ಅಲ್ ಖೈದಾ ಉಗ್ರರ ಸೆರೆ ಬೆನ್ನಲ್ಲೇ ಬಿಹಾರದಲ್ಲಿ ಹೈಅಲರ್ಟ್
ಪಾಟ್ನಾ, ಜುಲೈ 12: ಉತ್ತರ ಪ್ರದೇಶದ ರಾಜಧಾನಿ ಲಕ್ನೋದಲ್ಲಿ ಅಲ್ ಖೈದಾ ಉಗ್ರ ಸಂಘಟನೆ ಜೊತೆ ನಂಟು ಹೊಂದಿರುವ ಇಬ್ಬರು ಶಂಕಿತರನ್ನು ಬಂಧಿಸಿರುವ ಬೆನ್ನಲ್ಲೇ ಬಿಹಾರದಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳು ಹಾಗೂ ರೈಲ್ವೆ ನಿಲ್ದಾಣಗಳಲ್ಲಿ ತೀವ್ರ ನಿಗಾ ವಹಿಸಲಾಗಿದೆ.
"ಬಿಹಾರದ ಎಲ್ಲಾ ಸೂಕ್ಷ್ಮ ಪ್ರದೇಶಗಳು ಹಾಗೂ ರಾಜ್ಯದ ಗಡಿ ಪ್ರದೇಶಗಳಲ್ಲಿ ಕಟ್ಟೆಚ್ಚರ ವಹಿಸುವಂತೆ," ಬಿಹಾರ ಪೊಲೀಸ್ ಮತ್ತು ಸಿಐಡಿ ವಿಶೇಷ ತಂಡದ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಉತ್ತರ ಪ್ರದೇಶದಲ್ಲಿ ಉಗ್ರರ ಬಂಧನದ ಹಿನ್ನೆಲೆ ರಾಜ್ಯದಲ್ಲೂ ಶಂಕಿತರ ಮೇಲೆ ಹದ್ದಿನ ಕಣ್ಣು ಇರಿಸಲಾಗಿದೆ. ಭಾನುವಾರವಷ್ಟೇ ಉತ್ತರ ಪ್ರದೇಶದಲ್ಲಿ ಆತ್ಮಾಹುತಿ ಬಾಂದ್ ದಾಳಿಗೆ ಸಂಚು ರೂಪಿಸಿದ್ದರು ಎನ್ನಲಾದ ಇಬ್ಬರು ಅಲ್ ಖೈದಾ ಸಂಘಟನೆ ಶಂಕಿತರನ್ನು ಭಯೋತ್ಪಾದನಾ ನಿಗ್ರಹ ಪಡೆ ಬಂಧಿಸುವಲ್ಲಿ ಯಶಸ್ವಿಯಾಗಿತ್ತು.
ಉತ್ತರ ಪ್ರದೇಶದಲ್ಲಿ ಉಗ್ರ ದಾಳಿ ಸುಳಿವು ಸಿಕ್ಕ ಹಿನ್ನೆಲೆ ಭಯೋತ್ಪಾದನಾ ನಿಗ್ರಹ ದಳದ ಸಿಬ್ಬಂದಿ ಲಕ್ನೋದ ಹಲವು ಪ್ರದೇಶಗಳಲ್ಲಿ ಒಂದು ವಾರದಿಂದ ತೀವ್ರ ತಪಾಸಣೆ ನಡೆಸಿದ್ದರು. ಎಟಿಎಸ್ ಐಜಿ ಜಿ ಕೆ ಗೋಸ್ವಾಮಿ ನೇತೃತ್ವದ ತಂಡವು ಕಕೋರಿ ಪ್ರದೇಶದ ನಿವಾಸದಲ್ಲಿ ಅಡಗಿ ಕುಳಿತಿದ್ದ ಇಬ್ಬರು ಶಂಕಿತರನ್ನು ಬಂಧಿಸಿದ್ದು, ಸಜೀವ ಬಾಂಬ್ ಅನ್ನು ನಿಷ್ಕ್ರಿಯಗೊಳಿಸಿದ್ದರು. 6 ರಿಂದ 7 ಕೆಜಿ ಸ್ಫೋಟಕಗಳನ್ನು ವಶಕ್ಕೆ ಪಡೆದುಕೊಂಡಿದ್ದರು.

ಬಂಧಿತ ಉಗ್ರರ ಕುರಿತು ಮಾಹಿತಿ:
"ಮಿನಾಜ್ ಅಹ್ಮದ್ ಮತ್ತು ನಾಸಿರುದ್ದೀನ್ ಎಂದು ಬಂಧಿತರನ್ನು ಗುರುತಿಸಲಾಗಿದೆ. ಇಬ್ಬರೂ ಲಕ್ನೋದ ಕಕೋರಿ ಪ್ರದೇಶದ ನಿವಾಸಿಗಳಾಗಿದ್ದು, ಅಲ್ ಖೈದಾ ಅನ್ಸಾರ್ ಖಜ್ವಾತ್ ಉಲ್ ಹಿಂದ್ ಸಂಘಟನೆಯ ಆತ್ಮಾಹುತಿ ದಾಳಿಯ ಸದಸ್ಯರಾಗಿದ್ದಾರೆ, ಉಳಿದ ಉಗ್ರರ ಸೆರೆಗೆ ಬಲೆ ಬೀಸಲಾಗಿದೆ,'' ಎಂದು ಎಡಿಜಿಪಿ (ಕಾನೂನು ಮತ್ತು ಸುವ್ಯವಸ್ಥೆ) ಪ್ರಶಾಂತ್ ಕುಮಾರ್ ತಿಳಿಸಿದ್ದಾರೆ.
ಉತ್ತರ ಪ್ರದೇಶದಲ್ಲಿ ಹೈಅಲರ್ಟ್ ಜಾರಿ:
ಉತ್ತರ ಪ್ರದೇಶದ ಲಕ್ನೋ ಸೇರಿದಂತೆ ಪ್ರಮುಖ ನಗರಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಹರ್ದೋಯಿ, ಸೀತಾಪುರ್, ಬಾರಾಬಂಕಿ, ಉನ್ನಾವೋ ಹಾಗೂ ರಾಯ್ ಬರೇಲಿ ಜಿಲ್ಲೆಗಳಲ್ಲಿ ತೀವ್ರ ನಿಗಾವಹಿಸಲಾಗಿದ್ದು, ಭದ್ರತೆಯನ್ನು ಹೆಚ್ಚಿಸಲಾಗಿದೆ.
-
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ












Click it and Unblock the Notifications