ಕೊರೊನಾ ವೈರಸ್ ಬಗ್ಗೆ ಫೇಕ್ ಪ್ರಚಾರ ಮಾಡುತ್ತಿದ್ದ ವ್ಯಕ್ತಿ ಬಂಧನ
ಪುಣೆ, ಮಾರ್ಚ್ 16: ಕೊರೊನಾ ವೈರಸ್ ಹೇಗೆ ಹರಡುತ್ತಿದೆ, ಅದನ್ನು ಹೇಗೆ ನಿಯಂತ್ರಿಸಬೇಕು ಎಂಬ ಮಾಹಿತಿಯನ್ನು ಸರ್ಕಾರದ ವತಿಯಿಂದ ಆರೋಗ್ಯ ಇಲಾಖೆ ಸಾರ್ವಜನಿಕರಿಗೆ ಮಾಹಿತಿ ನೀಡುತ್ತಿದೆ.
ಕೊರೊನಾ ಸೋಂಕಿನಿಂದ ತಪ್ಪಿಸಿಕೊಳ್ಳಲು ಅಗತ್ಯ ಮುಂಜಾಗ್ರತೆ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಹಾಗಿದ್ದರೂ, ಕೆಲವರು ಕೊರೊನಾ ಬಗ್ಗೆ ತಪ್ಪು ಮಾಹಿತಿಗಳನ್ನು ಪ್ರಚಾರ ಮಾಡುತ್ತಿದ್ದಾರೆ.
ತಪ್ಪಾದ ವಿಡಿಯೋ, ಫೋಟೋಗಳನ್ನು ಪ್ರಚಾರ ಮಾಡಿ ಜನರಲ್ಲಿ ಆತಂಕ ಮೂಡಿಸುತ್ತಿದ್ದಾರೆ. ಈ ವಿಡಿಯೋಗಳನ್ನು ನೋಡಿದ ಜನರು ಭಯಪಡುವಂತಾಗಿದೆ. ಇದರಿಂದ ನಗರಗಳಲ್ಲಿ ಭೀತಿ ಹೆಚ್ಚಾಗುತ್ತಿದೆ. ಹೀಗೆ, ತಪ್ಪಾದ ವಿಡಿಯೋ ಪ್ರಚಾರ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಪುಣೆ ಪೊಲೀಸರು ಬಂಧಿಸಿದ್ದಾರೆ. ಮುಂದೆ ಓದಿ....

ಕೊರೊನಾ ಶಂಕಿತರ ಬಗ್ಗೆ ಮಾಹಿತಿ
ಪುಣೆಯ ಪ್ರತಿಷ್ಠಿತ ಹೋಟೇಲ್ನಲ್ಲಿ ಕೊರೊನಾ ಸೋಂಕಿಗೆ ತುತ್ತಾಗಿರುವ ವ್ಯಕ್ತಿಗಳು ಉಳಿದುಕೊಂಡಿದ್ದಾರೆ ಎಂಬ ಮಾಹಿತಿನ್ನು ಪುಣೆ ವಿಭಾಗದ ಆಯುಕ್ತರ ಮೊಬೈಲ್ ವಾಟ್ಸಾಪ್ ನಂಬರ್ ಗೆ ಕಳುಹಿಸಿದ್ದ. ಇದೇ ಮಾಹಿತಿಯನ್ನು ಬೇರೆ ಬೇರೆ ವ್ಯಕ್ತಿಗಳಿಗೂ ಕಳುಹಿಸಿದ್ದ. ಪದೇ ಪದೇ ಸಂದೇಶ ಬಂದಿದ್ದರಿಂದ ಗಂಭೀರವಾಗಿ ಪರಿಗಣಿಸಿದ ಆಯುಕ್ತರು, ಯಂತ್ರೋಪಕರಣಗಳೊಂದಿಗೆ ಆ ಹೋಟೆಲ್ಗೆ ಹೋಗಿ ಪರೀಕ್ಷಿಸಿದ್ದಾರೆ.

ಸುಳ್ಳು ಮಾಹಿತಿ ನೀಡಿದ ವ್ಯಕ್ತಿ
ಆ ಹೋಟೆಲ್ನಲ್ಲಿ ಯಾವುದೇ ಸೋಂಕಿತರು ಮತ್ತು ವಿದೇಶಿಗರು ಇರುವ ಬಗ್ಗೆ ಮಾಹಿತಿ ಸಿಕ್ಕಿಲ್ಲ. ಹಾಗಾಗಿ, ಅದೊಂದು ಸುಳ್ಳು ಎಂದು ತಿಳಿದಿದೆ. ಬಳಿಕ ಆಯುಕ್ತ ಪುಣೆ ನಗರದ ದೀಪಕ್ ಮೈಶೇಕರ್ ಈ ವಿಷಯವನ್ನು ಪೊಲೀಸರಿಗೆ ತಿಳಿಸಿದ್ದಾರೆ. ಈ ಕುರಿತು ದೂರು ಕೂಡ ದಾಖಲಿಸಿ, ಎಫ್ ಐ ಆರ್ ದಾಖಲಾಗಿದೆ. ಆಯುಕ್ತರ ದೂರಿನ ಅನ್ವಯ ಅಪರಿಚಿತ ವ್ಯಕ್ತಿಯ ಬಂಧನಕ್ಕೆ ಪೊಲೀಸರು ಹುಡುಕಾಟ ಶುರು ಮಾಡಿದ್ದಾರೆ.

ವ್ಯಕ್ತಿ ಬಂಧನ
''ಶನಿವಾರ (ಮಾರ್ಚ್ 14) ರಾತ್ರಿ 9.39 ರಿಂದ 9.58ರ ಸಮಯದಲ್ಲಿ ಬಂದಿದೆ. ಭಾನುವಾರ ಸಂಜೆ ಈ ಕುರಿತು ದೂರು ದಾಖಲಾಗಿದೆ. ಆಯುಕ್ತರ ದೂರಿನ ಅನ್ವಯ ಐಪಿಸಿ ಸೆಕ್ಷನ್ 182, 290, 51 (b), 51 ಅಡಿಯಲ್ಲಿ ಕೇಸ್ ಸ್ವೀಕರಿಸಲಾಗಿದೆ'' ಎಂದು ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಗಣೇಶ್ ಮನೆ ತಿಳಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಫೇಕ್ ವಿಡಿಯೋ ತಪ್ಪು ಸಂದೇಶ ರವಾನಿಸಿದ್ದ ವ್ಯಕ್ತಿಯ ಬಂಧನವಾಗಿದೆ ಎಂದು ತಿಳಿದುಬಂದಿದೆ.

ಮಹಾರಾಷ್ಟ್ರದಲ್ಲಿ ಕೊರೊನಾ ಕೇಸ್ ಹೆಚ್ಚಳ
ಭಾರತದಲ್ಲಿ 100ಕ್ಕೂ ಕೊರೊನಾ ಕೇಸ್ ಗಳು ದಾಖಲಾಗಿದ್ದು, ಮಹಾರಾಷ್ಟ್ರ ಒಂದರಲ್ಲಿಯೇ 38 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಮಹಾರಾಷ್ಟ್ರದ ಪುಣೆಯಲ್ಲಿ 16 ಪಾಸಿಟೀವ್ ಕೇಸ್ ಬೆಳಕಿಗೆ ಬಂದಿದೆ.
-
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
Prem: ಆಗ ಅಪ್ಪಾಜಿ-ಅಂಬರೀಷಣ್ಣ ಇದ್ರು, ಈಗ ಯಾರಿದ್ದಾರೆ; ಕೆಡಿ ವಿವಾದ ಆದಾಗಲೂ ಯಾರೂ ಸಪೋರ್ಟ್ಗೆ ಬರಲಿಲ್ಲ: ಪ್ರೇಮ್ ಬೇಸರ












Click it and Unblock the Notifications