ಚಿತ್ರಗಳು: ಕಡಲಿನಲ್ಲಿ ಕೊಚ್ಚಿ ಹೋದ ಪುಣೆ ವಿದ್ಯಾರ್ಥಿಗಳು
ಪುಣೆ, ಫೆ.03: ಮಹಾರಾಷ್ಟ್ರದ ರಾಯಗಢದ ಮುರುದ್ ಬೀಚ್ನಲ್ಲಿ ವಿದ್ಯಾರ್ಥಿಗಳು ಕೊಚ್ಚಿ ಹೋದ ಕಹಿ ಘಟನೆಯ ನೋವು ತಿಳಿದಿರಬಹುದು. ಸೋಮವಾರ ನಡೆದ ಈ ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. ಮಂಗಳವಾರ ಬೆಳಗ್ಗೆ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆಯಾಗಿತ್ತು. ಬುಧವಾರ ಪೋಷಕರು ಪುಣೆಯ ಕಾಲೇಜಿನ ಮುಂದೆ ಪ್ರತಿಭಟನೆ ನಿರತರಾಗಿದ್ದಾರೆ.
ಪುಣೆಯ ಅಬೇದ ಇನಾಂದರ್ ಕಾಲೇಜಿನ ವಿದ್ಯಾರ್ಥಿಗಳ ಪೋಷಕರಲ್ಲಿ ಆತಂಕ ಮನೆ ಮಾಡಿದೆ. ಕನಿಷ್ಠ ನಾಲ್ಕು ವಿದ್ಯಾರ್ಥಿಗಳನ್ನು ಪೊಲೀಸರು ರಕ್ಷಿಸಿದ್ದಾರೆ. ಅಲೆಗಳ ಹೊಡೆತಕ್ಕೆ ಸಿಲುಕಿ 14 ಜೀವಗಳು ಕಳೆದು ಹೋಗಿವೆ.
ಶಿಕ್ಷಕರು ಸರಿಯಾದ ಜವಾಬ್ದಾರಿ ವಹಿಸಿದ್ದರೆ ಈ ದುರಂತ ತಪ್ಪಿಸಬಹುದಾಗಿತ್ತು ಎಂಬ ಅಭಿಪ್ರಾಯ ಕೇಳಿ ಬರುತ್ತಿದೆ. ಸಾವನ್ನಪ್ಪಿರುವವರ ವಯಸ್ಸು 19 ರಿಂದ 23ರೊಳಗೆ ಇದೆ. ಐದು ಮಂದಿ ಶಿಕ್ಷಕ ವರ್ಗ ಹಾಗೂ ಸಹಾಯಕ ಸಿಬ್ಬಂದಿ ಈ ಪಿಕ್ನಿಕ್ ಗೆ ಬಂದಿದ್ದರು.
ಸಮುದ್ರದಲ್ಲಿ ಕೊಚ್ಚಹೋಗಿದ್ದ ವಿದ್ಯಾರ್ಥಿಗಳಿಗಾಗಿ ಹುಡುಕಾಟ ನಡೆಯುತ್ತಿದ್ದು, ನೌಕಾಪಡೆ, ಕರಾವಳಿ ರಕ್ಷಣಾ ಪಡೆ ಸಿಬ್ಬಂದಿ ಪರಿಹಾರ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆ. ನೌಕಾಪಡೆ ಹೆಲಿಕ್ಯಾಪ್ಟರ್ ಮೂಲಕ ರಕ್ಷಣಾ ಕಾರ್ಯ ನಡೆಸುತ್ತಿದೆ.ಇನ್ನೂ 10 ರಿಂದ 12 ವಿದ್ಯಾರ್ಥಿಗಳ ಶವಕ್ಕಾಗಿ ಶೋಧ ಕಾರ್ಯ ಮುಂದುವರೆದಿದೆ.
ಇಷ್ಟೊಂದು ಸಾವು ನೋವಿಗೆ ಕಾರಣವೇನು? ಈ ಬಗ್ಗೆ ಯಾವ ರೀತಿ ತನಿಖೆ ನಡೆಸಲಾಗುತ್ತಿದೆ. ರಕ್ಷಣಾ ಕಾರ್ಯ ಎತ್ತ ಸಾಗಿದೆ ಎಂಬುದರ ವಿವರ ಮುಂದಿದೆ...

ಸಾವನ್ನಪ್ಪಿದವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ
ಮಹಾರಾಷ್ಟ್ರದ ರಾಯಗಢದ ಮುರುದ್ ಬೀಚ್ನಲ್ಲಿ ವಿದ್ಯಾರ್ಥಿಗಳು ಕೊಚ್ಚಿ ಹೋದ ಕಹಿ ಘಟನೆಯ ನೋವು ತಿಳಿದಿರಬಹುದು. ಸೋಮವಾರ ನಡೆದ ಈ ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. ಮಂಗಳವಾರ ಬೆಳಗ್ಗೆ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆಯಾಗಿತ್ತು. ಬುಧವಾರ ಪೋಷಕರು ಪುಣೆಯ ಕಾಲೇಜಿನ ಮುಂದೆ ಪ್ರತಿಭಟನೆ ನಿರತರಾಗಿದ್ದಾರೆ.

ಅವಳಿ ಮಕ್ಕಳನ್ನು ಕಳೆದುಕೊಂಡ ತಂದೆ
ರಫಿಯಾ, ಶಫಿಯಾ ಎಂಬ ಅವಳಿ ಮಕ್ಕಳನ್ನು ಕಳೆದುಕೊಂಡ ತಂದೆ ಮುಮ್ತಾ ಅನ್ಸಾರಿ ಅವರ ದುಃಖ ಹೇಳ ತೀರದಾಗಿದೆ. ನನಗೆ ಇನ್ನೂ ನನ್ನ ಮಕ್ಕಳು ಸಾವನ್ನಪ್ಪಿದ್ದಾರೆ ಎಂಬುದನ್ನು ನಂಬಲು ಆಗುತ್ತಿಲ್ಲ ಎನ್ನುತ್ತಿದ್ದಾರೆ.

ಪ್ರಾಣ ಉಳಿಸಿ ಪ್ರಾಣ ತೆತ್ತ ಇಫ್ತೆಕಾರ್
ಹಲವರ ಪ್ರಾಣ ಉಳಿಸಿ ಪ್ರಾಣ ತೆತ್ತ ವಿದ್ಯಾರ್ಥಿ ಇಫ್ತೆಕಾರ್ ಶೇಖ್ ಬಗ್ಗೆ ಮಾತನಾಡಿದ ಆತನ ತಮ್ಮ ಪರ್ವೇಜ್ ಶೇಖ್. ನನ್ನ ಅಣ್ಣ ಜೀವವನ್ನು ಪಣಕ್ಕಿಟ್ಟು ಕೆಲವರಿಗೆ ಜೀವ ನೀಡಿದ್ದಾನೆ. ಕ್ರಿಕೆಟ್ ಎಂದರೆ ಪ್ರಾಣ ಬಿಡುತ್ತಿದ್ದ ಆತ ಈಗ ಹೀರೋ ರೀತಿ ಪ್ರಾಣ ಬಿಟ್ಟಿದ್ದಾನೆ ಎಂದು ಕಣ್ಣೀರಿಟ್ಟಿದ್ದಾನೆ. ಚಿತ್ರದಲ್ಲಿ: ದುರಂತದಲ್ಲಿ ಬದುಕುಳಿದ ವಿದ್ಯಾರ್ಥಿಗೆ ವೈದ್ಯಕೀಯ ನೆರವು ನೀಡಲಾಗುತ್ತಿದೆ.

ಕಣ್ಣೀರು ಒರೆಸಲು ಕೈಗಳು ಸಾಲುತ್ತಿಲ್ಲ
ಶಿಕ್ಷಣ ಇಲಾಖೆಯಿಂದ ಈ ರೀತಿ ಪಿಕ್ನಿಕ್ ಹೋಗುವಾಗ ಸುರಕ್ಷತಾ ನಿಯಮ ಪಾಲಿಸುವಂತೆ ಅಧಿಸೂಚನೆ ಹೊರಡಿಸಲಾಗಿದೆ. ಹಿರಿಯ ಅಧಿಕಾರಿಗಳಿಂದ ಶಿಕ್ಷಕರ ನಿರ್ಲಕ್ಷ್ಯದ ಬಗ್ಗೆ ತನಿಖೆ ಆರಂಭವಾಗಿದೆ. ಆದರೆ, ಪೋಷಕರ ಕಣ್ಣೀರು ಒರೆಸಲು ಕೈಗಳು ಸಾಲುತ್ತಿಲ್ಲ. ನೌಕಾಪಡೆ ಇಂಟರ್ ಸೆಪ್ಟರ್ ಹಾಗೂ ಚೇತಕ್ ಹೆಲಿಕಾಪ್ಟರ್ ಬಳಸಿ ರಕ್ಷಣಾ ಕಾರ್ಯ, ಶೋಧ ಕಾರ್ಯ ನಡೆಸುತ್ತಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications