ಮೃತ ತಾಯಿಯ ಎಬ್ಬಿಸಲು ಕಂದನ ವಿಫಲ ಪ್ರಯತ್ನ: ರೈಲ್ವೆ ನಿಲ್ದಾಣದಲ್ಲಿ ಹೃದಯ ವಿದ್ರಾವಕ ಘಟನೆ
ಮುಜಫರ್ಪುರ, ಮೇ 28: ಎರಡು ವರ್ಷದ ಕಂದಮ್ಮನಿಗೆ ತಾಯಿ ಸತ್ತಿದ್ದಾಳೆ ಎಂಬ ಪರಿವೇ ಇಲ್ಲದೆ ತಾಯಿಯನ್ನು ಎಬ್ಬಿಸುವ ವಿಫಲ ಪ್ರಯತ್ನ ನಡೆಸುತ್ತಿದ್ದ ಮನಕಲಕುವ ಘಟನೆ ಬಿಹಾರ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ.
Recommended Video
ಮಹಿಳೆಯೊಬ್ಬಳು ತನ್ನ ಕುಟುಂಬದವರ ಜೊತೆಗೆ ರೈಲಿನಲ್ಲಿ ಬರುವಾಗ ತಾಯಿ ಮೃತಪಟ್ಟಿದ್ದಾಳೆ. ಆಕೆಯ ಮೃತದೇಹವನ್ನು ರೈಲ್ವೆ ನಿಲ್ದಾಣದ ನೆಲದ ಮೇಲೆ ಮಲಗಿಸಲಾಗಿತ್ತು.ಆದರೆ ಮಗು ತಾಯಿ ತನ್ನ ಜೊತೆ ಆಟವಾಡುತ್ತಿದ್ದಾಳೆ ಎಂದು ತಿಳಿದು ಆಕೆಯ ಚಾದರ ಎಳೆಯುವುದು, ಆಕೆಯ ಮೈಮೇಲೆ ಹೊರಳಾಡಿ ಎಬ್ಬಿಸಲು ಪ್ರಯತ್ನ ನಡೆಸುತ್ತಿತ್ತು.
छोटे बच्चे को नहीं मालूम कि जिस चादर के साथ वह खेल रहा है वह हमेशा के लिए मौत की गहरी नींद सो चुकी माँ का कफ़न है। 4 दिन ट्रेन में भूखे-प्यासे रहने के कारण इस माँ की मौत हो गयी। ट्रेनों में हुई इन मौतों का ज़िम्मेवार कौन? विपक्ष से कड़े सवाल पूछे जाने चाहिए कि नहीं?? pic.twitter.com/pdiaHuS9vf
— Sanjay Yadav (@sanjuydv) May 27, 2020
ಲಾಕ್ಡೌನ್ನಿಂದಾಗಿ ಲಕ್ಷಾಂತರ ವಲಸೆ ಕಾರ್ಮಿಕರು ಎದುರಿಸುತ್ತಿರುವ ಸಮಸ್ಯೆಯನ್ನು ಕಣ್ಣಿಗೆ ಕಟ್ಟುವಂತೆ ಬಿಂಬಿಸುವ ಈ ವಿಡಿಯೋ ವೈರಲ್ ಆಗಿದೆ. ವಿಡಿಯೋದಲ್ಲಿ ರೈಲ್ವೆ ಪ್ಲಾಟ್ಫಾರಂನಲ್ಲಿ ಮಗುವೊಂದು ನೆಲದ ಹಾಸಿನ ಮೇಲೆ ಹಾಕಲಾದ ಮಹಿಳೆಯ ಮೇಲೆ ಹೊದಿಸಿರುವ ಚಾದರ ತೆಗೆದು ಎಬ್ಬಿಸಲು ಯತ್ನಿಸುತ್ತಿದೆ.
ಅದೇ ಚಾದರವನ್ನು ತನ್ನ ಮುಖಕ್ಕೆ ಹೊಚ್ಚಿಕೊಂಡು ಆಟವಾಡುತ್ತಿದೆ. ಈ ದೃಶ್ಯವನ್ನು ನೋಡಿ ಪ್ರಯಾಣಿಕರು, ಟ್ವಿಟ್ಟಿಗರು ಮರುಕ ವ್ಯಕ್ತಪಡಿಸಿದ್ದಾರೆ.

ತೇಜಸ್ವಿ ಯಾದವ್ ಆಪ್ತ ಸಂಜಯ್ ಯಾದವ್ ಹೇಳಿದ್ದೇನು?
ಶ್ರಮಿಕ್ ರೈಲಿನಲ್ಲಿ ತಮ್ಮ ತವರು ರಾಜ್ಯಗಳಿಗೆ ಮರಳುತ್ತಿರುವ ವಲಸೆ ಕಾರ್ಮಿಕರ ಪೈಕಿ ಕಳೆದ ನಾಲ್ಕು ದಿನಗಳಿಂದ ಅನ್ನ-ನೀರು ಇಲ್ಲದೆ ತಾಯಿ ಮೃತಪಟ್ಟಿದ್ದಾಳೆ. ಆದರೆ, ಈ ಬಗ್ಗೆ ಏನೂ ಅರಿಯದ ಪುಟ್ಟ ಕಂದಮ್ಮ ತಾಯಿ ಮಲಗಿದ್ದಾಳೆ ಎಂದುಕೊಂಡು ತಾಯಿಯನ್ನು ಎಬ್ಬಿಸುವ ಪ್ರಯತ್ನ ಮಾಡುತ್ತಿದೆ. ಇದಕ್ಕೆ ಯಾರು ಹೊಣೆ? ಪ್ರತಿಪಕ್ಷಗಳು ಈ ಕಹಿ ಘಟನೆ ಕುರಿತಾಗಿ ಸರ್ಕಾರವನ್ನು ಪ್ರಶ್ನಿಸಬಾರದೇ? ಎಂದು ಕಿಡಿಕಾರಿದ್ದಾರೆ.

ವಲಸೆ ಕಾರ್ಮಿಕರಿಗೆ ಆಹಾರ ಸರಬರಾಜು
ವಲಸೆ ಕಾರ್ಮಿಕರಿಗೆ ರೈಲು ಪ್ರಯಾಣದ ವೇಳೆ ಆಹಾರ, ನೀರು ಸೇರಿದಂತೆ ಎಲ್ಲಾ ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದೆ. ಆದರೆ ತನ್ನ ಸಂಬಂಧಿಕನ ಜೊತೆಗೆ ಅಹಮದಾಬಾದಿನಿಂದ ಮುಜಫರ್ಪುರಕ್ಕೆ ಬರುತ್ತಿದ್ದ ಸಂತ್ರಸ್ತ ಮಹಿಳೆ ರೈಲಿನಲ್ಲೇ ಸಾವನ್ನಪ್ಪಿದ್ದಾಳೆ. ಆಕೆಯ ಮರಣೋತ್ತರ ಪರೀಕ್ಷೆಗಾಗಿ ಆಕೆಯನ್ನು ಪ್ಲಾಟ್ಫಾರಂನಲ್ಲಿ ಮಲಗಿಸಲಾಗಿತ್ತು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಗುಜರಾತ್ನಿಂದ ರೈಲು ಹತ್ತಿದ್ದರು
ಗುಜರಾತ್ ನಿಂದ ರೈಲು ಹತ್ತಿದ್ದ ಈ ಮಹಿಳೆಯ ಜೊತೆಯಲ್ಲಿ ಆಕೆಯ ಸಹೋದರಿ ಮತ್ತು ಸಹೋದರಿಯ ಪತಿ ಇಬ್ಬರೂ ಇದ್ದರು. ಆಹಾರ ಹಾಗೂ ನೀರು ಸಿಗದ ಪರಿಣಾಮ ಆಕೆ ಬಿಹಾರದ ಮುಜಪ್ಫರ್ ಪುರ ತಲುಪಿದ ಕೆಲವೇ ಕ್ಷಣಗಳಲ್ಲಿ ಮೃತಪಟ್ಟಿದ್ದು, ಮೃತ ದೇಹವನ್ನು ಪ್ಲಾಟ್ ಫಾರ್ಮ್ ನಲ್ಲೇ ಇರಿಸಲಾಗಿತ್ತು.

ಆಹಾರ, ನೀರಿನ ಸಮಸ್ಯೆಯಾಗಿರಲಿಲ್ಲ
ಆದರೆ ಈ ಘಟನೆಯ ಬಗ್ಗೆ ಪೊಲೀಸರು ಬೇರೆಯದ್ದೇ ಮಾಹಿತಿ ನೀಡಿದ್ದಾರೆ. ಮುಜಾಫ್ಫರ್ ಪುರದ ಸರ್ಕಾರಿ ರೈಲ್ವೆ ಪೊಲೀಸ್ ವಿಭಾಗದ ರಮಾಕಾಂತ್ ಉಪಾಧ್ಯಾಯ ಈ ಬಗ್ಗೆ ಮಾಹಿತಿ ನೀಡಿದ್ದು, ಈ ಘಟನೆ ಮೇ.25 ರಂದು ಅಹ್ಮದಾಬಾದ್ ನಿಂದ ಮುಜಾಫ್ಫರ್ ಪುರಕ್ಕೆ ವಿಶೇಷ ಶ್ರಮಿಕ್ ರೈಲಿನಲ್ಲಿ ಬಂದಾಗ ನಡೆದಿದೆ. "ನಮ್ಮ ಸಂಬಂಧಿ ಮಹಿಳೆ ರೈಲಿನಲ್ಲಿ ಏಕಾ ಏಕಿ ಮೃತಪಟ್ಟಿದ್ದಾರೆ. ರೈಲಿನಲ್ಲಿ ನಮಗೆ ಆಹಾರ, ನೀರಿಗೆ ಯಾವುದೇ ಸಮಸ್ಯೆಯಾಗಲಿಲ್ಲ" ಎಂದು ಮೃತ ಮಹಿಳೆಯ ಸಂಬಂಧಿಕರು ಹೇಳಿರುವುದನ್ನು ಪೊಲೀಸ್ ಅಧಿಕಾರಿ ಉಲ್ಲೇಖಿಸಿದ್ದಾರೆ.
-
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು? -
ವೈಭವ್ ಸೂರ್ಯವಂಶಿ ಕುರಿತು ಬಿಸಿಸಿಐಗೆ ಹೋಯ್ತು ವಿಶೇಷ ಮನವಿ; ಟೀಮ್ ಇಂಡಿಯಾ ಸೇರ್ತಾರಾ ಯುವ ಪ್ರತಿಭೆ? -
ಒಂದು ಬಟನ್ ಒತ್ತಿದರೆ ಬದಲಾಗುತ್ತೆ BMW ಕಾರಿನ ನಂಬರ್ ಪ್ಲೇಟ್, ಹೈಟೆಕ್ ಕಳ್ಳಾಟದ ವಿಡಿಯೋ ಭಾರಿ ವೈರಲ್ -
Asha Bhosle: ಗಾನ ಕೋಗಿಲೆ ಆಶಾ ಭೋಸ್ಲೆ ನಿಧನ: ದೇಶವೇ ಶೋಕದಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಫ್ಯಾನ್ಸ್ ಕಂಬನಿ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
ಬೆಂಗಳೂರಿನಲ್ಲಿ ಇಂದು ಶ್ರೀ ಎಂ ಅವರ "ಉಪನಿಷತ್ತುಗಳು ಮತ್ತು ಜೆ.ಕೃಷ್ಣಮೂರ್ತಿ" ಹೊಸ ಕೃತಿ ಬಿಡುಗಡೆ -
ವಾಂಖೆಡೆಯಲ್ಲಿ ಆರ್ಸಿಬಿ-ಮುಂಬೈ ಇಂಡಿಯನ್ಸ್ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ವರದಿ ಹೀಗಿದೆ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Duet Songs: ಆಶಾ ಭೋಸ್ಲೆ-ಲತಾ ಮಂಗೇಶ್ಕರ್ ಸಹೋದರಿಯರ ಕಂಠಸಿರಿಯಲ್ಲಿ ಅರಳಿದ ಮಾಧುರ್ಯ: ಒಟ್ಟಿಗೆ ಹಾಡಿದ ಹಿಟ್ ಹಾಡುಗಳಿವು -
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ -
ಎಪಿಎಂಸಿಯಲ್ಲಿ ಮೂಟೆಗಳು ಮೈಮೇಲೆ ಬಿದ್ದರೂ ಪವಾಡಸದೃಶ್ಯದಂತೆ ಬದುಕಿದ ಮಹಿಳೆ Video Viral -
BESCOM Mithra: 'ಬೆಸ್ಕಾಂ ಮಿತ್ರ' ಸೇವೆ ತಾತ್ಕಾಲಿಕ ಸ್ಥಗಿತ, ಸುಧಾರಿತ ವ್ಯವಸ್ಥೆ ಶೀಘ್ರವೇ ಲಭ್ಯ











Click it and Unblock the Notifications