ಬಿಹಾರ: ಮಾವೋವಾದಿ ನಾಯಕ ಸಂದೀಪ್ ಯಾದವ್ ಶವ ಪತ್ತೆ
ಪಟ್ನಾ: ಹಲವು ರಾಜ್ಯಗಳ ಪೊಲೀಸರಿಗೆ ಬೇಕಾಗಿದ್ದ ಮಾವೋವಾದಿ ಸಂಘಟನೆಯ ಪ್ರಮುಖ ನಾಯಕ ಸಂದೀಪ್ ಯಾದವ್ ಅಲಿಯಾಸ್ ವಿಜಯ್ ಯಾದವ್ ಮೃತದೇಹದ ಬಿಹಾರದ ಗಯಾ ಜಿಲ್ಲೆಯ ಲುತುವಾ ಕಾಡಿನಲ್ಲಿ ಬುಧವಾ ರಾತ್ರಿ ಪತ್ತೆಯಾಗಿದೆ.
ಸಂದೀಪ್ ಯಾದವ್(56) ಬಿಹಾರ, ಜಾರ್ಖಂಡ್, ಚತ್ತೀಸಘಡ, ಪಶ್ಚಿಮ ಬಂಗಾಳ, ಆಂಧ್ರ ಪ್ರದೇಶ ಸೇರಿದಂತೆ ಒಟ್ಟು ಐದು ರಾಜ್ಯಗಳ ಪೊಲೀಸರಿಗೆ ಬೇಕಾಗಿದ್ದ. 1990 ರಿಂದ ಮಾವೋವಾದಿ ಸಂಘಟನೆಯಲ್ಲಿ ಸಕ್ರಿಯನಾಗಿದ್ದ ಈತ ಸಂಘಟನೆಯ ಕೇಂದ್ರ ವಲಯದ ಉಸ್ತುವರಿಯಾಗಿದ್ದ.
"ಸಂದೀಪ್ ಯಾದವ್ ಮೃತದೇಹ ಗಯಾದ ಲುತುವಾ ಕಾಡಿನಲ್ಲಿ ಸಿಆರ್ ಪಿಎಫ್ ಪೊಲೀಸರಿಗೆ ದೊರೆತಿದೆ. ನಂತರ ಮೃತದೇಹವನ್ನು ಗಯಾದ ಅನುಗ್ರಹ ನಾರಾಯಣ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಸಾಗಿಸಲಾಯಿತು. ಈತನ ಕುಟುಂಬಸ್ಥರು ಶವವನ್ನು ಗುರುತಿಸಿದ್ದಾರೆ. ಮರಣೋತ್ತರ ಪರೀಕ್ಷೆಯ ನಂತರ ಸಾವಿಗೆ ನಿಖರ ಕಾರಣ ತಿಳಿದುಬರಲಿದೆ,'' ಎಂದು ಗಯಾ ಹಿರಿಯ ಎಸ್ಪಿ ಹರ್ ಪೀತ್ ಕೌರ್ ಮಾಹಿತಿ ನೀಡಿದ್ದಾರೆ.

ಸಂದೀಪ್ ಯಾದವ್ ಕಳೆದ 27 ವರ್ಷಗಳಿಂದ ಪೊಲೀಸರ ಕೈಗೆ ಸಿಗದೇ ತಪ್ಪಿಸಿಕೊಂಡಿದ್ದ. ಈತನ ವಿರುದ್ಧ 24ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ.
ಬಿಹಾರ ಸರಕಾರ ಸಂದೀಪ್ ಯಾದವ್ ತಲೆಗೆ ಐದು ಲಕ್ಷ ರು. ಬಹುಮಾನ ಘೋಷಿಸಿತ್ತು. ಅಲ್ಲದೇ ಜಾರ್ಖಂಡ್ ಸರಕಾರ ಈತನನ್ನು ಜೀವಂತವಾಗಿ ಅಥವಾ ಮರಣವಾಗಿ ಹಿಡಿದುಕೊಟ್ಟರೆ 25 ಲಕ್ಷ ರು. ಬಹುಮಾನ ನೀಡುವುದಾಗಿ ಘೋಷಿಸಿತ್ತು.

ಹಲವು ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದ ಸಂದೀಪ್ ಯಾದವ್, ಔಷಧಗಳ ಅಡ್ಡ ಪರಿಣಾಮದಿಂದ ಮೃತಪಟ್ಟಿರುವ ಸಾಧ್ಯತೆ ಇದೆ ಎಂದು ಬಿಹಾರ ಪೊಲೀಸ್ ಮೂಲಗಳು ತಿಳಿಸಿವೆ.
ಗಯಾದ ಲುತುವಾ ಗ್ರಾಮ ಮೂಲದ ಸಂದೀಪ್ ಯಾದವ್ ಪತ್ನಿ ಶಿಕ್ಷಕಿಯಾಗಿದ್ದಾರೆ. ದಂಪತಿಯ ಪುತ್ರಿ ಮತ್ತು ಅಳಿಯ ದೆಹಲಿಯಲ್ಲಿ ವಾಸವಾಗಿದ್ದಾರೆ ಎಂದು ವರದಿಯಾಗಿದೆ.
(ಒನ್ಇಂಡಿಯಾ ಸುದ್ದಿ)
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications