ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

'ಮುಂಜಾಗ್ರತೆ'ಗಾಗಿ ಪತಿಯೊಂದಿಗೆ ಪತ್ನಿಯಿಂದಲೂ ನಾಮಪತ್ರ ಸಲ್ಲಿಕೆ!

|
Google Oneindia Kannada News

ಮುಂಬೈ, ಏಪ್ರಿಲ್ 5: ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾದ ಸುಜಯ್ ವಿಖೆ ಪಾಟೀಲ್ ಅಹ್ಮದ್‌ನಗರದಿಂದ ನಾಮಪತ್ರ ಸಲ್ಲಿಸಿದ್ದಾರೆ. ಅದೇ ಕ್ಷೇತ್ರದಿಂದ ಅವರ ಪತ್ನಿಯೂ ನಾಮಪತ್ರ ಸಲ್ಲಿಸಿದ್ದಾರೆ.

ತಮ್ಮ ನಾಮಪತ್ರ ಸಲ್ಲಿಕೆಯನ್ನು ಮುಂಜಾಗ್ರತೆಯ ಕ್ರಮ ಎಂದು ಅವರ ಪತ್ನಿ ಧನಶ್ರೀ ಹೇಳಿಕೆ ನೀಡಿದ್ದಾರೆ. ಸುಜಯ್ ವಿಖೆ ಪಾಟೀಲ್ ಅವರ ನಾಮಪತ್ರದಲ್ಲಿ ಯಾವುದೇ ತಾಂತ್ರಿಕ ದೋಷಗಳು ಉಂಟಾಗಿ ತಿರಸ್ಕೃತವಾದರೆ ಎಂಬ ಕಾರಣಕ್ಕೆ ತಾವೂ ನಾಮಪತ್ರ ಸಲ್ಲಿಸಿರುವುದಾಗಿ ಅವರು ಹೇಳಿದ್ದಾರೆ.

Lok Sabha elections 2019 bjp ahmednagar candidate sujay vikhe patils wife files nomination same seat

ಸೊಲ್ಲಾಪುರ ಲೋಕಸಭಾ ಕ್ಷೇತ್ರದ ಪರಿಚಯಸೊಲ್ಲಾಪುರ ಲೋಕಸಭಾ ಕ್ಷೇತ್ರದ ಪರಿಚಯ

ಮಹಾರಾಷ್ಟ್ರದ ಅಹ್ಮದ್‌ನಗರ ಲೋಕಸಭೆ ಕ್ಷೇತ್ರವನ್ನು ಕಾಂಗ್ರೆಸ್‌ಗೆ ಬಿಟ್ಟುಕೊಡಲು ಎನ್‌ಸಿಪಿ ಆಕ್ಷೇಪ ವ್ಯಕ್ತಪಡಿಸಿತ್ತು. ಹೀಗಾಗಿ ಸೀಟು ಹಂಚಿಕೆಯಲ್ಲಿ ಅಹ್ಮದ್‌ನಗರ ಎನ್‌ಸಿಪಿ ಪಾಲಾಗುವುದನ್ನು ಖಂಡಿಸಿ ಸುಜಯ್ ಅವರು ಪಕ್ಷ ತ್ಯಜಿಸಿದ್ದರು. ಸುಜಯ್, ಮಹಾರಾಷ್ಟ್ರ ವಿಧಾನಸಭೆಯ ವಿರೋಧ ಪಕ್ಷ ನಾಯಕರಾಗಿರುವ ರಾಧಾಕೃಷ್ಣ ವಿಖೆ ಪಾಟೀಲ್ ಅವರ ಮಗ.

ಕಾಂಗ್ರೆಸ್ ತೊರೆದ ಪತಿಯ ಬೆಂಬಲವನ್ನು ಪತ್ನಿ ಧನಶ್ರೀ ಬೆಂಬಲಿಸಿದ್ದರು. ಅವರು ಬಿಜೆಪಿ ಸೇರುವ ನಿರ್ಧಾರವನ್ನು ಪತ್ನಿಯಾಗಿ ಬೆಂಬಲಿಸುತ್ತೇನೆ. ನನಗೆ ರಾಜಕಾರಣದಲ್ಲಿ ಆಸಕ್ತಿಯಿಲ್ಲ. ಮನೆಯಲ್ಲಿ ನಾವು ರಾಜಕಾರಣದ ಬಗ್ಗೆ ಚರ್ಚೆಯನ್ನೂ ನಡೆಸುವುದಿಲ್ಲ. ಹೀಗಾಗಿ ಯಾವುದೇ ಗೊಂದಲಗಳು ಉಂಟಾಗುವುದಿಲ್ಲ ಎಂದು ಅವರು ತಿಳಿಸಿದ್ದಾರೆ.

English summary
Lok Sabha elections 2019: BJP Ahmednagar candidate Sujay Vikhe Patil's wife Dhanashri on Thursday file nomination from same seat as a 'precautionary' measure.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X