ಪುಣೆಯಲ್ಲಿ ಇರಿತಕ್ಕೆ ಒಳಗಾಗಿದ್ದ ಸಲಿಂಗಿ ಸಂಗಾತಿ ಆಸ್ಪತ್ರೆಯಿಂದ ಪರಾರಿ
ಪುಣೆ, ಸೆಪ್ಟೆಂಬರ್ 24: ಲೈಂಗಿಕ ಕ್ರಿಯೆಗೆ ಒತ್ತಾಯಿಸಿ, ಸಲಿಂಗಿ ಗೆಳೆಯನಿಂದಲೇ ಚೂಪಾದ ಆಯುಧದಿಂದ ಇರಿತಕ್ಕೆ ಒಳಗಾಗಿದ್ದ ವ್ಯಕ್ತಿಯ ಬಗ್ಗೆ ಸುದ್ದಿಯನ್ನು ಓದಿದ ನೆನಪಿದೆಯಾ? ಸೆಪ್ಟೆಂಬರ್ ಹತ್ತೊಂಬತ್ತನೇ ತಾರೀಕು ಪುಣೆಯಲ್ಲಿ ಈ ಘಟನೆ ನಡೆದಿತ್ತು. 46 ವರ್ಷದ ಪುರುಷನ ಮೇಲೆ 23 ವರ್ಷದ ಯುವಕ ಆತನದೇ ಮನೆಯಲ್ಲಿ ಚೂಪಾದ ಆಯುಧದಿಂದ ತಿವಿದಿದ್ದ.
ಆ ನಂತರ ಯುವಕನನ್ನು ಪೊಲೀಸರು ಬಂಧಿಸಿದ್ದರು. ಇನ್ನು ಆತನನ್ನು ಲೈಂಗಿಕ ಕ್ರಿಯೆಗೆ ಒತ್ತಾಯಿಸಿ, ಇರಿತಕ್ಕೆ ಒಳಗಾಗಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು. ಅಲ್ಲಿ ಚಿಕಿತ್ಸೆ ನಡೆಯುತ್ತಿತ್ತು. ಇದೀಗ ಆತ ಪೊಲೀಸ್ ವಶದಲ್ಲಿ ಇರುವಾಗಲೇ- ಆಸ್ಪತ್ರೆಯಿಂದಲೇ ಪರಾರಿಯಾಗಿದ್ದಾನೆ ಎಂದು ವರದಿಯಾಗಿದೆ.
ಅಂದಹಾಗೆ ಈ ಸಲಿಂಗಿಗಳ ಮಧ್ಯೆ ಆ ಪರಿ ಜಗಳ ಆಗಲು ಕಾರಣ ಏನು ಗೊತ್ತೆ? ಇಬ್ಬರೂ ಸಲಿಂಗಿ ಸಂಗಾತಿಗಳು. ಹಿಂದಿನ ರಾತ್ರಿ ಲೈಂಗಿಕ ಕ್ರಿಯೆಯಲ್ಲಿ ಪಾಲ್ಗೊಂಡಿದ್ದರು. ಆ ನಂತರ ಮಧ್ಯರಾತ್ರಿ ಹೊತ್ತಿಗೆ 46 ವರ್ಷದ ವ್ಯಕ್ತಿ ಮತ್ತೊಮ್ಮೆ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಾನೆ. ಅದಕ್ಕೆ ಯುವಕ ನಿರಾಕರಿಸಿದ್ದಾನೆ. ಇಬ್ಬರ ಮಧ್ಯೆ ಮಾತಿಗೆ ಮಾತು ಬೆಳೆದು, ಜಗಳವಾಗಿದೆ.

ಸಿಟ್ಟಿಗೆದ್ದ ಯುವಕ ಕೊನೆಗೆ ಚೂಪಾದ ಆಯುಧದಿಂದ ಚುಚ್ಚಿದ್ದಾನೆ. ಆತನ ವಿರುದ್ಧ ಕೊಲೆಯತ್ನದ ಪ್ರಕರಣ ಕೂಡ ದಾಖಲಿಸಲಾಗಿದೆ. ಈ ಮಧ್ಯೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೇ ನಾಪತ್ತೆಯಾಗಿ, ಮತ್ತೆ ಈ ಪ್ರಕರಣ ಸುದ್ದಿ ಆಗಲು ಕಾರಣವಾಗಿದೆ.
-
Moodbidri: ಮಹಿಳೆಯರನ್ನು ಮಂಚಕ್ಕೆ ಕರೆದಿದ್ದ ಆರೋಪ: ಮೂಡುಬಿದರೆ ಇನ್ಸ್ಪೆಕ್ಟರ್ ದೌರ್ಜನ್ಯ ಪ್ರಕರಣ ಸಿಐಡಿ ತನಿಖೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ












Click it and Unblock the Notifications