ಪುಣೆಯಲ್ಲಿ ಭಾರೀ ಮಳೆಗೆ ಕನಿಷ್ಠ ಹನ್ನೊಂದು ಮಂದಿ ಸಾವು
Recommended Video
ಪುಣೆ, ಸೆಪ್ಟೆಂಬರ್ 26: ಭಾರೀ ಮಳೆಯಿಂದ ಏರ್ಪಟ್ಟ ನೆರೆ ಪರಿಸ್ಥಿತಿಯಿಂದ ಆದ ಪ್ರತ್ಯೇಕ ಅವಘಡಗಳಲ್ಲಿ ಕನಿಷ್ಠ ಹನ್ನೊಂದು ಮಂದಿ ಸಾವನ್ನಪ್ಪಿದ ಘಟನೆ ಮಹಾರಾಷ್ಟ್ರದ ಪುಣೆ ಜಿಲ್ಲೆಯಲ್ಲಿ ನಡೆದಿದೆ. ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಗುರುವಾರ ಬೆಳಗ್ಗೆ ಟ್ವೀಟ್ ಮಾಡಿದ್ದು, ಪರಿಸ್ಥಿತಿಯನ್ನು ಸರ್ಕಾರ ಅವಲೋಕಿಸುತ್ತಿದೆ ಎಂದಿದ್ದಾರೆ.
ಪುಣೆಯಲ್ಲಿ ಬುಧವಾರ ರಾತ್ರಿ ಕೂಡ ಭಾರೀ ಮಳೆಯಾಗಿದೆ. ಐನೂರಕ್ಕೂ ಹೆಚ್ಚು ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡಲಾಗಿದೆ. ಆದರೆ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ ಎಂದು ಅಗ್ನಿಶಾಮಕ ದಳದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

"ಪುಣೆ ಸುತ್ತ ಮುತ್ತ ಭಾರೀ ಮಳೆಯಿಂದ ಜೀವ ಹಾನಿ ಆಗಿರುವುದು ನೋವಿನ ಸಂಗತಿ. ಕುಟುಂಬಗಳಿಗೆ ನನ್ನ ತೀವ್ರ ಸಂತಾಪ ಸೂಚಿಸುತ್ತೇನೆ. ಅಗತ್ಯ ಇರುವ ಎಲ್ಲ ನೆರವನ್ನು ನೀಡುತ್ತಿದ್ದೇವೆ. ರಾಜ್ಯ ವಿಪತ್ತು ನಿರ್ವಹಣಾ ತಂಡದ ಅಧಿಕಾರಿಗಳು ಹಾಗೂ ಕಂಟ್ರೋಲ್ ರೂಮ್ ನಿರಂತರವಾಗಿ ಪುಣೆ ಕಲೆಕ್ಟರ್ ಹಾಗೂ ಪಿಎಂಸಿ ಜತೆಗೆ ಸಂಪರ್ಕದಲ್ಲಿ ಇದ್ದಾರೆ" ಎಂದು ಫಡ್ನವೀಸ್ ಟ್ವೀಟ್ ಮಾಡಿದ್ದಾರೆ.
100+ mm of heavy rain within 3-4 hours floods Pune, roads have turned into rivers. Stay safe & avoid travel. 🙏 #PuneRains
— Sir Jadeja fan (@SirJadeja) September 25, 2019
Emergency helplines:
Disaster Mgmt. : 020-25501269, 9689931511
Fire Brigade: 020-101, 9689931991
Police: 020-26208100, 020-25657171pic.twitter.com/e6yt0Zk5lg
ಅರ್ಣೇಶ್ವರ ಪ್ರದೇಶ ವೊಂದರಲ್ಲೇ ಬುಧವಾರ ರಾತ್ರಿ ಗೋಡೆ ಕುಸಿದು ಒಂಬತ್ತು ವರ್ಷದ ಬಾಲಕ ಸೇರಿ ಐವರು ಸಾವನ್ನಪ್ಪಿದ್ದಾರೆ. ಗುರುವಾರ ಬೆಳಗ್ಗೆ ಮಳೆ ನಿಂತಿದೆ. ಆದರೆ ತಗ್ಗು ಪ್ರದೇಶಗಳಲ್ಲಿ ಇನ್ನೂ ನೀರು ನಿಂತಿದೆ. ಗೋಡೆ ಕುಸಿತ, ಮರ ಬುಡಮೇಲು ಆಗಿರುವಂಥ ಹಲವು ವರದಿಗಳು ಬಂದಿವೆ.
Situation in sahakarnagar #Pune due to yesterday rainfall. #punerains #punerain pic.twitter.com/C8o5h3h8HH
— SkymetWeather (@SkymetWeather) September 26, 2019
ಪುಣೆಯ ಸುತ್ತ ಮುತ್ತ ಬುಧವಾರ ಸುರಿದ ಭಾರೀ ಮಳೆಗೆ ತಗ್ಗು ಪ್ರದೇಶದಲ್ಲಿ ಪ್ರವಾಹ ಸ್ಥಿತಿ ಏರ್ಪಟ್ಟಿದೆ. ಸಿಂಘಡ್ ರಾಸ್ತೆ, ಧನಕ್ ವಾಡಿ, ಬಾಲಾಜಿನಗರ್, ಅಂಬೇಗಾಂವ್, ಸಹಕಾರ್ ನಗರ್, ಪಾರ್ವತಿ, ಕೊಲ್ಹೇವಾಡಿ ಹಾಗೂ ಕಿರ್ಕಾತ್ ವಾಡಿ, ರಣ್ ಪೈಸ್ ನಲ್ಲಿ ಮಳೆ ನೀರು ನಿಂತಿತ್ತು.
-
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Summer Walking: ಬೇಸಿಗೆಯಲ್ಲಿ ವಾಕಿಂಗ್ ಮಾಡುವವರು ಈ ನಿಯಮ ತಪ್ಪದೇ ಪಾಲಿಸಿ.. -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್












Click it and Unblock the Notifications