1993ರ ಸರಣಿ ಸ್ಫೋಟ ಅಪರಾಧಿ ಯೂಸುಫ್ ಮೆಮೊನ್ ಸಾವು
ನಾಸಿಕ್, ಜೂನ್ 26: 1993ರ ಸರಣಿ ಸ್ಫೋಟದ ಪ್ರಮುಖ ಅಪರಾಧಿ ಟೈಗರ್ ಮೆಮೊನ್ ಸೋದರ ಯೂಸುಫ್ ಮೆಮೊನ್ ಮೃತನಾಗಿದ್ದಾನೆ ಎಂದು ನಾಸಿಕ್ ಜೈಲು ಅಧಿಕಾರಿಗಳು ದೃಢಪಡಿಸಿದ್ದಾರೆ. ಸಾವಿನ ಕಾರಣ ಇನ್ನೂ ತಿಳಿದು ಬಂದಿಲ್ಲ, ಶವದ ಅಟ್ಸಾಪಿ ನಡೆಸಲು ಧುಲೆಗೆ ಕಳಿಸಲಾಗಿದೆ ಎಂದು ನಾಸಿಕ್ ಜೈಲು ಅಧಿಕಾರಿ ಹೇಳಿದರು.
1993ರ ಸರಣಿ ಸ್ಫೋಟದ ಇತರೆ ಅಪರಾಧಿಗಳಂತೆ ಯೂಸುಫ್ ಮೆಮೊನ್ ವಿರುದ್ಧಐಪಿಸಿ ಸೆಕ್ಷನ್ 302, 307, 326, 324, 435, 436 ಅನ್ವಯ ಪ್ರಕರಣಗಳು ದಾಖಲಾಗಿ, ಸಾಬೀತಾಗಿತ್ತು. ಇದಲ್ಲದೆ, ಸ್ಫೋಟಕ ವಸ್ತು ನಿಯಂತ್ರಣ ಕಾಯ್ದೆ ಸೆಕ್ಷನ್ 9 ಬಿ (1), ಸೆಕ್ಷನ್ 3, 4(ಎ), (ಬಿ) ಹಾಗೂ ಸಾರ್ವಜನಿಕ ಆಸ್ತಿ ಪಾಸ್ತಿ ನಷ್ಟ ನಿಯಂತ್ರಣ ಕಾಯ್ದೆ ಸೆಕ್ಷನ್ 4ರ ಅಡಿಯಲ್ಲೂ ಆರೋಪ ಸಾಬೀತಾಗಿತ್ತು. ವಿಶೇಷ ಟಾಡಾ ಕೋರ್ಟಿನಲ್ಲಿ ಯೂಸುಫ್ ಗೆ ಜೀವಾವಧಿ ಶಿಕ್ಷೆ ಪ್ರಕಟಿಸಲಾಗಿತ್ತು.
1993ರ ಮಾರ್ಚ್ 12ರಂದು ಮಧ್ಯಾಹ್ನ 1.30ರಿಂದ 3.40ರ ಮಧ್ಯೆ ಮುಂಬೈನ 12ಕ್ಕೂ ಅಧಿಕ ಕಡೆಗಳಲ್ಲಿ ಸಂಭವಿಸಿದ ಸ್ಫೋಟದಲ್ಲಿ 257ಕ್ಕೂ ಅಧಿಕ ಮಂದಿ ಮೃತಪಟ್ಟು 1400 ಮಂದಿ ಗಾಯಗೊಂಡಿದ್ದರು. 27 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಪಾಸ್ತಿಯೂ ಈ ಸ್ಫೋಟಕ್ಕೆ ನಾಶವಾಗಿತ್ತು.

ಬಾಂಬೆ ಸ್ಟಾಕ್ ಎಕ್ಸ್ ಚೇಂಜ್ ಕಟ್ಟಡ, ನಾರಿಮನ್ ಪಾಯಿಂಟ್ ನ ಏರ್ ಇಂಡಿಯಾ ಕಟ್ಟಡ, ವೊರ್ಲಿಯ ಸೆಂಚುತಿ ಬಜಾರ್, ಹೋಟೆಲ್ ಸೀ ರಾಕ್ ಹಾಗೂ ಜುಹೂನ ಸೆಂಟ್ಯೂರ್ ಸ್ಫೋಟ ಸಂಭವಿಸಿದ ಪ್ರಮುಖ ಸ್ಥಳಗಳಾಗಿತ್ತು.
ಯೂಸುಫ್ ಸೋದರ ಟೈಗರ್ ಮೆಮೊನ್ ಈ ಸ್ಫೋಟದ ರುವಾರಿಯಾಗಿದ್ದ. ದಾವೂದ್ ಇಬ್ರಾಹಿಂ ಅಣತಿಯಂತೆ ಟೈಗರ್ ಸ್ಫೋಟದ ಸಂಚು ರೂಪಿಸಿದ್ದ. ಪಾತಕಿಗಳು ಉಳಿದುಕೊಳ್ಳಲು ಯೂಸುಫ್ ತನ್ನ ಅಲ್ ಹುಸೇನಿ ಕಟ್ಟಡದಲ್ಲಿದ್ದ ಫ್ಲಾಟ್, ಗ್ಯಾರೇಜ್ ಬಿಟ್ಟುಕೊಟ್ಟಿದ್ದ.

1993ರ ಮುಂಬೈ ಸ್ಫೋಟ ಪ್ರಕರಣದ ರೂವಾರಿ ಮತ್ತೊಬ್ಬ ಮೆಮೊನ್, ಯಾಕೂಬ್ ಮೆಮೊನ್ ಗೆ 2015ರಲ್ಲಿ ಗಲ್ಲುಶಿಕ್ಷೆಯಾಗಿದೆ. ಅಬು ಸಲೇಂಗೆ ವಿಶೇಷ ಟಾಡಾ (Terrorist and Disruptive Activity) ನ್ಯಾಯಾಲಯ ಜೀವಾವಧಿ ಶಿಕ್ಷೆ ಪ್ರಕಟಿಸಿದೆ. ದಾವೂದ್ ಇಬ್ರಾಹಿಂ ಬಲಗೈ ಬಂಟ ಅಬು ಸಲೇಂ ಮತ್ತು ಕರೀಮುಲ್ಲಾ ಖಾನ್ ಗೆ ಜೀವಾವಧಿ ಶಿಕ್ಷೆ ಪ್ರಕಟಿಸಿದ್ದರೆ, ತಾಹಿರ್ ಮರ್ಚೆಂಟ್ ಮತ್ತು ಫಿರೋಜ್ ಖಾನ್ ಗೆ ಗಲ್ಲು ಶಿಕ್ಷೆ ವಿಧಿಸಿದೆ. ಇನ್ನೊಬ್ಬ ಅಪರಾಧಿ ರಿಯಾಜ್ ಸಿದ್ದಿಖಿಗೆ 10 ವರ್ಷಗಳ ಸೆರೆವಾಸದ ಶಿಕ್ಷೆ ವಿಧಿಸಲಾಗಿದೆ.
ಸ್ಫೋಟದ ರೂವಾರಿ ಮುಸ್ತಫಾ ದೊಸಾ ಮತ್ತು ಅಬು ಸಲೇಂ ಸೇರಿದಂತೆ 6 ಜನರನ್ನು ಅಪರಾಧಿಗಳು ಎಂದು ಟಾಡಾ ನ್ಯಾಯಾಲಯ ತೀರ್ಪು ನೀಡಿತ್ತು. ಆದರೆ ಕೋರ್ಟು ತೀರ್ಪು ನೀಡಿದ ಎರಡು ವಾರದಲ್ಲಿ ಮುಸ್ತಫಾ ದೊಸ್ಸಾ ಹೃದಯಾಘಾತದಿಂದ ಸಾವನ್ನಪ್ಪಿದ್ದ.ಮರಣದಂಡನೆ ಶಿಕ್ಷೆ ಪಡೆದಿದ್ದ ಮಹಮ್ಮದ್ ಇಕ್ಬಾಲ್ ಹಾಗೂ ಜೀವಾವಧಿ ಶಿಕ್ಷೆಗೊಳಗಾಗಿದ್ದ ಕಸ್ಟಮ್ ಅಧಿಕಾರಿಯಾಗಿದ್ದ ಎಸ್ ಎನ್ ಥಾಪಾ ಅವರು ಶಿಕ್ಷೆ ಅವಧಿ ಮುಗಿಯುವ ಮುನ್ನವೇ ಮೃತಪಟ್ಟಿದ್ದಾರೆ. ಒಟ್ಟಾರೆ 100 ಜನರನ್ನು ಅಪರಾಧಿಗಳು ಎಂದು ಘೋಷಿಸಲಾಯಿತು. 12 ಜನರಿಗೆ ಮರಣದಂಡನೆ ಹಾಗೂ 20 ಜನರಿಗೆ ಜೀವಾವಧಿ ಶಿಕ್ಷೆಯನ್ನು ಟಾಡಾ ಕೋರ್ಟ್ ಪ್ರಕಟಿಸಿತ್ತು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications