ಬಿಹಾರ: ಮಾವೋವಾದಿ ನಾಯಕ ಸಂದೀಪ್ ಯಾದವ್ ಶವ ಪತ್ತೆ
ಪಟ್ನಾ: ಹಲವು ರಾಜ್ಯಗಳ ಪೊಲೀಸರಿಗೆ ಬೇಕಾಗಿದ್ದ ಮಾವೋವಾದಿ ಸಂಘಟನೆಯ ಪ್ರಮುಖ ನಾಯಕ ಸಂದೀಪ್ ಯಾದವ್ ಅಲಿಯಾಸ್ ವಿಜಯ್ ಯಾದವ್ ಮೃತದೇಹದ ಬಿಹಾರದ ಗಯಾ ಜಿಲ್ಲೆಯ ಲುತುವಾ ಕಾಡಿನಲ್ಲಿ ಬುಧವಾ ರಾತ್ರಿ ಪತ್ತೆಯಾಗಿದೆ.
ಸಂದೀಪ್ ಯಾದವ್(56) ಬಿಹಾರ, ಜಾರ್ಖಂಡ್, ಚತ್ತೀಸಘಡ, ಪಶ್ಚಿಮ ಬಂಗಾಳ, ಆಂಧ್ರ ಪ್ರದೇಶ ಸೇರಿದಂತೆ ಒಟ್ಟು ಐದು ರಾಜ್ಯಗಳ ಪೊಲೀಸರಿಗೆ ಬೇಕಾಗಿದ್ದ. 1990 ರಿಂದ ಮಾವೋವಾದಿ ಸಂಘಟನೆಯಲ್ಲಿ ಸಕ್ರಿಯನಾಗಿದ್ದ ಈತ ಸಂಘಟನೆಯ ಕೇಂದ್ರ ವಲಯದ ಉಸ್ತುವರಿಯಾಗಿದ್ದ.
"ಸಂದೀಪ್ ಯಾದವ್ ಮೃತದೇಹ ಗಯಾದ ಲುತುವಾ ಕಾಡಿನಲ್ಲಿ ಸಿಆರ್ ಪಿಎಫ್ ಪೊಲೀಸರಿಗೆ ದೊರೆತಿದೆ. ನಂತರ ಮೃತದೇಹವನ್ನು ಗಯಾದ ಅನುಗ್ರಹ ನಾರಾಯಣ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಸಾಗಿಸಲಾಯಿತು. ಈತನ ಕುಟುಂಬಸ್ಥರು ಶವವನ್ನು ಗುರುತಿಸಿದ್ದಾರೆ. ಮರಣೋತ್ತರ ಪರೀಕ್ಷೆಯ ನಂತರ ಸಾವಿಗೆ ನಿಖರ ಕಾರಣ ತಿಳಿದುಬರಲಿದೆ,'' ಎಂದು ಗಯಾ ಹಿರಿಯ ಎಸ್ಪಿ ಹರ್ ಪೀತ್ ಕೌರ್ ಮಾಹಿತಿ ನೀಡಿದ್ದಾರೆ.

ಸಂದೀಪ್ ಯಾದವ್ ಕಳೆದ 27 ವರ್ಷಗಳಿಂದ ಪೊಲೀಸರ ಕೈಗೆ ಸಿಗದೇ ತಪ್ಪಿಸಿಕೊಂಡಿದ್ದ. ಈತನ ವಿರುದ್ಧ 24ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ.
ಬಿಹಾರ ಸರಕಾರ ಸಂದೀಪ್ ಯಾದವ್ ತಲೆಗೆ ಐದು ಲಕ್ಷ ರು. ಬಹುಮಾನ ಘೋಷಿಸಿತ್ತು. ಅಲ್ಲದೇ ಜಾರ್ಖಂಡ್ ಸರಕಾರ ಈತನನ್ನು ಜೀವಂತವಾಗಿ ಅಥವಾ ಮರಣವಾಗಿ ಹಿಡಿದುಕೊಟ್ಟರೆ 25 ಲಕ್ಷ ರು. ಬಹುಮಾನ ನೀಡುವುದಾಗಿ ಘೋಷಿಸಿತ್ತು.

ಹಲವು ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದ ಸಂದೀಪ್ ಯಾದವ್, ಔಷಧಗಳ ಅಡ್ಡ ಪರಿಣಾಮದಿಂದ ಮೃತಪಟ್ಟಿರುವ ಸಾಧ್ಯತೆ ಇದೆ ಎಂದು ಬಿಹಾರ ಪೊಲೀಸ್ ಮೂಲಗಳು ತಿಳಿಸಿವೆ.
ಗಯಾದ ಲುತುವಾ ಗ್ರಾಮ ಮೂಲದ ಸಂದೀಪ್ ಯಾದವ್ ಪತ್ನಿ ಶಿಕ್ಷಕಿಯಾಗಿದ್ದಾರೆ. ದಂಪತಿಯ ಪುತ್ರಿ ಮತ್ತು ಅಳಿಯ ದೆಹಲಿಯಲ್ಲಿ ವಾಸವಾಗಿದ್ದಾರೆ ಎಂದು ವರದಿಯಾಗಿದೆ.
(ಒನ್ಇಂಡಿಯಾ ಸುದ್ದಿ)
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications