ಪುಣೆಯ ಕಾರ್ಖಾನೆಯಲ್ಲಿ ಅಗ್ನಿ ಅವಘಡ, 18 ಮಂದಿ ಸಾವು
ಪುಣೆ, ಜೂನ್ 7: ರಾಸಾಯನಿಕ ಉತ್ಪಾದನಾ ಘಟಕದಲ್ಲಿ ಅಗ್ನಿ ದುರಂತ ಸಂಭವಿಸಿದ್ದು 18 ಮಂದಿ ಮೃತಪಟ್ಟಿರುವ ಘಟನೆ ಪುಣೆಯಲ್ಲಿ ನಡೆದಿದೆ. ಪುಣೆಯಿಂದ 40 ಕಿಲೋ ಮೀಟರ್ ದೂರದ ಉರವಾಡೆ ಇಂಡಸ್ಟ್ರಿಯಲ್ ಎಸ್ಟೇಟ್ನಲ್ಲಿರುವ ಎಸ್ವಿಎಸ್ ಅಕ್ವಾ ಟೆಕ್ನಾಲಜೀಸ್ ಸಂಸ್ಥೆಗೆ ಸಂಬಂಧಿಸಿದ ಕಾರ್ಖಾನೆ ಈ ಅಗ್ನಿ ಅವಘಡಕ್ಕೆ ಒಳಗಾಗಿದೆ. ಮೃತಪಟ್ಟ ಕಾರ್ಮಿಕರ ಕುಟುಂಬಕ್ಕೆ ಪ್ರಧಾನಿ ನರೇಂದ್ರ ಮೋದಿ 2 ಲಕ್ಷ ರೂಪಾಯಿ ಪರಿಹಾರವನ್ನು ಘೋಷಿಸಿದ್ದಾರೆ.
ಪುಣೆಯ ಪೊಲೀಸ್ ವರಿಷ್ಠಾಧಿಕಾರಿ ಅಭಿನವ್ ದೇಶ್ಮುಖ್ ಘಟನೆಯ ಸಂಜೆ ಆರು ಗಂಟೆಯ ಸುಮಾರಿಗೆ ಈ ಬಗ್ಗೆ ಮಾಹಿತಿಯನ್ನು ನೀಡಿದ್ದು ಸುಮಾರು 15 ಮಂದಿ ಕಾರ್ಮಿಕರು ಕಾರ್ಖಾನೆಯ ಒಳಗೆ ಸಿಲುಕಿರುವ ಸಾಧ್ಯತೆಯಿದೆ ಎಂದಿದ್ದರು. ಈವರೆಗೂ 8 ಮೃತದೇಹಗಳನ್ನು ಹೊರ ತೆಗೆಯಲಾಗಿದೆ ಎಂದು ಅವರು ವಿವರಿಸಿದರು. ಆದರೆ ಈಗ ಸಾವಿನ ಸಂಖ್ಯೆ 18ಕ್ಕೆ ಏರಿಕೆಯಾಗಿದೆ.
"ಮುಲ್ಶಿ ತಾಲೂಕಿನ ಪಿರಂಗುಟ್ ಬಳಿಯ ಉರಾವಾಡೆ ಗ್ರಾಮದರುವ ಎಸ್ವಿಎಸ್ ಆಕ್ವಾ ಕಂಪನಿಯಲ್ಲಿ ದೊಡ್ಡ ಬೆಂಕಿ ಕಾಣಿಸಿಕೊಂಡಿದೆ. ಸುಮಾರು 15 ಕಾರ್ಮಿಕರು ಒಳಗೆ ಸಿಲುಕಿರುವ ಶಂಕೆಯಿದೆ. ನಿಉ ಶುದ್ಧೀಕರಿಸಲು ಕ್ಲೋರಿನ್ ಡೈಯಾಕ್ಸೈಡ್ ಟ್ಯಾಬ್ಗಳನ್ನು ಕಂಪನಿ ಉತ್ಪಾದಿಸುತ್ತಿತ್ತು. ಪೊಲೀಸರು ಮತ್ತು ಅಗ್ನಿಶಾಮಕ ದಳದ ತಂಡ ಸ್ಥಳಕ್ಕೆ ತಲುಪಿದ್ದು ಕಾರ್ಯಾಚರಣೆ ನಡೆಸಲಾಗುತ್ತಿದೆ. ಈವರೆಗೆ 8 ಮೃತದೇಹಗಳನ್ನು ಹೊರ ತೆಗೆಯಲಾಗಿದೆ" ಎಂದು ಪೊಲೀಸ್ ವರಿಷ್ಠಾಧಿಕಾರಿ ಅಭಿನವ್ ದೇಶ್ಮುಖ್ ವಿವರಿಸಿದ್ದರು.

ಅಗ್ನಿ ಶಾಮಕ ದಳದ ಅಧಿಕಾರಿ ದೇವೇಂದ್ರ ಫೋಟ್ಪೋಡೆ ನೀಡಿದ ಪ್ರಕಾರ 37 ಜನರು ಕಾರ್ಖಾನೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಇದರಲ್ಲಿ 18 ಮಂದಿಯ ಮೃತದೇಹಗಳನ್ನು ತೆಗೆಯಲಾಗಿದ್ದು ಉಳಿದವರನ್ನು ಜೀವಂತವಾಗಿ ರಕ್ಷಣೆ ಮಾಡಲಾಗಿದೆ ಎಂದಿದ್ದಾರೆ.
ಇನ್ನು ಸ್ಥಳೀಯ ಶಾಸಕ ಸಂಗ್ರಾಮ್ ತೋಪ್ಟೆ ಪ್ರತಿಕ್ರಿಯಿಸಿದ್ದು "41 ಜನ ಕಾರ್ಮಿಕರು ಇಂದು ಮುಂಜಾನೆ ಕೆಲಸಕ್ಕೆ ಹಾಜರಾಗಿದ್ದಾರೆ. ಈಗ 17ಕ್ಕೂ ಹೆಚ್ಚಿನ ಜನರು ನಾಪತ್ತೆಯಾಗಿದ್ದಾರೆ. ಈ ನಾಪತ್ತೆಯಾದವರಲ್ಲಿ 15 ಮಂದಿ ಮಹಿಳೆಯರು" ಎಂದು ಮಾಹಿತಿ ನೀಡಿದ್ದಾರೆ. 8 ಅಗ್ನಿಶಾಮಕದಳದ ವಾಹನಗಳು ಸ್ಥಳಕ್ಕಾಗಮಿಸಿದ್ದು ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸುತ್ತಿವೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications