ಕಾನ್ಪುರ್ ಘರ್ಷಣೆ: 'ಬಿಜೆಪಿ ಭಸ್ಮಾಸುರರ ಬಣ್ಣ' ಕಾಂಗ್ರೆಸ್ ಟ್ವೀಟ್
ಲಕ್ನೋ ಜೂನ್ 04: ಕಾನ್ಪುರದಲ್ಲಿ ಶುಕ್ರವಾರದ ಪ್ರಾರ್ಥನೆಯ ನಂತರ ಎರಡು ಗುಂಪುಗಳ ನಡುವೆ ನಡೆದ ಹಿಂಸಾತ್ಮಕ ಘರ್ಷಣೆ ಮತ್ತು ಕಲ್ಲು ತೂರಾಟಕ್ಕೆ ಬಿಜೆಪಿ ವಕ್ತಾರರಾದ ನೂಪುರ್ ಶರ್ಮಾ ಕಾರಣ ಎಂದು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಆರೋಪಿಸಿದ್ದಾರೆ. ಬಿಜೆಪಿ ವಕ್ತಾರರಾದ ನೂಪುರ್ ಶರ್ಮಾ ಅವರನ್ನು ಬಂಧಿಸುವಂತೆ ಎಸ್ಪಿ ಮುಖ್ಯಸ್ಥರು ಒತ್ತಾಯಿಸಿದ್ದಾರೆ. ಇದರೊಂದಿಗೆ ಶಾಂತಿ ಕಾಪಾಡುವಂತೆ ಜನತೆಗೆ ಮನವಿ ಮಾಡಿದ್ದಾರೆ.
ಬಿಜೆಪಿ ವಕ್ತಾರರಾದ ನೂಪುರ್ ಶರ್ಮಾ ಅವರ ಹೇಳಿಕೆಯಿಂದ ಮುಸ್ಲಿಂ ಸಮಾಜದ ಜನರಲ್ಲಿ ಅಸಮಾಧಾನವಿದೆ, ಈ ಕಾರಣದಿಂದಾಗಿ ಕಾನ್ಪುರದಲ್ಲಿ ಶುಕ್ರವಾರದ ಪ್ರಾರ್ಥನೆಯ ನಂತರ ಗದ್ದಲ ಉಂಟಾಗಿ ಪರಿಸ್ಥಿತಿ ಉದ್ವಿಗ್ನವಾಗಿದೆ ಎಂದು ಅಖಿಲೇಶ್ ದೂರಿದ್ದಾರೆ.
ಇತ್ತೀಚೆಗೆ ನಡೆದ ಟಿವಿ ಕಾರ್ಯಕ್ರಮದಲ್ಲಿ ಪ್ರವಾದಿ ಮೊಹಮ್ಮದ್ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡುವ ಮೂಲಕ ಧಾರ್ಮಿಕ ಭಾವನೆಗೆ ಧಕ್ಕೆ ತಂದಿದ್ದಾರೆನ್ನುವ ಆರೋಪ ಮೇಲೆ ಬಿಜೆಪಿ ವಕ್ತಾರರಾದ ನೂಪುರ್ ಶರ್ಮಾ ಪ್ರಕರಣದ ದಾಖಲಾಗಿದೆ. ಶರ್ಮಾ ಹೇಳಿಕೆಯಿಂದಾಗಿ ಕಾನ್ಪುರದಲ್ಲಿ ಗಲಾಟೆ ನಡೆದಿದೆ ಎಂದು ಎಸ್ಪಿ ನಾಯಕ ಅಖಿಲೇಶ್ ಯಾದವ್ ದೂರಿದ್ದಾರೆ.

ಶಾಂತಿಯನ್ನು ಕಾಪಾಡುವಂತೆ ಮನವಿ
ಕಾನ್ಪುರದ ಗಲಾಟೆ ಕುರಿತು ಟ್ವೀಟ್ ಮಾಡಿರುವ ಅಖಿಲೇಶ್ ಯಾದವ್, "ಅವರ ಘನತೆವೆತ್ತ ರಾಷ್ಟ್ರಪತಿ, ಪ್ರಧಾನಿ ಮತ್ತು ಮುಖ್ಯಮಂತ್ರಿಗಳು ನಗರದಲ್ಲಿದ್ದರೂ, ಪೊಲೀಸರು ಮತ್ತು ಗುಪ್ತಚರ ವೈಫಲ್ಯದಿಂದಾಗಿ, ಬಿಜೆಪಿ ವಕ್ತಾರರು ನೂಪುರ್ ಶರ್ಮಾ ನೀಡಿದ ಪ್ರಚೋದನಕಾರಿ ಹೇಳಿಕೆಯಿಂದಾಗಿ, ಕಾನ್ಪುರದಲ್ಲಿ ಅಶಾಂತಿ ಬುಗಿಲೆದ್ದಿದೆ. ಇದರಿಂದ ಬಿಜೆಪಿ ನಾಯಕನನ್ನು ಬಂಧಿಸಬೇಕು. ಶಾಂತಿಯನ್ನು ಕಾಪಾಡುವಂತೆ ನಾವು ಎಲ್ಲರಿಗೂ ಮನವಿ ಮಾಡುತ್ತಿದ್ದೇವೆ" ಎಂದಿದ್ದಾರೆ.
ಯುಪಿ ಕಾಂಗ್ರೆಸ್ನ ಅಧಿಕೃತ ಟ್ವಿಟ್ಟರ್ ಹ್ಯಾಂಡಲ್, "ಬಿಜೆಪಿ ಜನಸಮೂಹ ವ್ಯವಸ್ಥೆಯ ರೂಪದಲ್ಲಿ ಬೆಳೆಸಿದ ಭಸ್ಮಾಸುರಗಳು ಈಗ ತಮ್ಮ ಬಣ್ಣಗಳನ್ನು ತೋರಿಸುತ್ತಿದ್ದಾರೆ. ದೇಶದ ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿ ಎಲ್ಲರೂ ಕಾನ್ಪುರದವರು. ಹಿಂಸಾಚಾರ ಭುಗಿಲೆದ್ದ ನಂತರವೂ ಯುಪಿಯಲ್ಲಿ ಕಾನೂನು ಸುವ್ಯವಸ್ಥೆ ಮೌನವಾಗಿದೆ. ಶಾಂತಿ ಕಾಪಾಡುವಂತೆ ಸಾರ್ವಜನಿಕರಲ್ಲಿ ಮನವಿ'' ಮಾಡಲಾಗಿದೆ.

ಪೊಲೀಸರಿಂದ ಲಾಠಿ ಪ್ರಹಾರ
ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿಯ ನಡುವೆ ಬಿಜೆಪಿ ವಕ್ತಾರರಾದ ನೂಪುರ್ ಶರ್ಮಾ ಅವರ ಹೇಳಿಕೆಯ ಕುರಿತು ಶುಕ್ರವಾರದ ಪ್ರಾರ್ಥನೆಯ ನಂತರ ಕಾನ್ಪುರದಲ್ಲಿ ಗದ್ದಲ ಉಂಟಾಯಿತು. ಗುಂಪನ್ನು ನಿಯಂತ್ರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿ ಜನರನ್ನು ಚದುರಿಸಿದರು. ವಾಸ್ತವವಾಗಿ, ಪ್ರವಾದಿ ಮುಹಮ್ಮದ್ ಅವರ ಸಂದರ್ಭದಲ್ಲಿ ನೂಪುರ್ ಶರ್ಮಾ ನೀಡಿದ ಹೇಳಿಕೆಯ ಮೇಲೆ ಮುಸ್ಲಿಂ ಸಮುದಾಯವು ಮಾರುಕಟ್ಟೆ ಬಂದ್ಗೆ ಕರೆ ನೀಡಿತ್ತು. ಪೊಲೀಸ್ ಭದ್ರತೆಯ ನಡುವೆ ಶುಕ್ರವಾರದ ಪ್ರಾರ್ಥನೆ ಸಲ್ಲಿಸಲಾಯಿತು. ಇದಾದ ನಂತರ ಯತೀಂಖಾನಾದಲ್ಲಿರುವ ಸದ್ಭಾವನಾ ಚೌಕಿ ಬಳಿ ಎರಡೂ ಕಡೆ ಮುಖಾಮುಖಿ ನಡೆದಿದೆ. ಜನ ಜಮಾಯಿಸಿದಾಗ ಪೊಲೀಸರು ಲಾಠಿ ಪ್ರಹಾರ ನಡೆಸಿ ಜನರನ್ನು ಚದುರಿಸಿದರು. ಪರಿಸ್ಥಿತಿ ಉದ್ವಿಗ್ನವಾಯಿತು.

ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ವಿರುದ್ಧ ಪ್ರಕರಣ
ಇತ್ತೀಚೆಗೆ ನಡೆದ ಟಿವಿ ಕಾರ್ಯಕ್ರಮದಲ್ಲಿ ಪ್ರವಾದಿ ಮೊಹಮ್ಮದ್ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡುವ ಮೂಲಕ ಧಾರ್ಮಿಕ ಭಾವನೆಗೆ ಧಕ್ಕೆ ತಂದಿದ್ದಾರೆನ್ನುವ ಆರೋಪದ ಮೇಲೆ ಭಾರತೀಯ ಜನತಾ ಪಕ್ಷದ (ಬಿಜೆಪಿ) ವಕ್ತಾರರಾದ ನೂಪುರ್ ಶರ್ಮಾ ವಿರುದ್ಧ ಕೋಂಡ್ವಾ ಪೊಲೀಸ್ ಠಾಣೆಯಲ್ಲಿ ಮಂಗಳವಾರ ತಡರಾತ್ರಿ ಎಫ್ಐಆರ್ ದಾಖಲಾಗಿದೆ.
ನ್ಯಾಶಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್ಸಿಪಿ) ಮಾಜಿ ಕಾರ್ಪೊರೇಟರ್, ಕೊಂಡ್ವಾ ನಿವಾಸಿ ಅಬ್ದುಲ್ ಗಫೂರ್ ಅಹ್ಮದ್ ಪಠಾಣ್ (47) ಅವರು ಶರ್ಮಾ ವಿರುದ್ಧ ದೂರು ದಾಖಲಿಸಿದ್ದಾರೆ. ಮೇ 28 ರಂದು ಟಿವಿ ಕಾರ್ಯಕ್ರಮದಲ್ಲಿ ಪ್ರವಾದಿ ಮೊಹಮ್ಮದ್ ಬಗ್ಗೆ ಆಕ್ಷೇಪಾರ್ಹ ಹೇಳಿಕೆಯನ್ನು ಪರಿಶೀಲಿಸಿದ ನಂತರ ಶರ್ಮಾ ವಿರುದ್ಧ ಎಫ್ಐಆರ್ ದಾಖಲಾಗಿದೆ ಎಂದು ಅಬ್ದುಲ್ ಗಫೂರ್ ಅಹ್ಮದ್ ಆರೋಪಿಸಿದ್ದಾರೆ.

ಮುಸ್ಲಿ ಸಂಘಟನೆಗಳಿಂದ ಪೊಲೀಸರ ವಿರುದ್ಧ ಆರೋಪ
ಆರಂಭದಲ್ಲಿ ಶಾರ್ಮಾ ವಿರುದ್ಧ ದೂರು ಸ್ವೀಕರಿಸಲು ಪೊಲೀಸರು ಸಿದ್ದರಿರಲಿಲ್ಲ. ಆದರೆ ಪಾಪ್ಯುಲರ್ ಫ್ರೆಂಟ್ ಆಫ್ ಇಂಡಿಯಾ ಸೇರಿದಂತೆ ಹಲವಾರು ಮುಸ್ಲಿ ಸಂಘಟನೆಗಳು ಒಗ್ಗೂಡಿದಾಗ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ ಎಂದು ಪಠಾಣ್ ಆರೋಪಿಸಿದ್ದಾರೆ. ಶರ್ಮಾ ಮಾಡಿರುವ ಕಾಮೆಂಟ್ಗಳು ತಮ್ಮ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದೆ ಎಂದು ಆರೋಪಿಸಿದ ಮಾಜಿ ಕಾರ್ಪೊರೇಟರ್ ಪಠಾಣ್ ಎಫ್ಐಆರ್ ದಾಖಲಿಸಿದ್ದಾರೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಕೊಂಡ್ವಾ ಪೊಲೀಸ್ ಠಾಣೆಯ ಹಿರಿಯ ಇನ್ಸ್ಪೆಕ್ಟರ್ ಸರ್ದಾರ್ ಪಾಟೀಲ್ ಹೇಳಿದ್ದಾರೆ.
Recommended Video
-
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು?












Click it and Unblock the Notifications