ಎಫ್ ಟಿಐಐ ವಿದ್ಯಾರ್ಥಿಗಳಿಂದ ಅನಿರ್ದಿಷ್ಟಾವಧಿ ಉಪವಾಸ
ಪುಣೆ, ಸೆಪ್ಟೆಂಬರ್, 11 : ಫಿಲ್ಮ್ ಆಂಡ್ ಟೆಲಿವಿಷನ್ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾ(ಎಫ್ಟಿಐಐ)ನ ನಿರ್ದೇಶಕ ಗಜೇಂದ್ರ ಚೌಹಾಣ್ ರನ್ನು ವಜಾಗೊಳಿಸಬೇಕೆಂದು ವಿದ್ಯಾರ್ಥಿಗಳು ಕೈಗೊಂಡ ಹೋರಾಟ ಇದೀಗ ಅನಿರ್ದಿಷ್ಟಾವಧಿ ಉಪವಾಸಕ್ಕೆ ತಿರುಗಿದೆ.
ಗಜೇಂದ್ರ ಚೌಹಾಣ್ ಅವರನ್ನು ಅಧಿಕಾರದಿಂದ ತೆರವುಗೊಳಿಸಬೇಕೆಂದು ತೀವ್ರವಾಗಿ ಪಟ್ಟು ಹಿಡಿದ ಎಫ್ ಟಿಐಐ ವಿದ್ಯಾರ್ಥಿಗಳು ಉಪವಾಸ ಸತ್ಯಾಗ್ರಹ ಮಾಡಲು ಮುಂದಾಗಿದ್ದು,ಗುರುವಾರದಿಂದ ಮೂರು ವಿದ್ಯಾರ್ಥಿಗಳು ಉಪವಾಸ ಆರಂಭಿಸಿದ್ದಾರೆ.[ಪುಣೆಯಲ್ಲಿ ರಾಹುಲ್ ಗಾಂಧಿ ಜತೆ ಕಾಣಿಸಿಕೊಂಡ ರಮ್ಯಾ!]

ಎಫ್ಟಿಐಐ ಸಂಸ್ಥೆಯ ಹಿರಾಲ್ ಸವಾದ್, ಅಲೋಲ್ ಅರೋರ ಮತ್ತು ಹಿಮಾಂಶು ಶೇಖರ್ ಎಂಬುವವರು ಉಪವಾಸ ಕೈಗೊಂಡ ವಿದ್ಯಾರ್ಥಿಗಳು. ಇವರು ಅಸ್ವಸ್ಥರಾದಲ್ಲಿ ಮತ್ತೆ ಮೂವರು ಉಪವಾಸಕ್ಕೆ ಕೂರುತ್ತಾರೆ. ಹೀಗೆ ಉಪವಾಸ ನಿರಂತರವಾಗಿ ಮುಂದುವರೆಯಲಿದೆ ಎಂದು ಎಫ್ ಟಿಟಿಐ ವಿದ್ಯಾರ್ಥಿಗಳ ಸಂಘದ ಪ್ರತಿನಿಧಿ ರಂಜಿತ್ ನಾಯರ್ ಹೇಳಿದ್ದಾರೆ.
ಮೂರು ತಿಂಗಳಿಂದ ಪ್ರತಿಭಟನೆ ಕೈಗೊಂಡ ವಿದ್ಯಾರ್ಥಿಗಳು ಪರಿಹಾರ ಕಲ್ಪಿಸಬೇಕೆಂದು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದರು. ಆದರೆ ಕೇಂದ್ರ ಸರ್ಕಾರದಿಂದ ಯಾವುದೇ ಪ್ರತಿಕ್ರಿಯೆ ಬಾರದ ಕಾರಣ ವಿದ್ಯಾರ್ಥಿಗಳು ಈ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹದ ತೀರ್ಮಾನ ತೆಗೆದುಕೊಂಡಿದ್ದಾರೆ.[ಎಫ್ ಟಿಐಐ ವಿದ್ಯಾರ್ಥಿಗಳ ಹೋರಾಟಕ್ಕೆ ರಾಹುಲ್ ಬಲ]
ಈ ಉಪವಾಸದ ಮೂಲಕ ಎಫ್ಟಿಐಐ ಮಂಡಳಿಯ ಈಗಿನ ಸದಸ್ಯರ ನೇಮಕಾತಿಯನ್ನು ರದ್ದುಗೊಳಿಸಿ, ಹೊಸಬರನ್ನು ಪಾರದರ್ಶಕವಾಗಿ ನೇಮಕ ಮಾಡಬೇಕು. ಜೂನ್ 12 ರಿಂದ ನಡೆಯದ ತರಗತಿಗಳು ಯಥಾವತ್ತಾಗಿ ನಡೆಯಲು ಅನುವು ಮಾಡಿಕೊಡಬೇಕು ಎಂದೂ ಸಂಸ್ಥೆಯ ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ.
ಕಳೆದ ಕೆಲವು ತಿಂಗಳಿಂದ ನಡೆಯುತ್ತಿದ್ದ ಎಫ್ ಟಿಐಐ ವಿದ್ಯಾರ್ಥಿಗಳ ಹೋರಾಟಕ್ಕೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಇನ್ನಿತರ ಗಣ್ಯರು ಬೆಂಬಲ ಸೂಚಿಸಿದ್ದರು. ಈ ಸಮಸ್ಯೆಯನ್ನು ಆದಷ್ಟು ಬೇಗ ಪರಿಹರಿಸುವುದಾಗಿ ಭರವಸೆ ನೀಡಿದ್ದರು
-
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್












Click it and Unblock the Notifications