'ನಗರ ನಕ್ಸಲ'ರಿಗೆ ಬಹಿರಂಗ ಬೆಂಬಲ ನೀಡಿದ ನಿಜ ನಕ್ಸಲರು!
ಪುಣೆ, ಸೆಪ್ಟೆಂಬರ್ 10: 'ನಗರ ನಕ್ಸಲ'ರ ಹಣೆಪಟ್ಟೆ ಹಚ್ಚಿಸಿಕೊಂಡು ಪುಣೆ ಪೊಲೀಸರಿಂದ ಬಂಧಿತರಾಗಿ ಈಗ ಗೃಹ ಬಂಧನದಲ್ಲಿರುವ ವಿಚಾರವಾದಿಗಳಿಗೆ, ನಿಜ ನಕ್ಸಲರು ಬೆಂಬಲ ನೀಡಿದ್ದಾರೆ.
ಮಹಾರಾಷ್ಟ್ರದ ಪೆರಿಮಿಲಿ ಎಂಬಲ್ಲಿ ನಿಷೇಧಿತ ಮಾವೋವಾದಿ ಸಂಘಟನೆಯ ಸದಸ್ಯರು ಬ್ಯಾನರ್ ಅನ್ನು ಹಾಕಿದ್ದು, ಬಂಧಿತವಾಗಿರುವ ವಿಚಾರವಾದಿಗಳಿಗೆ ಬೆಂಬಲ ನೀಡುವಂತಹಾ ಪೋಸ್ಟರ್ ಅದಾಗಿದೆ. ಬಂಧಿತ ವಿಚಾರವಾದಿಗಳನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಅದರಲ್ಲಿ ಬರೆಯಲಾಗಿದೆ.
ಮಾವೋವಾದಿಗಳೊಂದಿಗೆ ಸಂಬಂಧ ಹೊಂದಿದ್ದಾರೆ ಹಾಗೂ ಮೋದಿ ಅವರ ಹತ್ಯೆ ಮಾಡಲು ಸಂಚು ಮಾಡಿರುವ ಆರೋಪದಡಿಯಲ್ಲಿ ಬಂಧಿತರಾಗಿರುವ ವಿಚಾರವಾದಿಗಳು ಈ ಹೊಸ ಪೋಸ್ಟರ್ನಿಂದ ಇಕ್ಕಟ್ಟಿಗೆ ಸಿಲುಕಿದಂತಾಗಿದೆ.

'ತಮಗೆ ಯಾವುದೇ ನಿಷೇಧಿತ ಸಂಘಟನೆ ಜೊತೆ ಸಂಬಂಧ ಇಲ್ಲ' ಎಂದು ಗೃಹ ಬಂಧನದಲ್ಲಿರುವ ವಿಚಾರವಾದಿಗಳು ಹೇಳುತ್ತಿರುವ ಸಮಯದಲ್ಲಿಯೇ ಮಾವೋವಾದಿ ನಕ್ಸಲರು ಹೀಗೆ ಬೆಂಬಲ ಘೋಷಿಸಿರುವುದು ಪೊಲೀಸರ ಅನುಮಾನವನ್ನು ಬಲಗೊಳಿಸಿದೆ.
ಕವಿ ವರವರ ರಾವ್. ವಕೀಲೆ, ನಾಗರೀಕ ಹಕ್ಕುಗಳ ಹೋರಾಟಗಾರ್ತಿ ಸುಧಾ ಭಾರಧ್ವಜ್. ವಿರ್ನೋನ್ ಗೋನ್ಸಾಲ್ವೀಸ್, ಅರುಣ್ ಫರೇರಿಯಾ, ಗೌತಮ್ ನಾಲ್ವಾಕ್ಕಾ ಅವರುಗಳನ್ನು ಪೊಲೀಸರು ಬಂಧಿಸಿದ್ದರು. ಇವರಿಗೆ ವಿಷೇಧಿತ ಸಿಪಿಐ (ಎಂ)ನೊಂದಿಗೆ ಸಂಪರ್ಕವಿದೆ ಎಂದು ಆರೋಪಿಸಲಾಗಿತ್ತು.
ವಿಚಾರಣೆ ನಡೆಸುತ್ತಿರುವ ಸುಪ್ರಿಂಕೋರ್ಟ್ ಪ್ರಕರಣವನ್ನು ಸೆಪ್ಟೆಂಬರ್ 12ಕ್ಕೆ ಮುಂದೂಡಿತ್ತು. ಅಲ್ಲಿಯವರೆಗೆ ಬಂಧಿತ ವಿಚಾರವಾದಿಗಳನ್ನು ಗೃಹ ಬಂಧನದಲ್ಲಿ ಇಡುವಂತೆ ಆದೇಶ ನೀಡಿತ್ತು.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications