ಇಂದಿನಿಂದ ಶಿರಡಿ ಬಂದ್; ಸಾಯಿಬಾಬಾ ದರ್ಶನಕ್ಕಿಲ್ಲ ವಿಘ್ನ
ಶಿರಡಿ, ಜನವರಿ 19 : ಶಿರಡಿ ಸಾಯಿಬಾಬಾ ಜನ್ಮಸ್ಥಳದ ವಿವಾದದ ಹಿನ್ನಲೆಯಲ್ಲಿ ಇಂದಿನಿಂದ ಶಿರಡಿ ಬಂದ್ಗೆ ಗ್ರಾಮಸ್ಥರು ಕರೆ ನೀಡಿದ್ದಾರೆ. ಸಾಯಿಬಾಬಾ ದರ್ಶನಕ್ಕೆ ಆಗಮಿಸುವ ಭಕ್ತಾದಿಗಳಿಗೆ ಯಾವುದೇ ತೊಂದರೆ ಆಗುವುದಿಲ್ಲ ಎಂದು ದೇವಾಲಯದ ಆಡಳಿತ ಮಂಡಳಿ ಸ್ಪಷ್ಟಪಡಿಸಿದೆ.
ಸಾಯಿಬಾಬಾ ಜನ್ಮಸ್ಥಳದ ಬಗ್ಗೆ ವಿವಾದ ಭುಗಿಲೆದ್ದಿದ್ದು ಭಾನುವಾರದಿಂದ ಅನಿರ್ಧಿಷ್ಟಾವಧಿ ಶಿರಡಿ ಬಂದ್ಗೆ ಕರೆ ನೀಡಲಾಗಿದೆ. ಸ್ಥಳೀಯ ಬಿಜೆಪಿ ಶಾಸಕ ರಾಧಾಕೃಷ್ಣ ವಿಖೆ ಪಾಟೀಲ್ ಬಂದ್ಗೆ ಬೆಂಬಲ ನೀಡಿದ್ದು, ರಾಜಕೀಯ ಸ್ವರೂಪವೂ ವಿವಾದಕ್ಕೆ ಸಿಕ್ಕಿದೆ.
ಉದ್ಧವ್ ಠಾಕ್ರೆ ನೇತೃತ್ವದ ಮಹಾರಾಷ್ಟ್ರ ಸರ್ಕಾರ ಪರ್ತಿಯನ್ನು ಸಾಯಿಬಾಬಾ ಅವರ ಅಧಿಕೃತ ಜನ್ಮಸ್ಥಳ ಎಂದು ಘೋಷಣೆ ಮಾಡಿದೆ. ಈ ಕ್ಷೇತ್ರದ ಅಭಿವೃದ್ಧಿಗೆ 100 ಕೋಟಿ ರೂ.ಗಳ ಅನುದಾನವನ್ನು ಘೋಷಣೆ ಮಾಡಿದೆ. ಇದರಿಂದಾಗಿ ಜನ್ಮಸ್ಥಳದ ವಿವಾದದ ಕಿಡಿ ಹೊತ್ತಿಕೊಂಡಿದೆ.
ಮುಖ್ಯಮಂತ್ರಿ ಉದ್ಧವ್ ಠಾಕ್ರೆ ವಿವಾದ ಬಗೆಹರಿಸಲು ಸಂಬಂಧಪಟ್ಟವರ ಜೊತೆ ಸಭೆ ನಡೆಸಲಿದ್ದಾರೆ ಎಂದು ಮುಖ್ಯಮಂತ್ರಿಗಳ ಕಚೇರಿ ಶನಿವಾರ ಸಂಜೆ ಪತ್ರಿಕಾ ಪ್ರಕಟಣೆಯಲ್ಲಿ ಹೇಳಿದೆ. ಆದರೆ, ಬಂದ್ ವಾಪಸ್ ಪಡೆಯುವ ಬಗ್ಗೆ ಗ್ರಾಮಸ್ಥರು ಯಾವುದೇ ತೀರ್ಮಾನವನ್ನು ಪ್ರಕಟಿಸಿಲ್ಲ.

ಉದ್ಧವ್ ಠಾಕ್ರೆ ನೇತೃತ್ವದ ಮಹಾರಾಷ್ಟ್ರ ಸರ್ಕಾರ
ಮಹಾರಾಷ್ಟ್ರ ಸರ್ಕಾರ ಮರಾಠವಾಡ ಪ್ರಾಂತ್ಯದಲ್ಲಿರುವ ಪರ್ಭಾನಿ ಜಿಲ್ಲೆಯ ಪರ್ತಿಯನ್ನು ಸಾಯಿ ಬಾಬಾ ಅವರ ಅಧಿಕೃತ ಜನ್ಮಸ್ಥಳ ಎಂದು ಘೋಷಣೆ ಮಾಡಿದೆ ಮತ್ತು ಕ್ಷೇತ್ರದ ಅಭಿವೃದ್ಧಿಗಾಗಿ 100 ಕೋಟಿ ರೂ.ಗಳನ್ನು ಘೋಷಣೆ ಮಾಡಿದೆ. ಇದರಿಂದಾಗಿ ಶಿರಡಿ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದಾರೆ. ಅನಿರ್ಧಿಷ್ಟಾವಧಿ ಶಿರಡಿ ಬಂದ್ಗೆ ಕರೆ ನೀಡಿದ್ದಾರೆ.

ಶಿರಡಿ ಗ್ರಾಮಸ್ಥರ ವಿರೋಧ
ಮಹಾರಾಷ್ಟ್ರ ಸರ್ಕಾರ ಘೋಷಣೆ ಮಾಡಿದ ಬಳಿಕ ಗ್ರಾಮಸ್ಥರು ಅನಿರ್ಧಿಷ್ಟಾವಧಿ ಶಿರಡಿ ಬಂದ್ಗೆ ಕರೆ ನೀಡಲಾಗಿದೆ. ಸ್ಥಳೀಯ ಬಿಜೆಪಿ ಶಾಸಕ ರಾಧಾಕೃಷ್ಣ ವಿಖೆ ಪಾಟೀಲ್ ಅವರು ಬಂದ್ಗೆ ಬೆಂಬಲ ನೀಡಿದ್ದಾರೆ. ಇದರಿಂದಾಗಿ ವಿವಾದಕ್ಕೆ ರಾಜಕೀಯ ತಿರುವು ಸಿಕ್ಕಿದೆ. ಶಿವಸೇನೆ ಸಂಸದ ಸದಾಶಿವ ಲೋಖಾಂಡೆ ಸಿಎಂ ಉದ್ಧವ್ ಠಾಕ್ರೆ ಜೊತೆ ಚರ್ಚೆ ನಡೆಸಲು ಕಾಲಾವಕಾಶ ಪಡೆದಿದ್ದಾರೆ.

ಸಂಶೋಧಕರಿಂದ ಸಾಕ್ಷಿ ಸಂಗ್ರಹ
ಮುಂಬೈ ಮೂಲದ ವಿಶ್ವಾಸ್ ಖೇರ್ ಎಂಬ ಬಾಬಾ ಭಕ್ತರೊಬ್ಬರು 20 ವರ್ಷಗಳ ಕಾಲ ಸಂಶೋಧನೆ ನಡೆಸಿದ್ದಾರೆ. ಸಾಯಿಬಾಬಾ ಅವರ ಜನ್ಮಸ್ಥಳದ ವಿಚಾರವಾಗಿ ಸಂಶೋಧನೆ ನಡೆಸಿದ್ದು, ಪರ್ತಿಯೇ ಬಾಬಾ ಜನ್ಮಸ್ಥಳವೆಂದು ಅವರು ತೀರ್ಮಾನಕ್ಕೆ ಬಂದಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ 29 ಆಧಾರಗಳನ್ನೂ ಅವರು ಸಂಗ್ರಹ ಮಾಡಿ ಸರ್ಕಾರಕ್ಕೆ ಸಲ್ಲಿಸಿದ್ದಾರೆ. ಇದರ ಮೂಲಕ ಸರ್ಕಾರ ಜನ್ಮಸ್ಥಳವನ್ನು ಘೋಷಣೆ ಮಾಡಿದೆ.

ದೇವಾಲಯವನ್ನು ಮುಚ್ಚುವುದಿಲ್ಲ
ಶಿರಡಿಯಲ್ಲಿ ಅನಿರ್ಧಿಷ್ಟಾವಧಿ ಬಂದ್ಗೆ ಕರೆ ನೀಡಿದ್ದರೂ ದೇವಾಲಯವನ್ನು ಬಂದ್ ಮಾಡುವುದಿಲ್ಲ ಎಂದು ಶಿರಡಿ ಸಾಯಿಬಾಬಾ ದೇವಾಲಯ ಸ್ಪಷ್ಟಪಡಿಸಿದೆ. ಸಾಯಿಬಾಬಾ ದರ್ಶನಕ್ಕೆ ಆಗಮಿಸುವ ಭಕ್ತರಿಗೆ ಅಗತ್ಯ ವ್ಯವಸ್ಥೆ ಮಾಡಲಾಗುತ್ತದೆ ಎಂದು ದೇವಾಲಯ ಹೇಳಿದೆ.
-
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ












Click it and Unblock the Notifications