ಬಿಹಾರದಲ್ಲಿ ಚುನಾವಣೆ ಗೆದ್ದ ನಟ ಸುಶಾಂತ್ ಸಿಂಗ್ ಕಸಿನ್
ಪಾಟ್ನಾ, ನ. 11: ಬಾಲಿವುಡ್ ನಟ ಸುಶಾಂತ್ ಸಿಂಗ್ ಅವರ ನಿಧನದಿಂದ ಶೋಕತಪ್ತರಾಗಿದ್ದ ಬಿಹಾರದಲ್ಲಿರುವ ಅವರ ಕುಟುಂಬಕ್ಕೆ ಇಂದು ಸಂತಸದ ಸುದ್ದಿ ಸಿಕ್ಕಿದೆ. ಸುಶಾಂತ್ ಅವರ ಕಸಿನ್ ನೀರಜ್ ಅವರು ಈ ಬಾರಿ ವಿಧಾನಸಭೆಗೆ ಆಯ್ಕೆ ಬಯಸಿ ಸ್ಪರ್ಧಿಸಿ, ಗೆದ್ದಿದ್ದಾರೆ.
ಸುಶಾಂತ್ ಸಿಂಗ್ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಸರ್ಕಾರ ಹಾಗೂ ಬಿಹಾರ ಪೊಲೀಸರ ನಡುವೆ ತಿಕ್ಕಾಟ ನಡೆದಿತ್ತು. ನಂತರ ಸುಶಾಂತ್ ಸಿಂಗ್ ಪ್ರಕರಣವನ್ನು ಬಿಹಾರ ಚುನಾವಣೆಯಲ್ಲಿ ಮುಖ್ಯವಿಷಯವಾಗಿ ಪಕ್ಷಗಳು ಬಳಸಿಕೊಳ್ಳಲಿವೆ ಎಂದೇ ನಿರೀಕ್ಷಿಸಲಾಗಿತ್ತು. ಆದರೆ, ಬಿಜೆಪಿ ಸೇರಿದಂತೆ ಶಿವಸೇನಾ ಕೂಡಾ ಬಿಹಾರ ವಿಧಾನಸಭೆ ಚುನಾವಣೆ ಪ್ರಚಾರದಲ್ಲಿ ಈ ಬಗ್ಗೆ ಹೆಚ್ಚಿನ ಮಹತ್ವ ನೀಡಲಿಲ್ಲ.
ಸುಶಾಂತ್ ಸಿಂಗ್ ರಜಪೂತ್ ಅವರ ಕಸಿನ್ ನೀರಜ್ ಕುಮಾರ್ ಸಿಂಗ್ ಅಲಿಯಾಸ್ ಬಬ್ಲು ಅವರು ಬಿಜೆಪಿ ಟಿಕೆಟ್ ಪಡೆದು ಛಾತಾಪುರ್ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಸಮೀಪದ ಪ್ರತಿಸ್ಪರ್ಧಿ ಎಐಎಂಐಎಂನ ಆಲಂ ಹಾಗೂ ಆರ್ ಜೆಡಿಯ ವಿಪಿನ್ ಕುಮಾರ್ ಅವರನ್ನು ಹಿಂದಿಕ್ಕಿ ನೀರಜ್ ಗೆಲುವು ದಾಖಲಿಸಿದ್ದಾರೆ.

ಗೆಲುವಿನ ಬಗ್ಗೆ ಸುಶಾಂತ್ ಕುಟುಂಬದ ಮಿತ್ರ ನಿಲೋತ್ಪಲ್ ಅವರು ಟ್ವೀಟ್ ಮಾಡಿ ಎಸ್ಎಸ್ಆರ್ ಅವರ ಸೋದರ ನೀರಜ್ ಬಬ್ಲು ಗೆಲುವು ಸಾಧಿಸುತ್ತಿದ್ದಾರೆ. ಚುನಾವಣೆ ಸಂದರ್ಭದಲ್ಲೇ ಅವರಿಗೆ ಹೃದಯಬೇನೆ ಕಾಣಿಸಿಕೊಂಡಿತ್ತು. ಆಂಜಿಯೋಪ್ಲಾಸ್ಟಿ ಮಾಡಲಾಗಿತ್ತು ಎಂದಿದ್ದಾರೆ.
ಸುಮಾರು 14 ಗಂಟೆಗಳ ಮತ ಎಣಿಕೆ ನಂತರ ಮಹಾಘಟಬಂಧನ್ ವಿರುದ್ಧ ಎನ್ಡಿಎ ಬಹುಮತ ಸಾಧಿಸಿತ್ತು 122 ದಾಟಿ, 125 ಸ್ಥಾನ ಗಳಿಸಿದ್ದು, ನಿತೀಶ್ ಕುಮಾರ್ 5ನೇ ಬಾರಿ ಸಿಎಂ ಆಗಿ ಪದಗ್ರಹಣಕ್ಕೆ ಸಿದ್ಧತೆ ನಡೆಸಿದ್ದಾರೆ.
ಬಿಹಾರದ ಸುಪೌಲ್ ಜಿಲ್ಲೆಯ ಕೋಶಿ ಪ್ರಾಂತ್ಯದ ಛಾತ್ ಪುರ್ ವಿಧಾನಸಭಾ ಕ್ಷೇತ್ರದಲ್ಲಿ 2015ರಲ್ಲೂ ಬಿಜೆಪಿಯ ನೀರಜ್ ಕುಮಾರ್ ಗೆಲುವು ಸಾಧಿಸಿದ್ದರು. ಆರ್ ಜೆಡಿಯಲ್ಲಿದ್ದ ಆಲಂ ವಿರುದ್ಧ 9,292 ಮತಗಳ ಅಂತರ ಜಯ ಲಭಿಸಿತ್ತು.
2020ರಲ್ಲಿ ನೀರಜ್ 93570 ಮತಗಳು (46.39% ಮತ), ವಿಪಿನ್ 72712 ಮತ(36.18%) ಮತ ಪಡೆದಿದ್ದಾರೆ,. ನೀರಜ್ ತಮ್ಮ ಶಾಸಕ ಸ್ಥಾನ ಉಳಿಸಿಕೊಂಡಿದ್ದಾರೆ.
Recommended Video
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications