ಕಾರ್ನಲ್ಲಿ ಬೆಂಕಿ: ಸುಟ್ಟು ಕರಕಲಾದ ಎನ್ಸಿಪಿ ಮುಖಂಡ
ಪುಣೆ, ಅಕ್ಟೋಬರ್ 14: ಮಹಾರಾಷ್ಟ್ರದ ನಾಸಿಕ್ನ ಎನ್ಸಿಪಿ ಮುಖಂಡರೊಬ್ಬರು ಕಾರ್ನಲ್ಲಿ ಉಂಟಾದ ಬೆಂಕಿ ಅವಘಡದಲ್ಲಿ ಸಜೀವ ದಹನಗೊಂಡ ಹೃದಯ ವಿದ್ರಾವಕ ಘಟನೆ ಮಂಗಳವಾರ ಸಂಜೆ ನಡೆದಿದೆ.
ಎನ್ಸಿಪಿ ಮುಖಂಡ ಸಂಜಯ್ ಶಿಂಧೆ ಅವರು ಮುಂಬೈ-ಆಗ್ರಾ ಹೆದ್ದಾರಿಯಲ್ಲಿ ತಮ್ಮ ಕಾರ್ನಲ್ಲಿ ಪ್ರಯಾಣಿಸುತ್ತಿದ್ದರು. ಪಿಂಪಲ್ಗಾವನ್ ಬಸ್ವಂತ್ ಟೋಲ್ ಪ್ಲಾಜಾ ಸಮೀಪ ಕಾರ್ನಲ್ಲಿ ವೈರಿಂಗ್ನಲ್ಲಿ ಉಂಟಾದ ಸಮಸ್ಯೆಯಿಂದ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡಿದೆ.
ಶಾರ್ಟ್ ಸರ್ಕ್ಯೂಟ್ನಿಂದ ಉಂಟಾದ ಕಿಡಿ ಏಕಾಏಕಿ ದೊಡ್ಡ ಜ್ವಾಲೆಗಳನ್ನು ಸೃಷ್ಟಿಸಿದೆ. ಕಾರ್ನಲ್ಲಿ ಇರಿಸಿದ್ದ ಹ್ಯಾಂಡ್ ಸ್ಯಾನಿಟೈಸರ್ ಬೆಂಕಿ ವೇಗವಾಗಿ ಆವರಿಸಲು ಕಾರಣವಾಗಿದೆ. ಬೆಂಕಿ ಜೋರಾದಂತೆ ಕಾರ್ನ ಸೆಂಟ್ರಲ್ ಲಾಕ್ ವ್ಯವಸ್ಥೆಯು ಸಕ್ರಿಯಗೊಂಡು ಎಲ್ಲ ಬಾಗಿಲುಗಳೂ ಜಾಮ್ ಆಗಿವೆ.

ಬಾಗಿಲು ತೆರೆಯಲಾಗದೆ ಒಳಗೆ ಸಿಕ್ಕಿಕೊಂಡ ಶಿಂಧೆ, ಕಿಟಕಿ ಒಡೆದು ಪಾರಾಗಲು ಪ್ರಯತ್ನಿಸಿದ್ದಾರೆ. ಆದರೆ ಆಗಲೇ ತೀವ್ರಗೊಂಡಿದ್ದ ಬೆಂಕಿ ಅವರನ್ನು ಸಜೀವವಾಗಿ ದಹಿಸಿದೆ. ಕಾರ್ನಲ್ಲಿ ಬೆಂಕಿ ಉರಿಯುತ್ತಿರುವುದನ್ನು ಗಮನಿಸಿದ ಸ್ಥಳೀಯರು ಬೆಂಕಿ ನಂದಿಸಿ ಶಿಂಧೆ ಅವರನ್ನು ರಕ್ಷಿಸಲು ಪ್ರಯತ್ನಿಸಿದ್ದಾರೆ. ಅಗ್ನಿಶಾಮಕ ದಳಕ್ಕೂ ಕರೆ ಮಾಡಿದ್ದಾರೆ. ಆದರೆ ಶಿಂಧೆ ಅವರನ್ನು ಉಳಿಸಲು ಸಾಧ್ಯವಾಗಲಿಲ್ಲ. ಅಗ್ನಿ ಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸಿದ ಬಳಿಕವೇ ಅದರಲ್ಲಿ ಇದ್ದ ವ್ಯಕ್ತಿ ಸಂಜಯ್ ಶಿಂಧೆ ಎನ್ನುವುದು ಗೊತ್ತಾಗಿದೆ.
ಶಿಂಧೆ ಅವರು ನಾಸಿಕ್ನಲ್ಲಿ ದ್ರಾಕ್ಷಿ ಹಣ್ಣು ರಫ್ತುದಾರರಾಗಿದ್ದಾರೆ. ನಾಸಿಕ್ ವೈನ್ ಉದ್ಯಮಕ್ಕೆ ಹೆಸರುವಾಸಿ. ತಮ್ಮ ದ್ರಾಕ್ಷಿ ತೋಟಕ್ಕೆ ಕೀಟನಾಶಕ ಖರೀದಿಸಲು ಅವರು ಪಿಂಪಲ್ಗಾವನ್ಗೆ ತೆರಳುತ್ತಿದ್ದರು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications