ಸಂಸ್ಕೃತ ಅಧಿಕೃತ ಭಾಷೆ ಎಂದು ಪ್ರಸ್ತಾವನೆ ಸಲ್ಲಿಸಿದ್ದ ಅಂಬೇಡ್ಕರ್: ಸಿಜೆಐ ಬೋಬ್ಡೆ
ನಾಗಪುರ, ಏಪ್ರಿಲ್ 15: ಸಂಸ್ಕೃತವನ್ನು ಭಾರತದ ಅಧಿಕೃತ ಭಾಷೆಯನ್ನಾಗಿ ಮಾಡುವ ಪ್ರಸ್ತಾವನೆಯನ್ನು ಡಾ. ಬಾಬಾಸಾಹೇಬ್ ಅಂಬೇಡ್ಕರ್ ಸಿದ್ಧಪಡಿಸಿದ್ದರು. ಆದರೆ ಅದು ಮುಂದುವರಿಯಲಿಲ್ಲ ಎಂದು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಶರದ್ ಅರವಿಂದ್ ಬೋಬ್ಡೆ ಹೇಳಿದ್ದಾರೆ.
ಮಹಾರಾಷ್ಟ್ರದ ನಾಗಪುರದಲ್ಲಿನ ಮಹಾರಾಷ್ಟ್ರ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯದಲ್ಲಿ ಬುಧವಾರ ಶೈಕ್ಷಣಿಕ ಕಟ್ಟಡದ ಉದ್ಘಾಟನೆ ಸಮಾರಂಭದಲ್ಲಿ ಅವರು ಮಾತನಾಡಿದರು.
'ಮರಾಠಿ ಅಥವಾ ಇಂಗ್ಲಿಷ್ ಇವುಗಳಲ್ಲಿ ನಾನು ಯಾವ ಭಾಷೆ ಮಾತನಾಡಬೇಕು ಎಂಬುದು ನನಗೆ ಗೊತ್ತಾಗುತ್ತಿರಲಿಲ್ಲ. ಈಗ ಗೊಂದಲವನ್ನು ನಮ್ಮ ದೇಶದಲ್ಲಿ ಸುದೀರ್ಘ ಸಮಯದಿಂದ ಕಾಣುತ್ತಿದ್ದೇವೆ. ನ್ಯಾಯಾಲಯದ ಕಲಾಪಗಳಲ್ಲಿ ಯಾವ ಭಾಷೆಯನ್ನು ಬಳಸಬೇಕು ಎಂಬ ಬಗ್ಗೆ ಆಗಾಗ ಪ್ರಶ್ನೆಗಳು ಏಳುತ್ತಿರುವುದನ್ನು ನಾನು ನೋಡಿದ್ದೇನೆ. ಇಂಗ್ಲಿಷ್ ಮತ್ತು ಹಿಂದಿಯನ್ನು ಅಧಿಕೃತ ಭಾಷೆಗಳನ್ನಾಗಿ ಹೊಂದಿರುವ ಹೈಕೋರ್ಟ್ಗಳಿವೆ. ಕೆಲವರು ತಮಿಳು ಬಯಸುತ್ತಾರೆ. ಇನ್ನು ಕೆಲವರು ತೆಲುಗು ಬಯಸುತ್ತಾರೆ' ಎಂದಿದ್ದಾರೆ.

'ಈ ವಿಚಾರದ ಬಗ್ಗೆ ಯಾರೂ ಗಮನ ಹರಿಸುತ್ತಿಲ್ಲ ಎಂದು ವಿನಮ್ರದಿಂದ ಹೇಳುತ್ತೇನೆ. ಡಾಕ್ಟರ್ ಅಂಬೇಡ್ಕರ್ ಅವರು ಇದರ ಬಗ್ಗೆ ಮಹತ್ವಾಕಾಂಕ್ಷೆ ಹೊಂದಿದ್ದರು ಮತ್ತು ಪ್ರಸ್ತಾವವೊಂದನ್ನು ಕೂಡ ಸಿದ್ಧಪಡಿಸಿದ್ದರು. ಆ ಪ್ರಸ್ತಾವವನ್ನು ಚರ್ಚೆಗೆ ಇರಿಸಿದ್ದರೋ ಇಲ್ಲವೋ ಎನ್ನುವುದು ತಿಳಿದಿಲ್ಲ. ಅದಕ್ಕೆ ಕೆಲವು ಮುಲ್ಲಾಗಳು, ಪಂಡಿತರು, ಪಾದ್ರಿಗಳು ಮತ್ತು ಸ್ವತಃ ಡಾ. ಅಂಬೇಡ್ಕರ್ ಅವರ ಸಹಿ ಇತ್ತು. ಈ ಪ್ರಸ್ತಾವ ಏನೆಂದರೆ ಭಾರತ ಒಕ್ಕೂಟದ ಅಧಿಕೃತ ಭಾಷೆ ಎಂದು ಸಂಸ್ಕೃತವನ್ನು ಘೋಷಿಸುವುದಾಗಿತ್ತು' ಎಂದು ಬೋಬ್ಡೆ ಹೇಳಿದ್ದಾರೆ.
'ಉತ್ತರ ಭಾರತದಲ್ಲಿ ತಮಿಳನ್ನು ಒಪ್ಪಿಕೊಳ್ಳುವುದಿಲ್ಲ. ಹಾಗೆಯೇ ಹಿಂದಿಯನ್ನು ದಕ್ಷಿಣ ಭಾರತದಲ್ಲಿ ಒಪ್ಪಿಕೊಳ್ಳುವುದಿಲ್ಲ. ಆದರೆ ಸಂಸ್ಕೃತವನ್ನು ಉತ್ತರ ಭಾರತ ಅಥವಾ ದಕ್ಷಿಣ ಭಾರತ- ಎರಡೂ ಕಡೆಗಳಲ್ಲಿ ವಿರೋಧಿಸುವುದಿಲ್ಲ ಎನ್ನುವುದು ಅಂಬೇಡ್ಕರ್ ಅಭಿಪ್ರಾಯವಾಗಿತ್ತು. ಹೀಗಾಗಿ ಅವರು ಈ ಪ್ರಸ್ತಾವ ಸಲ್ಲಿಸಿದ್ದರು. ಆದರೆ ಅದು ಯಶಸ್ವಿಯಾಗಲಿಲ್ಲ' ಎಂದಿದ್ದಾರೆ.
'ಅಂಬೇಡ್ಕರ್ ಅವರು ಕಾನೂನಿನಲ್ಲಿ ಮಾತ್ರ ಪರಿಣತರಾಗಿರಲಿಲ್ಲ. ಜತೆಗೆ ಸಾಮಾಜಿಕ ಮತ್ತು ರಾಜಕೀಯವಾಗಿ ಕೂಡ ಅವರಿಗೆ ಅಪಾರ ಜ್ಞಾನವಿತ್ತು. ಜನರಿಗೆ ಏನು ಬೇಕು, ಬಡವರು ಏನನ್ನು ಬಯಸಿದ್ದಾರೆ ಎನ್ನುವುದು ಅವರಿಗೆ ತಿಳಿದಿತ್ತು. ಆ ಕಾರಣಕ್ಕಾಗಿಯೇ ಅವರು ಈ ಪ್ರಸ್ತಾವ ಇರಿಸಿದ್ದರು ಎನಿಸುತ್ತದೆ. ಆದರೆ ಅಂತಿಮವಾಗಿ ಇಂಗ್ಲಿಷ್ ಅನ್ನು ಅಧಿಕೃತ ಭಾಷೆಯನ್ನಾಗಿಸಲಾಯಿತು' ಎಂದು ಅವರು ರಾಷ್ಟ್ರೀಯ ಕಾನೂನು ವಿವಿಯಲ್ಲಿ ಇಂಗ್ಲಿಷ್ನಲ್ಲಿಯೇ ಮಾತನಾಡಲು ಅನುಮತಿ ಕೋರಿದರು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications