ಫಿಲಿಪೈನ್ಸ್ ಮಿಲಿಟರಿ ಯುದ್ಧ ವಿಮಾನ ಅಪಘಾತ, 40 ಮಂದಿ ರಕ್ಷಣೆ
ಮನಿಲಾ, ಜುಲೈ 4: ಯೋಧರನ್ನು ಹೊತ್ತೊಯ್ಯುತ್ತಿದ್ದ ಮಿಲಿಟರಿ ಯುದ್ಧ ವಿಮಾನವೊಂದು ಪತನಗೊಂಡಿದೆ. 92 ಮಂದಿ ಇದ್ದ ವಿಮಾನವು ಭಾನುವಾರ ಬೆಳಗ್ಗೆ ಮನಿಲಾದಿಂದ 1,000 ಕಿ.ಮೀ ದೂರದಲ್ಲಿರುವ ಸುಲು ಪ್ರಾಂತ್ಯದಲ್ಲಿ ನೆಲಕ್ಕುರುಳಿದೆ.
ಯುದ್ಧ ವಿಮಾನ ಸಿ 130 ಪತನವನ್ನು ಸಶಸ್ತ್ರ ಪಡೆ ಮುಖ್ಯಸ್ಥ ಸಿರಿಲಿಟೊ ಸೊಬೆಜಾನಾ ಅವರು ಖಚಿತಪಡಿಸಿದ್ದಾರೆ. ಸಿ 130 ಯುದ್ಧ ವಿಮಾನದ ಅವಶೇಷಗಳಿಂದ 40 ಮಂದಿಯನ್ನು ರಕ್ಷಿಸಲಾಗಿದೆ. ರಕ್ಷಣಾ ಕಾರ್ಯ ಭರದಿಂದ ಸಾಗಿದೆ. 17 ಮಂದಿ ಮೃತಪಟ್ಟಿರುವುದನ್ನು ರಕ್ಷಣಾ ಕಾರ್ಯದರ್ಶಿ ಡೆಲ್ಫಿನ್ ಲೊರೆಜಾನಾ ಖಚಿತಪಡಿಸಿದ್ದಾರೆ.
ವಿಮಾನದಲ್ಲಿ 84 ಮಂದಿ ಪ್ರಯಾಣಿಕರಿದ್ದ ಬಹುತೇಕ ಯೋಧರಾಗಿದ್ದರು, ಮಿಕ್ಕಂತೆ 3 ಪೈಲಟ್, 5 ಮಂದಿ ವಿಮಾನ ಸಿಬ್ಬಂದಿ ಇದ್ದರು. ಮಿಲಿಟರಿ ಕಾಲೇಜಿನಿಂದ ಪದವಿಧರರಾದ ಯುವ ಯೋಧರು ಪ್ರಯಾಣಿಸುತ್ತಿದ್ದರು. ಜಂಟಿ ಕಾರ್ಯಾಚರಣೆಯೊಂದರಲ್ಲಿ ಪಾಲ್ಗೊಂಡು ಹೆಚ್ಚಿನ ತರಬೇತಿ ಪಡೆಯಲು ತೆರಳುತ್ತಿದ್ದರು ಎಂದು ತಿಳಿದು ಬಂದಿದೆ.

ರನ್ ವೇಯಲ್ಲೇ ತಾಂತ್ರಿಕ ದೋಷ ಎದುರಿಸಿದ ವಿಮಾನ, ಟೇಕಾಫ್ ನಂತರ ಸಂಭಾಳಿಸಲು ಸಾಧ್ಯವಾಗದೆ ನಿಯಂತ್ರಣ ತಪ್ಪಿ ಸುಲು ಪ್ರಾಂತ್ಯದ ಜೊಲೊ ದ್ವೀಪದ ಬಳಿ ನೆಲಕ್ಕಪ್ಪಳಿಸಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಸಾವು ನೋವಿನ ಸಂಖ್ಯೆ ಬಗ್ಗೆ ಖಚಿತ ಮಾಹಿತಿಯಿಲ್ಲ, ಗಾಯಾಳುಗಳನ್ನು ಮಿಲಿಟರಿ ಆಸ್ಪತ್ರೆಗೆ ದಾಖಲಿಸುವ ವ್ಯವಸ್ಥೆ ಮಾಡಲಾಗಿದೆ.
ಸುಲು ಪ್ರಾಂತ್ಯದ ಈ ದ್ವೀಪದಲ್ಲಿ ಅಬು ಸಯ್ಯಾಫ್ ಉಗ್ರ ಗುಂಪಿನ ವಿರುದ್ಧ ಯುಎಸ್ ಹಾಗೂ ಫಿಲಿಪೈನ್ ಹೋರಾಟ ನಡೆಸುತ್ತಾ ಬಂದಿದೆ.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications