ಪುಣೆಯ ಬಟ್ಟೆ ಗೋದಾಮಿನಲ್ಲಿ ಬೆಂಕಿ: ಗಾಢ ನಿದ್ದೆಯಲ್ಲಿದ್ದ ಐವರ ಸಜೀವ ದಹನ
ಪುಣೆ, ಮೇ 09: ಮಹಾರಾಷ್ಟ್ರದ ಪುಣೆ ಬಳಿಯ ಹಳ್ಳಿಯೊಂದರಲ್ಲಿ ಬಟ್ಟೆಯ ಗೋದಾಮಿನಲ್ಲಿ ಆಕಸ್ಮಿಕವಾಗಿ ಹೊತ್ತಿಕೊಂಡ ಬೆಂಕಿಯಿಂದಾಗಿ ಐವರು ದುರ್ಮರಣಕ್ಕೀಡಾದ ಘಟನೆ ನಡೆದಿದೆ.
ಗುರುವಾರ ಬೆಳಗ್ಗಿನ ಜಾವ ಪುಣೆ ಬಳಿಯ ಉರುಲಿ ದೆವಾಚಿ ಎಂಬ ಹಳ್ಳಿಯಲ್ಲಿ ಈ ಘಟನೆ ಸಂಭವಿಸಿದ್ದು, ಗೋದಾಮಿನಲ್ಲಿ ಕಾರ್ಮಿಕರು ಗಾಢ ನಿದ್ದೆಯಲ್ಲಿದ್ದ ಸಂದರ್ಭದಲ್ಲಿ ಬೆಂಕಿ ಹೊತ್ತಿಕೊಂಡಿದೆ.
30 ಮಂದಿ ಜೀವ ಉಳಿಸಿ, ಬೆಂಕಿಯಲ್ಲಿ ಬೆಂದು ಪ್ರಾಣಬಿಟ್ಟ ಶ್ವಾನ
ಈ ಘಟನೆಯಲ್ಲಿ ಹಲವರು ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತದೆ. ಬೆಂಕಿ ಹೊತ್ತಿಕೊಂಡಿದ್ದು ಹೇಗೆ ಎಂಬ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.
ಕಳೆದ ವರ್ಷ ಡಿಸೆಂಬರ್ ನಲ್ಲಿಮುಂಬೈಯ ಬಹುಮಹಡಿ ಕಟ್ಟಡವೊಂದರಲ್ಲಿ ಅಗ್ನಿ ಆಕಸ್ಮಿಕ ಸಂಭವಿಸಿದ ಪರಿಣಾಮ ಐವರು ದುರ್ಮರಣಕ್ಕೀಡಾಗಿದ್ದರು.
ಅಮೆರಿಕದಲ್ಲಿ ಅಗ್ನಿ ಆಕಸ್ಮಿಕ: ತೆಲಂಗಾಣ ಮೂಲದ ಮೂವರು ಮಕ್ಕಳು ಸಾವು
ಮುಂಬೈಯ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ಆಕಸ್ಮಿಕದಲ್ಲಿ ಹತ್ತಕ್ಕೂ ಹೆಚ್ಚು ಜನ ಮೃತರಾಗಿದ್ದರು. ಅಂಧೇರಿ ಉಪನಗರದ ಮರೋಲ್ ನಲ್ಲಿರುವ ಸರಕಾರ ನಡೆಸುವ ಇಎಸ್ ಐಸಿ ಕಾಮ್ ಗರ್ ಆಸ್ಪತ್ರೆಯಲ್ಲಿ ಅಗ್ನಿ ಆಕಸ್ಮಿಕ ಸಂಭವಿಸಿತ್ತು. 7 ಅಂತಸ್ತಿನ ಕಟ್ಟಡದ ಗ್ರೌಂಡ್ ಫ್ಲೋರ್ ನಲ್ಲಿ ರಬ್ಬರ್ ನಂಥ ಕೆಲವು ಸಾಮಗ್ರಿಗಳನ್ನು ಸಂಗ್ರಹಿಸಲಾಗಿತ್ತು. ಬೆಂಕಿ ಇಲ್ಲಿಂದಲೇ ಆರಂಭವಾಗಿದೆ ಎನ್ನಲಾಗಿತ್ತು.