ಆಸ್ಪತ್ರೆಯ ಪ್ರತ್ಯೇಕ ಕೊಠಡಿಯಿಂದ ಪರಾರಿಯಾದ 5 ಕೊರೊನಾ ಶಂಕಿತರು
ನಾಗ್ಪುರ, ಮಾರ್ಚ್ 14: ವಿಶ್ವದೆಲ್ಲೆಡೆ ಕೊರೊನಾ ವೈರಸ್ ಭೀತಿ ಹೆಚ್ಚಾಗಿದ್ದು, ರೋಗದ ಲಕ್ಷಣ ಯಾರಲ್ಲೇ ಕಂಡು ಬಂದರು, ಅವರನ್ನು ಪ್ರತ್ಯೇಕ ಕೊಠಡಿಯಲ್ಲಿರಿಸಿ ಸೂಕ್ತ ಚಿಕಿತ್ಸೆ ನೀಡುವ ಪ್ರಯತ್ನ ಮಾಡಲಾಗುತ್ತಿದೆ.
ಮತ್ತೊಂದೆಡೆ ಕೊರೊನಾ ಸೋಂಕಿತರನ್ನು ಹುಡುಕುವುದೇ ದೊಡ್ಡ ಸಾಹಸ ಆಗಿಬಿಟ್ಟಿದೆ. ಸಾಮಾನ್ಯ ಜ್ವರ, ಕೆಮ್ಮು, ಶೀತ ಎಂದು ಆಸ್ಪತ್ರೆ ಕಡೆ ಮುಖ ಮಾಡಿದರೂ ಅವರಿಗೆ ಕೊರೊನಾ ಪರೀಕ್ಷೆ ಮಾಡಬೇಕಾದ ಅನವಾರ್ಯತೆ ಹುಟ್ಟಿಕೊಂಡಿದೆ.
ಹಾಗಾಗಿ, ಸಾಮಾನ್ಯ ಜನರು ಕೊರೊನಾಗೆ ಹೆದರುತ್ತಿದ್ದಾರೆ. ಕೊರೊನಾ ಶಂಕೆ ಇದೆ ಎಂದು ಹೇಳಿದ್ರೆ ಸಾಕು ಈಗ ಯಾವ ಚಿಕಿತ್ಸೆನೂ ಬೇಡ ಎಂದು ಓಡಿಹೋಗುತ್ತಿರುವ ಘಟನೆಗಳು ಭಾರತದಲ್ಲೂ ನಡೆಯುತ್ತಿದೆ. ಇದೀಗ, ಮಹಾರಾಷ್ಟ್ರದ ನಾಗ್ಪುರದಲ್ಲಿ ಕೊರೊನಾಗೆ ಹೆದರಿ, ಪ್ರತ್ಯೇಕ ಕೊಠಡಿಯಲ್ಲಿದ್ದ 5 ಜನ ಶಂಕಿತರು ಆಸ್ಪತ್ರೆಯಿಂದ ಪರಾರಿಯಾಗಿರುವ ಘಟನೆ ನಡೆದಿದೆ. ಮುಂದೆ ಓದಿ....

ನಾಗ್ಪುರದಲ್ಲಿ 5 ಜನ ಶಂಕಿತರು ಎಸ್ಕೇಪ್
ನಾಗ್ಪುರದ ಮಾಯೋ ಜನರಲ್ ಆಸ್ಪತ್ರೆಯಲ್ಲಿ ಕೊರೊನಾ ಸೋಂಕು ಇರಬಹುದು ಎಂಬ ಶಂಕೆ ವ್ಯಕ್ತವಾಗಿದ್ದ ಹಿನ್ನೆಲೆ ಐದು ಜನರನ್ನು ಪ್ರತ್ಯೇಕ ಕೊಠಡಿಯಲ್ಲಿರಿಸಿ ನಿಗಾ ವಹಿಸಲಾಗಿತ್ತು. ಆದರೆ, ಈ ಐದು ಜನರು ಹೆದರಿ ಪ್ರತ್ಯೇಕ ಕೊಠಡಿಯಿಂದ ಪರಾರಿಯಾಗಿದ್ದರು ಎಂಬ ಸುದ್ದಿ ಬೆಳಕಿಗೆ ಬಂದಿದೆ.

ಒಬ್ಬರಿಗೆ ನೆಗಿಟೀವ್ ಬಂದಿತ್ತು
ಐದು ಜನರಿಗು ಕೊರೊನಾ ಪರೀಕ್ಷೆ ಮಾಡಲಾಗಿತ್ತು. ಇದರಲ್ಲಿ ಒಬ್ಬರಿಗೆ ನೆಗಿಟೀವ್ ಬಂದಿತ್ತು. ಉಳಿದ ನಾಲ್ಕು ಮಂದಿಯ ವರದಿ ಇನ್ನು ಬಂದಿರಲಿಲ್ಲ. ಅದಕ್ಕಾಗಿ ಕಾಯುತ್ತಿದ್ದರು. ಈ ಮಧ್ಯೆ ಐದು ಜನರು ಆಸ್ಪತ್ರೆ ಸಿಬ್ಬಂದಿಯ ಕಣ್ಣು ತಪ್ಪಿಸಿ ಪರಾರಿಯಾಗಲು ಯತ್ನಿಸಿದ್ದರು ಎಂದು ಹೇಳಲಾಗಿದೆ.

ಹುಡುಕಿ ಕರೆತಂದ ಪೊಲೀಸರು
'ಪ್ರತ್ಯೇಕ ಕೊಠಡಿಯಿಂದ ಓಡಿ ಹೋಗಿದ್ದ ಐದು ಜನರನ್ನು ಹುಡುಕಿ ಮತ್ತೆ ಅವರನ್ನ ವಾಪಸ್ ಕರೆತರಲಾಗಿದೆ. ಮತ್ತೆ ಅವರನ್ನು ಪ್ರತ್ಯೇಕ ಕೊಠಡಿಯಲ್ಲಿರಿಸಿ ನಿಗಾವಹಿಸಲಾಗಿದೆ' ಎಂದು ನಾಗ್ಪುರ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಮಾಹಿತಿ ನೀಡಿದ್ದಾರೆ.

ಮಹಾರಾಷ್ಟ್ರದಲ್ಲಿ ಒಟ್ಟು 18
ಶುಕ್ರವಾರ ನಾಗ್ಪುರದಲ್ಲಿ ಮೊದಲ ಕೊರೊನಾ ಕೇಸ್ ಪತ್ತೆಯಾಗಿದೆ. ಅಮೆರಿಕಾದಿಂದ ಬಂದಿದ್ದ ಟೆಕ್ಕಿಯಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಮಾರ್ಚ್ 6 ರಂದು ಮಾಯೋ ಜನರಲ್ ಆಸ್ಪತ್ರೆಗೆ ಖುದ್ದು ಬಂದು ದಾಖಲಾಗಿದ್ದರು. ಇದೀಗ, ಮಹಾರಾಷ್ಟ್ರದಲ್ಲಿ ಒಟ್ಟು 18 ಕೊರೊನಾ ಕೇಸ್ ಖಚಿತವಾಗಿದೆ ಎಂಬ ಮಾಹಿತಿ ಸಿಕ್ಕಿದೆ.

ಮಹಾರಾಷ್ಟ್ರ ಬಂದ್
ಮಹಾರಾಷ್ಟ್ರದಲ್ಲಿ ಕೊರೊನಾ ಭೀತಿ ಹೆಚ್ಚಿರುವ ಕಾರಣ, ಮಾರ್ಚ್ 31ರ ವರೆಗೂ ಬಂದ್ ಮಾಡಲು ನಿರ್ಧರಿಸಲಾಗಿದೆ. ಪುಣೆ, ನವಿ ಮುಂಬೈ, ಸಿನಿಮಾ ಥಿಯೇಟರ್ಸ್, ಮಾಲ್, ಸ್ವಿಮ್ಮಿಂಗ್ ಪೂಲ್, ಠಾಣೆ, ನಾಗ್ಪುರದಲ್ಲಿ ಬಂದ್ ಮಾಡಲು ರಾಜ್ಯ ಸರ್ಕಾರ ಘೋಷಿಸಿದೆ.
-
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ












Click it and Unblock the Notifications