಿದ್ದ. ಹೆಚ್ಚು ಸಮಯ ಆಗಿದ್ದರಿಂದ ಅವರ ತಾಯಿ ಪದೇ ಪದೇ ಊಟ ಮಾಡು ಬಾ ಎಂದು ಕೂಗುತ್ತಿದ್ದರು. ಎಷ್ಟೇ ಕರೆದರು ಮನೆಗೆ ಬರದಿದ್ದರಿಂದ ಮನೆ ಹೊರಗೆ ಬಂದು ಮಂಜು ದೇವಿ ಜೋರಾಗಿ ಕೂಗಲು ಶುರು ಮಾಡಿದರು. ಹಿಂದೆಯಿಂದ ಬಂದ ಮಗ ಆಕೆಗೆ ಶೂಟ್ ಮಾಡಿದ್ದಾನೆ. ಮಂಜು ದೇವಿ ಸ್ಥಳದಲ್ಲೇ ಕುಸಿದು ಬಿದ್ದಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಮನೆಯ ಹಿಂದೆ ಅರಣ್ಯ ಪ್ರದೇಶದಲ್ಲಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ವೇಳೆ ಪೊಲೀಸರ ಮೇಲೂ ಗುಂಡಿನ ದಾಳಿ ಮಾಡಲು ಪ್ರಯತ್ನಿಸಿದ್ದಾನೆ ಎಂದು ತಿಳಿದು ಬಂದಿದೆ.
ಅಂಗದ್ ಅವರ ತಂದೆ ಹಾಗು ಇಬ್ಬರು ಸಹೋದರರು ದೈನಂದಿನ ಕೂಲಿ ಕೆಲಸ ಮಾಡುತ್ತಾರೆ. ಕಳೆದ ಆರು ತಿಂಗಳ ಹಿಂದೆ 7500 ರೂಪಾಯಿಗೆ ಪಿಸ್ತೂಲ್ ಖರೀದಿಸಿದ್ದರು ಎಂದು ಪೊಲೀಸರಿಗೆ ಅಂಗದ್ ಹೇಳಿದ್ದಾನೆ. ಕೊರೊನಾ ಪರೀಕ್ಷೆ ನಡೆಸಿದ ನಂತರ ಆತನನ್ನು ಜೈಲಿಗೆ ಕಳುಹಿಸಲಾಗಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ












Click it and Unblock the Notifications