ಹೈದರಾಬಾದ್ ಮೂಲದ ಇನ್ಫಿ ಟೆಕ್ಕಿ ಶವ ಲೋನಾವಾಲ ಕಣಿವೆಯಲ್ಲಿ ಪತ್ತೆ
ಪುಣೆ, ಸೆ. 16: ಪುಣೆಯ ಹಿಂಜೆವಾಡಿ ಐಟಿ ಪಾರ್ಕಿನ ಇನ್ಫೋಸಿಸ್ ಕಂಪನಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ 24 ವರ್ಷ ವಯಸ್ಸಿನ ಹೈದರಾಬಾದ್ ಮೂಲದ ಮಹಿಳಾ ಟೆಕ್ಕಿ ಶವ ಕೊನೆಗೂ ಪತ್ತೆಯಾಗಿದೆ. ಲೋನಾವಾಲದ ಕಣಿವೆಯಲ್ಲಿ ನಾಪತ್ತೆಯಾಗಿದ್ದ ಅಲಿಜಾ ರಾಣಾರನ್ನು ಹುಡುಕುವಲ್ಲಿ 32 ಮಂದಿ ಟ್ರೆಕ್ಕರ್ಸ್ ನೆರವಾಗಿದ್ದಾರೆ.
ಲೋನಾವಾಲಾದ ಲಯನ್ಸ್ ಪಾಯಿಂಟ್ ಸೆ.12ರಂದು ಬಂದಿದ್ದ ರಾಣಾ ನಂತರ ನಾಪತ್ತೆಯಾಗಿದ್ದರು. ಹತ್ತಿರದಲ್ಲೇ ಆಕೆ ಬ್ಯಾಗ್ ಸಿಕ್ಕಿತ್ತು. ಸ್ಥಳೀಯ ಚಾರಣಿಗರ ಸಹಾಯದಿಂದ ಕಾರ್ಯಾಚರಣೆ ಆರಂಭಿಸಿದ ಪೊಲೀಸರಿಗೆ ಸುಮಾರು 90 ಗಂಟೆಗಳ ಕಾರ್ಯಾಚರಣೆ ನಂತರ ಸುಮಾರು 300 ಅಡಿ ಆಳದ ಕಣಿವೆಯಲ್ಲಿ ಸಿಕ್ಕಿದೆ.
ಶಿವದುರ್ಗ್ ಮಿತ್ರ ಟೆಕ್ಕಿಂಗ್ ಗುಂಪಿನ 32 ಟ್ರೆಕ್ಕರ್ ಗಳ ನೆರವಿನಿಂದ ಲಯನ್ಸ್ ಪಾಯಿಂಟ್ ನಿಂದ ಶೋಧ ಕಾರ್ಯ ಆರಂಭಿಸಲಾಯಿತು. ಸತತ ಮಳೆ, ಮಂಜು ಮುಸುಕಿದ ವಾತಾವರಣದಲ್ಲಿ ಹುಡುಕಾಟ ಕಷ್ಟವಾಗಿತ್ತು. ಭಾನುವಾರದಂದು ರಾಹುಲ್ ದೇಶ್ ಮುಖ್ ಹಾಗೂ ಪ್ರಣಾಯ್ ಅಂಬೋರೆ ಎಂಬ ಇಬ್ಬರು ಯುವಕರು rappelling ಮೂಲಕ ಹಗ್ಗದ ನೆರವು, ವಾಕಿ ಟಾಕಿ ಸಂಪರ್ಕದ ಮೂಲಕ ಕಣಿವೆ ಆಳಕ್ಕಿಳಿದು ಹುಡುಕಿದಾಗ ರಾಣಾ ಶವ ಪತ್ತೆಯಾಗಿದೆ. ಸುಮಾರು 3 ಗಂಟೆಗಳ ಕಾಲ ಕಾರ್ಯಾಚರಣೆ ಬಳಿಕ ಶವವನ್ನು ಮೇಲಕ್ಕೆತ್ತಲಾಗಿದೆ.

ನಾಪತ್ತೆ ಪ್ರಕರಣ ದಾಖಲಿಸಿಕೊಂಡಿದ್ದ ಲೋನಾವಾಲ ಪೊಲೀಸರು ಈಗ ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಸಾವಿಗೆ ನಿಖರ ಕಾರಣ ಕಂಡು ಬಂದಿಲ್ಲ, ಕಾಲು ಜಾರಿ ಕಣಿವೆಗೆ ಬಿದ್ದಿರಬಹುದು, ಆತ್ಮಹತ್ಯೆ ಮಾಡಿಕೊಂಡಿರಬಹುದು, ಈ ಬಗ್ಗೆ ಆಕೆ ಸಹದ್ಯೋಗಿ, ಕುಟುಂಬಸ್ಥರ ಹೇಳಿಕೆ ಪಡೆದು ವಿಚಾರಣೆ ನಡೆಸಲಾಗುವುದು ಎಂದು ಹೇಳಿದ್ದಾರೆ.
-
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ












Click it and Unblock the Notifications