ಏಕರೂಪ ನಾಗರಿಕ ಸಂಹಿತೆ ಕಾನೂನಿಗೆ ರಾಜ್ ಠಾಕ್ರೆ ಆಗ್ರಹ
ಪುಣೆ ಮೇ 22: ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ ಹಾಗೂ ಜನಸಂಖ್ಯಾ ನಿಯಂತ್ರಣ ಕಾನೂನು ಶೀಘ್ರವೇ ಜಾರಿಗೆ ತರಬೇಕು ಎಂದು ಪ್ರಧಾನಿ ನರೇಂದ್ರ ಮೋದಿಯನ್ನು ಮಹಾರಾಷ್ಟ್ರ ನವನಿರ್ಮಾಣ ಸೇನೆಯ(ಎಂಎನ್ಎಸ್) ಮುಖ್ಯಸ್ಥ ರಾಜ್ ಠಾಕ್ರೆ ಆಗ್ರಹಿಸಿದರು.
ಪುಣೆಯಲ್ಲಿ ಭಾನುವಾರ ನಡೆದ ಸಾರ್ವಜನಿಕ ಸಮಾವೇಶ ಉದ್ದೇಶಿಸಿ ಮಾತನಾಡಿದ ಅವರು, "ಮಹಾರಾಷ್ಟ್ರದ ಔರಂಗಾಬಾದ್ ಹೆಸರನ್ನು ಸಾಂಭಾಜಿ ನಗರ ಎಂದು ಕೂಡಲೇ ಬದಲಾವಣೆ ಮಾಡಬೇಕು. ಒಮ್ಮೆ ನಗರದ ಹೆಸರನ್ನು ಬದಲಾಯಿಸಿದರೆ ಇದರ ಸುತ್ತ ಇರುವ ವಿವಾದಗಳು ಅಂತ್ಯವಾಗಲಿವೆ'' ಎಂದು ಒತ್ತಾಯಿಸಿದರು.
"ಏಕರೂಪ ನಾಗರಿಕ ಸಂಹಿತೆ ಹಾಗೂ ಜನಸಂಖ್ಯಾ ನಿಯಂತ್ರಣ ಕಾನೂನು ಶೀಘ್ರ ಜಾರಿಯಾದರೆ ದೇಶಕ್ಕೇ ಒಳಿತಾಗಲಿದೆ'' ಎಂದು ಅಭಿಪ್ರಾಯಪಟ್ಟರು.

ವಿವಾದದ ಸುಳಿಗೆ ಸಿಲುಕಿಸುವ ಪ್ರಯತ್ನ; ಜೂನ್ 5 ರಂದು ಆಯೋಧ್ಯೆಗೆ ಭೇಟಿ ನೀಡಲು ರಾಜ್ ಠಾಕ್ರೆ ನಿರ್ಧರಿಸಿದ್ದರು. ಆದರೆ ಸೊಂಟದ ಮೂಳೆಯ ಶಸ್ತ್ರಚಿಕಿತ್ಸೆಯ ಕಾರಣದಿಂದ ಆಯೋಧ್ಯೆಗೆ ಭೇಟಿ ನೀಡುವ ಕಾರ್ಯಕ್ರಮವನ್ನು ಮುಂದೂಡಿರುವುದಾಗಿ ಕೆಲವು ದಿನಗಳ ಹಿಂದೆ ಅವರು ತಿಳಿಸಿದ್ದರು.
ಈ ಕುರಿತು ಪ್ರತಿಕ್ರಿಯಿಸಿರುವ ರಾಜ್ ಠಾಕ್ರೆ, "ಎರಡು ದಿನಗಳ ಹಿಂದೆ ಆಯೋಧ್ಯೆಗೆ ಭೇಟಿ ನೀಡುವ ಕಾರ್ಯಕ್ರಮವನ್ನು ಮುಂದೂಡಿರುವ ಬಗ್ಗೆ ನಾನು ಟ್ವೀಟ್ ಮಾಡಿದ್ದೆ. ವಿರೋಧಿಗಳು ನೀಡುವ ಪ್ರತಿಕ್ರಿಯೆಯನ್ನು ಗಮನಿಸಲೆಂದೇ ನಾನು ಈ ಮಾಹಿತಿ ನೀಡಿದ್ದೆ. ನಾನು ಆಯೋಧ್ಯೆಗೆ ಹೋಗುವುದನ್ನು ವಿರೋಧಿಸುವವರು ನನನ್ನು ವಿವಾದದ ಸುಳಿಗೆ ಸಿಲುಕಿಸಲು ಪ್ರಯತ್ನಸುತ್ತಿದ್ದಾರೆ. ಆದರೆ ವಿವಾದಗಳಿಗೆ ತುತ್ತಾಗಬಾರದು ಎಂದು ನಾನು ತೀರ್ಮಾನಿಸಿದ್ದೇನೆ'' ಎಂದು ಹೇಳಿದರು.
ಉದ್ಧವ್ ಠಾಕ್ರೆ ಅವರ ನಿವಾಸವೇನು ಮಸಿದಿಯೇ?; "ಮಸೀದಿಗಳಲ್ಲಿ ಅಜಾನ್ ಕೂಗುವ ಸಮಯದಲ್ಲಿ ಧ್ವನಿವರ್ಧಕಗಳನ್ನು ಬಳಸಿ ಹನುಮಾನ್ ಚಾಲೀಸಾ ಪಠಿಸುವಂತೆ ನಾನು ನಮ್ಮ ಕಾರ್ಯಕರ್ತರಿಗೆ ಕರೆ ನೀಡಿದ್ದೆ. ಆದರೆ ತೆಲಂಗಾಣದ ಅಮರಾವತಿ ಸಂಸದೆ ನವನೀತ್ ಕೌರ್ ರಾಣಾ ಮತ್ತು ಆಕೆಯ ಪತಿ ಹೈದರಾಬಾದ್ ಶಾಸಕ ರವಿ ರಾಣಾ ದಂಪತಿ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಮುಂಬೈನ ಮಾತೋಶ್ರಿ ನಿವಾಸದ ಎದುರು ಹನುಮಾನ್ ಚಾಲೀಸಾ ಪಠಿಸಿದರು. ಉದ್ಧವ್ ಠಾಕ್ರೆ ಅವರ ನಿವಾಸವೇನು ಮಸಿದಿಯೇ ?'' ಎಂದು ಪ್ರಶ್ನಿಸಿದರು.

ಹಿಂದುತ್ವದ ಕುರಿತು ಉದ್ಧವ್ ಠಾಕ್ರೆ ಅವರು ನೀಡಿರುವ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ರಾಜ್ ಠಾಕ್ರೆ, "ಯಾವ ಹಿಂದುತ್ವದ ಬಗ್ಗೆ ಉದ್ಧವ್ ಠಾಕ್ರೆ ಮಾತನಾಡುತ್ತಿರುವುದು?. ಸಾಂಭಾಜಿ ನಗರ ಹೆಸರು ಮರುನಾಮಕರಣ ವಿಷಯದಲ್ಲಿ ಯಾವ ತರ್ಕದ ಆಧಾರದಲ್ಲಿ ಅವರು ಹೀಗೆ ಹೇಳುತ್ತಿದ್ದಾರೆ? ಅವರೇನು ಮಹಾತ್ಮ ಗಾಂಧಿ ಅಥವಾ ವಲ್ಲಭಬಾಯಿ ಪಟೇಲರೇ?" ಎಂದು ಕೇಳಿದರು.
"ಸಾಂಭಾಜಿ ನಗರ ಎಂದು ಹೆಸರು ಮರುನಾಮಕರಣ ಮಾಡುವ ಅಗತ್ಯವಿಲ್ಲ" ಎಂದು ಉದ್ಧವ್ ಠಾಕ್ರೆ ಹೇಳಿದ್ದರು. "ನಿಜವಾದ ಹಿಂದುತ್ವದ ಬಗ್ಗೆ ಮಾತನಾಡುವಾಗ ನೀವೇನಾದರೂ ಬಟ್ಟೆ ತೊಳೆಯುವ ಪೌಡರ್ ಮಾರುತ್ತಿರುವರೆ?. ನಿಜವಾದ ಹಿಂದುತ್ವದ ಜನರಿಗೆ ಫಲಿತಾಂಶ ಬೇಕಾಗಿದೆ. ಹಾಗಾಗಿ ನಾವು ಮರಾಠಿ ಜನರಿಗೆ ನಿಜವಾದ ಫಲಿತಾಂಶವನ್ನು ನೀಡಲಿದ್ದೇವೆ'' ಎಂದು ರಾಜ್ ಠಾಕ್ರೆ ಪ್ರತಿಪಾದಿಸಿದರು.
ಮಸೀದಿಗಳಲ್ಲಿ ಧ್ವನಿವರ್ಧಕಗಳ ಬಳಕೆ ಹಾಗೂ ಆಯೋಧ್ಯೆಗೆ ಭೇಟಿ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಇತ್ತೀಚಿಗೆ ರಾಜ್ ಠಾಕ್ರೆ ವಿವಾದಕ್ಕೆ ಒಳಗಾಗಿದ್ದರು.
-
Karnataka Budget: ಹೆಚ್ಚು ಹಾಲು ಕೊಡುವ ಹಸುವಿಗೆ ಹೆಚ್ಚಿನ ಆರೈಕೆ ಬೇಕು: ಬಜೆಟ್ ಭಾಷಣವಿಡೀ ಕೇಂದ್ರಕ್ಕೆ ಕುಟುಕಿದ ಸಿದ್ದರಾಮಯ್ಯ -
ರಷ್ಯಾದಿಂದ ತೈಲ ಖರೀದಿಸಲು ಭಾರತಕ್ಕೆ 30 ದಿನಗಳ ಅನುಮತಿ ಕೊಟ್ಟ ಅಮೆರಿಕ -
International Women's Day 2026: ಸ್ತ್ರೀ ಶಕ್ತಿಗೊಂದು ಗೌರವದ ನಮನ: ಮಹಿಳಾ ದಿನಾಚರಣೆಯ ಇತಿಹಾಸ, ಮಹತ್ವ ತಿಳಿಯಿರಿ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
ಯುಪಿಎಸ್ಸಿ 2025 ಫಲಿತಾಂಶ ಪ್ರಕಟ: ಪಾಸಾದವರು 958 ಆಕಾಂಕ್ಷಿಗಳು, ಅರ್ಜಿ ಹಾಕಿದ್ದವರು 10 ಲಕ್ಷ ಮಂದಿ -
ಅನಧಿಕೃತವಾಗಿ ಪ್ರವೇಶಿಸಿದರೆ ಗುಂಡು ಹಾರಿಸಲಾಗುವುದು: ಸಾಮಾಜಿಕ ಮಾಧ್ಯಮದಲ್ಲಿ ಚರ್ಚೆ ಹುಟ್ಟುಹಾಕಿದ ವಾಯುಪಡೆಯ ಸೂಚನಾ ಫಲಕ -
Tamarind Cultivation: ಹೊಸಪೇಟೆ ಹುಣಸೆ ಘಟಕಕ್ಕೆ ವಿಶ್ವಬ್ಯಾಂಕ್ ಉನ್ನತ ಮಟ್ಟದ ತಂಡ ಭೇಟಿ, ರೈತರಿಗೆ ಗುಡ್ನ್ಯೂಸ್ ನಿರೀಕ್ಷೆ -
Saaniya Chandok: ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ಕುಟುಂಬಕ್ಕೆ ಸೊಸೆಯಾಗಿ ಬಂದ ಸಾನಿಯಾ ಚಾಂದೋಕ್ ಯಾರು? -
Abhishek Sharma: 'ಅಭಿಷೇಕ್ ಶರ್ಮಾ ಒಬ್ಬ ಬ್ಲೈಂಡ್ ಸ್ಲಾಗರ್': ರೊಚ್ಚಿಗೆದ್ದ ಅಭಿಮಾನಿಗಳು -
Horoscope March 5: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ, ಯಾರಿಗೆ ಶುಭ-ಯಾರಿಗೆ ಅಶುಭ -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ












Click it and Unblock the Notifications