ನಟ ಸಂಜಯ್ ದತ್ ಜೈಲಿನಿಂದ ರಿಲೀಸ್ ಆಗೋ ಡೇಟ್ ಫಿಕ್ಸ್
ಪುಣೆ, ಫೆ, 23: 1993ರ ಮುಂಬೈ ಸರಣಿ ಬಾಂಬ್ ಸ್ಫೋಟದ ಅರೋಪಿಯಾಗಿ ಜೈಲುವಾಸದಲ್ಲಿರುವ ನಟ ಸಂಜಯ್ ದತ್ ಅವರು ರಿಲೀಸ್ ಆಗುವ ದಿನಾಂಕ ನಿಗದಿಯಾಗಿದೆ. ಐದು ವರ್ಷಗಳ ಕಾಲ ಜೈಲು ಶಿಕ್ಷೆಯಲ್ಲಿ 42 ತಿಂಗಳು ಸೆರೆಮನೆಯಲ್ಲಿದ್ದ ಮುನ್ನಾಭಾಯಿ ಎಂಬಿಬಿಎಸ್ ಸ್ಟಾರ್ ಅವರು ಫೆಬ್ರವರಿ 25ರಂದು ರಿಲೀಸ್ ಆಗುತ್ತಿದ್ದಾರೆ.
1993ರ ಮಾರ್ಚ್ 12ರಂದು ಮುಂಬೈನಲ್ಲಿ ನಡೆದ ಸರಣಿ ಬಾಂಬ್ ಸ್ಫೋಟದ ಆರೋಪಿಯಾಗಿರುವ 56 ವರ್ಷ ವಯಸ್ಸಿನ ಸಂಜಯ್ ದತ್ ಅವರು ಪುಣೆಯ ಯೆರವಾಡ ಜೈಲಿನಿಂದ ಗುರುವಾರ ಬೆಳಗ್ಗೆ ಹೊರ ಬರಲಿದ್ದಾರೆ. ಬೆಳಗ್ಗೆ 9 ಗಂಟೆ ಸುಮಾರಿಗೆ ಸಂಜಯ್ ದತ್ ಅವರನ್ನು ಪತ್ನಿ ಮಾನ್ಯತಾ, ಮಕ್ಕಳು ಹಾಗೂ ಆಪ್ತರು, ಅಭಿಮಾನಿಗಳು ಬರಮಾಡಿಕೊಳ್ಳಲಿದ್ದಾರೆ.[ಮುಂಬೈ ಸರಣಿ ಸ್ಫೋಟದ ಹಿನ್ನೋಟ]

ಆದರೆ, ಜೈಲಿನ ಆವರಣದಲ್ಲಿ ಸ್ವಾಗತ ಕೂಟ ಏರ್ಪಡಿಸಲು ಮುಂದಾಗಿದ್ದ ಸಂಜಯ್ ದತ್ ಅವರ ಅಭಿಮಾನಿಗಳಿಗೆ ನಿರಾಶೆಯಾಗಿದೆ. ಇಂಥ ಆಚರಣೆಗೆ ಅವಕಾಶ ನೀಡುವುದಿಲ್ಲ ಎಂದು ಜೈಲಿನ ಅಧಿಕಾರಿಗಳು ಹೇಳಿದ್ದಾರೆ. ಹೆಚ್ಚು ಬಾರಿ ಪೆರೋಲ್ ಮೇಲೆ ಜೈಲಿನಿಂದ ಹೊರಕ್ಕೆ ಬಂದ ವಿವಾದದ ನಡುವೆಯೂ ಸನ್ನಡತೆಯ ಆಧಾರದ ಮೇಲೆ ಸಂಜಯ್ ಅವರು ಅವಧಿಗೆ ಮುನ್ನ ರಿಲೀಸ್ ಆಗುತ್ತಿದ್ದಾರೆ. ಎರಡು ಕಂತಿನಲ್ಲಿ 50 ತಿಂಗಳಿಗೂ ಅಧಿಕ ಜೈಲುವಾದ ಅನುಭವಿಸಿದ್ದಾರೆ ಇದರಲ್ಲಿ ಪೆರೋಲ್ ಅವಧಿ ಸೇರಿಸಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.[ಭಾರತದಲ್ಲಿ ಸಂಭವಿಸಿದ ಪ್ರಮುಖ ಬಾಂಬ್ ಸ್ಫೋಟಗಳು]
ವಿಚಾರಣಾಧೀನ ಕೈದಿಯಾಗಿ ಸಂಜಯ್ ಅವರು 18 ತಿಂಗಳು ಕಾಲ ಜೈಲುವಾಸದಲ್ಲಿದ್ದರು. ನಂತರ 2013ರಲ್ಲಿ ಸುಪ್ರೀಂಕೋಟ್ ಆದೇಶದಂತೆ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದರು. ನಂತರ ಪುಣೆಯ ಯೆರವಾಡ ಜೈಲಿನಲ್ಲಿ 42 ತಿಂಗಳುಗಳ ಕಾಲ ಸೆರೆಮನೆ ವಾಸ ಅನುಭವಿಸಿದ್ದಾರೆ. (ಒನ್ ಇಂಡಿಯಾ ಸುದ್ದಿ)
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ..












Click it and Unblock the Notifications