ವ್ಯಂಗ್ಯಚಿತ್ರಕಾರ ಶ್ರೀಸಾಮಾನ್ಯ' ಆರ್.ಕೆ ಲಕ್ಷ್ಮಣ್ ವಿಧಿವಶ
ಪುಣೆ, ಜ.26: 'ಶ್ರೀಸಾಮಾನ್ಯ(The Common Man)ಗೆ ಬೆಲೆ ತಂದುಕೊಟ್ಟ ಖ್ಯಾತ ವ್ಯಂಗ್ಯಚಿತ್ರಕಾರ ಆರ್.ಕೆ ಲಕ್ಷ್ಮಣ್ ವಿಧಿವಶರಾಗಿದ್ದಾರೆ. ಪುಣೆಯ ಖಾಸಗಿ ಸೋಮವಾರ ಸಂಜೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಕಳೆದ ಕೆಲ ದಿನಗಳಿಂದ ವಯೋಸಹಜ ತೊಂದರೆಗೆ ಒಳಗಾಗಿ ಆಸ್ಪತ್ರೆ ಸೇರಿದ್ದರು.
ಕರ್ನಾಟಕದ ಮೈಸೂರು ಮೂಲದ ಆರ್. ಕೆ ಲಕ್ಷ್ಮಣ್(94) ಅವರು ಕಿಡ್ನಿ, ಎದೆನೋವು ಸಮಸ್ಯೆಯಿಂದ ಶುಕ್ರವಾರ ಪುಣೆಯ ನರ್ಸಿಂಗ್ ಹೋಂಗೆ ಸೇರಿ ಚಿಕಿತ್ಸೆ ಪಡೆಯುತ್ತಿದ್ದರು. ಶನಿವಾರ ಅವರನ್ನು ಐಸಿಯುನಲ್ಲಿರಿಸಿ ಹೆಚ್ಚಿನ ಚಿಕಿತ್ಸೆ ನೀಡಲಾಗಿತ್ತು. ಭಾನುವಾರ ಬೆಳಗ್ಗೆ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿತ್ತು. ಅದರೆ, ಇಂದು ಅವರನ್ನು ಕಳೆದುಕೊಂಡೆವು ಎಂದು ಕುಟುಂಬದ ಸದಸ್ಯರೊಬ್ಬರು ಐಎಎನ್ಎಸ್ ಗೆ ವಿಷಯ ತಿಳಿಸಿದ್ದಾರೆ.

ರಾಸಿಪುರಂ ಕೃಷ್ಣಸ್ವಾಮಿ ಲಕ್ಷ್ಮಣ ಅಯ್ಯರ್ ಸಾಮಾನ್ಯಓದುಗನಿಂದ ಹಿಡಿದು, ರಾಷ್ಟ್ರಪತಿಯವರೆಗೆ ಎಲ್ಲರಿಗೂ ಲಕ್ಷ್ಮಣ್ ವ್ಯಂಗ್ಯಚಿತ್ರಗಳು ಜನಪ್ರಿಯ, ಅರ್ಧ ಶತಮಾನಕ್ಕೂ ಹೆಚ್ಚುಕಾಲ ಓದುಗರನ್ನು ಮೆಚ್ಚಿಸಿದ ಕಲೆಗಾರ.
A legend is no more. The common man has gone out of our lives on R day: RK Laxman RIP.
— Rajdeep Sardesai (@sardesairajdeep) January 26, 2015 ಲಕ್ಷ್ಮಣ್' ಅವರು 56 ವರ್ಷ ಗಳಿಂದ 'ಟೈಮ್ಸ್ ಆಫ್ ಇಂಡಿಯ ದಿನ ಪತ್ರಿಕೆ'ಯಲ್ಲಿ ಬರೆಯುತ್ತಿದ್ದ 'ಕಾಮನ್ ಮ್ಯಾನ್' ('ಸಾಮಾನ್ಯ ಪ್ರಜೆ'), ಅಥವ 'ಜನಸಾಮಾನ್ಯ', 'ವ್ಯಂಗ್ಯ ಚಿತ್ರಾಂಕಣ'ವನ್ನು ಓದಿ ಸವಿಯದವರಿಲ್ಲ. ಇದಕ್ಕೂ ಮುನ್ನ ಕನ್ನಡದ "ಕೊರವಂಜಿ ಹಾಸ್ಯಪತ್ರಿಕೆ "ಯಿಂದ ಲಕ್ಷ್ಮಣರ ವ್ಯಂಗ್ಯಚಿತ್ರಜೀವನ,ಶುರುವಾಗಿ, ದೇಶದಾದ್ಯಂತ ಪಸರಿಸಿತು.
The best of RK Laxman's cartoons #CommonMan http://t.co/5cm0TlmS1S pic.twitter.com/hAsM2qCdTz
— Times of India (@timesofindia) January 26, 2015 'ರಾಮೋನ್ ಮ್ಯಾಗ್ಸೆಸ್ಸೆ ಪ್ರಶಸ್ತಿ, ಪದ್ಮ ಭೂಷಣ, ಪದ್ಮ ವಿಭೂಷಣ, ಹಲವು ವಿಶ್ವವಿದ್ಯಾಲಯಗಳಿಂದ ಗೌರವ ಡಾಕ್ಟರೇಟ್ ಆರ್ ಕೆ ಲಕ್ಷ್ಮಣ್ ಅವರಿಗೆ ಲಭಿಸಿತ್ತು. ಸುಪ್ರಸಿದ್ಧ ಕಾದಂಬರಿಕಾರ, ಆರ್. ಕೆ. ನಾರಾಯಣ್ ಇವರ ಸೋದರ. ಆರ್ ಕೆ ಲಕ್ಷ್ಮಣ್ ಆವರು ಕಾರ್ಟೂನ್ ಅಷ್ಟೇ ಅಲ್ಲದೆ, ದ ಟನಲ್ ಆಫ್ ಟೈಮ್, ದ 'ಎಲಾಕ್ ವೆಂಟ್ ಬ್ರಷ್ ಸೇರಿದಂತೆ ಐದಾರು ಸಚಿತ್ರ ಪುಸ್ತಕಗಳನ್ನು ಹೊರ ತಂದಿದ್ದರು. ಮೈಸೂರು-ಮುಂಬೈ-ಪುಣೆ ಅಷ್ಟೇ ಏಕೆ ಭಾರತದ ಹೆಮ್ಮೆಯ ಕಲಾವಿದನನ್ನು ಇಂದು ಕಳೆದುಕೊಂಡ ದುಃಖ ಕಲಾಭಿಮಾನಿಗಳಲ್ಲಿ ತುಂಬಿದೆ.
-
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ -
Summer Drinks: ಎಳನೀರು ಅಥವಾ ಕಬ್ಬಿನ ರಸ – ಬೇಸಿಗೆಯಲ್ಲಿ ಯಾವುದು ಉತ್ತಮ? -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ












Click it and Unblock the Notifications