ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಷ್ಟ್ರಗೀತೆ ಹಾಡುವ ವೇಳೆ ವೇದಿಕೆಯಲ್ಲೇ ಕುಸಿದು ಬಿದ್ದ ಗಡ್ಕರಿ

|
Google Oneindia Kannada News

ಪುಣೆ, ಡಿಸೆಂಬರ್ 7: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಲೋ ಶುಗರ್‌ನಿಂದಾಗಿ ವೇದಿಕೆಯಲ್ಲಿಯೇ ಕುಸಿದು ಬಿದ್ದು ಪ್ರಜ್ಞಾಹೀನರಾದ ಘಟನೆ ಶುಕ್ರವಾರ ನಡೆದಿದೆ.

LIVE: ಚೆನ್ನೈ ವಿಮಾನ ನಿಲ್ದಾಣ ತಲುಪಿದ ಶ್ರೀ ಶಿವಕುಮಾರ ಸ್ವಾಮೀಜಿLIVE: ಚೆನ್ನೈ ವಿಮಾನ ನಿಲ್ದಾಣ ತಲುಪಿದ ಶ್ರೀ ಶಿವಕುಮಾರ ಸ್ವಾಮೀಜಿ

ಮಹಾರಾಷ್ಟ್ರದ ಅಹ್ಮದ್‌ನಗರದ ರಹೂರಿ ಕೃಷಿ ವಿಶ್ವವಿದ್ಯಾಲಯದಲ್ಲಿ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಗಡ್ಕರಿ ಭಾಗವಹಿಸಿದ್ದರು.

ಉದ್ಘಾಟನಾ ಸಮಾರಂಭದ ವೇಳೆ ಆರಂಭದಲ್ಲಿ ರಾಷ್ಟ್ರಗೀತೆ ಹಾಡಲಾಗುತ್ತಿತ್ತು. ಆಗ ಗಡ್ಕರಿ ಇದ್ದಕ್ಕಿದ್ದಂತೆ ಪ್ರಜ್ಞಾಹೀನರಾಗಿ ಕುಸಿದು ಬಿದ್ದರು.

ಸಿದ್ದಗಂಗಾ ಶ್ರೀಗಳ ಭೇಟಿಗೆ ತೆರಳಿದ್ದ ಯಡಿಯೂರಪ್ಪನವರಿಗೆ ಕಾದಿತ್ತು ಅಚ್ಚರಿ! ಸಿದ್ದಗಂಗಾ ಶ್ರೀಗಳ ಭೇಟಿಗೆ ತೆರಳಿದ್ದ ಯಡಿಯೂರಪ್ಪನವರಿಗೆ ಕಾದಿತ್ತು ಅಚ್ಚರಿ!

nitin gadkari falls unconscious maharshtra low sugar agriculture university national anthem

ಮಹಾರಾಷ್ಟ್ರ ರಾಜ್ಯಪಾಲ ಸಿ ವಿದ್ಯಾಸಾಗರ್ ರಾವ್ ಮತ್ತು ಭದ್ರತಾ ಸಿಬ್ಬಂದಿ ಕುಸಿದು ಬಿದ್ದ ಗಡ್ಕರಿ ಅವರನ್ನು ಹಿಡಿದುಕೊಂಡರು.

ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಪ್ರಾಥಮಿಕ ಚಿಕಿತ್ಸೆ ಬಳಿಕ ಅವರು ಚೇತರಿಸಿಕೊಂಡರು.

ಕೆಲವೇ ಗಂಟೆಯಲ್ಲಿ ಗಡ್ಕರಿ ತಮ್ಮ ಆರೋಗ್ಯ ಸ್ಥಿತಿಯ ಬಗ್ಗೆ ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಬಿಜೆಪಿ ಕೊಟ್ಟ ಭರವಸೆಗಳೆಲ್ಲ ಸುಳ್ಳುರೀ! ಹೀಗೆ ಹೇಳಿದ್ದು ಸಚಿವ ನಿತಿನ್ ಗಡ್ಕರಿಬಿಜೆಪಿ ಕೊಟ್ಟ ಭರವಸೆಗಳೆಲ್ಲ ಸುಳ್ಳುರೀ! ಹೀಗೆ ಹೇಳಿದ್ದು ಸಚಿವ ನಿತಿನ್ ಗಡ್ಕರಿ

'ಕಡಿಮೆ ಸಕ್ಕರೆ ಅಂಶದ ಕಾರಣದಿಂದ ಆರೋಗ್ಯದಲ್ಲಿ ವ್ಯತ್ಯಯವಾಗಿತ್ತು. ವೈದ್ಯರು ನನ್ನನ್ನು ನೋಡಿಕೊಂಡಿದ್ದು, ಈಗ ಚೇತರಿಸಿಕೊಂಡಿದ್ದೇನೆ. ನಿಮ್ಮೆಲ್ಲರ ಹಾರೈಕೆಗಳಿಗೆ ಧನ್ಯವಾದಗಳು' ಎಂದು ಅವರು ಟ್ವೀಟ್ ಮಾಡಿದ್ದಾರೆ.

English summary
Union Minister Nitin Gadkari falls unconscious during national anthem at Maharashtra's Rahuri agriculture University's convocation ceremony.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X