ಆರ್ಎಸ್ಎಸ್ ಆಸ್ಪತ್ರೆ ಬರೀ ಹಿಂದೂಗಳಿಗೆಯೇ: ಗಡ್ಕರಿ ಬಳಿ ಪ್ರಶ್ನಿಸಿದ್ದ ರತನ್ ಟಾಟಾ
ಪುಣೆ, ಏಪ್ರಿಲ್ 15: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್) ಧರ್ಮದ ಆಧಾರದ ಮೇಲೆ ತಾರತಮ್ಯ ಮಾಡಿಲ್ಲ ಎಂದು ಕೈಗಾರಿಕೋದ್ಯಮಿ ರತನ್ ಟಾಟಾಗೆ ಒಮ್ಮೆ ಹೇಳಿದ್ದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಗುರುವಾರ ಹೇಳಿಕೊಂಡಿದ್ದಾರೆ.
ಪುಣೆಯಲ್ಲಿ ಆಸ್ಪತ್ರೆಯೊಂದನ್ನು ಉದ್ಘಾಟಿಸಿದ ಗಡ್ಕರಿ, ಮಹಾರಾಷ್ಟ್ರ ಸರ್ಕಾರದಲ್ಲಿ ಸಚಿವರಾಗಿದ್ದಾಗ ಆರೆಸ್ಸೆಸ್ ಕಾರ್ಯಕರ್ತರೊಬ್ಬರು ರತನ್ ಟಾಟಾ ಅವರನ್ನು ಆಸ್ಪತ್ರೆಯ ಉದ್ಘಾಟನೆಗೆ ಕರೆತರಲು ಸಹಾಯ ಮಾಡುವಂತೆ ಮನವಿ ಮಾಡಿದ್ದರು ಎಂದು ಉಲ್ಲೇಖಿಸಿದ್ದಾರೆ.
"ಉದ್ಘಾಟನೆಯ ವೇಳೆ ರತನ್ ಟಾಟಾ ಅವರು ಈ ಆಸ್ಪತ್ರೆ ಕೇವಲ ಹಿಂದೂ ಸಮುದಾಯಕ್ಕೆ ಮಾತ್ರವೇ ಎಂದು ನನ್ನಲ್ಲಿ ಪ್ರಶ್ನೆ ಮಾಡಿದರು. ಅದಕ್ಕೆ ನಾನು ಅವರಿಗೆ ಯಾಕೆ ಹಾಗೆ ಅನ್ನಿಸುತ್ತಿದೆ ಎಂದು ಪ್ರಶ್ನೆ ಮಾಡಿದ್ದೆ," ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ.

ಆರ್ಎಸ್ಎಸ್ ಆಸ್ಪತ್ರೆ ಎಂದಿದ್ದ ರತನ್ ಟಾಟಾ
"ನಿಮಗೆ ಯಾಕೆ ಹೀಗೆ ಅನಿಸುತ್ತಿದೆ ಎಂದು ನಾನು ರತನ್ ಟಾಟಾ ಅವರನ್ನು ಕೇಳಿದ್ದೆ. ಆಗ ಅವರು (ರತನ್ ಟಾಟಾ) ಇದು ಆರ್ಎಸ್ಎಸ್ ಆಸ್ಪತ್ರೆ ಎಂದು ಉತ್ತರಿಸಿದರು. ಸಮುದಾಯ ಮತ್ತು ಆರ್ಎಸ್ಎಸ್ನಲ್ಲಿ ಅಂತಹದ್ದೇನೂ ಇಲ್ಲ. ಆರ್ಎಸ್ಎಸ್ ಎಂದಿಗೂ ತಾರತಮ್ಯ ಮಾಡಿಕೊಂಡಿಲ್ಲ," ಎಂದು ತಿಳಿಸಿದ್ದಾರೆ.
ದೇಶದಲ್ಲಿ ಆರೋಗ್ಯ ಮತ್ತು ಶಿಕ್ಷಣ ಮೂಲಸೌಕರ್ಯವನ್ನು ಸುಧಾರಿಸಲು ಹೆಚ್ಚಿನದನ್ನು ಮಾಡಬೇಕಾಗಿದೆ ಎಂದು ಕೇಂದ್ರ ಸಚಿವರು ಹೇಳಿದರು. "ದೇಶದಲ್ಲಿ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಅಗತ್ಯವಿರುವಷ್ಟು ಸೌಲಭ್ಯಗಳು ಲಭ್ಯವಿಲ್ಲ. ನಗರ ಪ್ರದೇಶದಲ್ಲಿ ಸೌಲಭ್ಯಗಳಿದ್ದರೆ, ಗ್ರಾಮೀಣ ಪ್ರದೇಶದ ಪರಿಸ್ಥಿತಿ ಉತ್ತಮವಾಗಿಲ್ಲ, ವಿಶೇಷವಾಗಿ ಶಿಕ್ಷಣದ ಪರಿಸ್ಥಿತಿ ಉತ್ತಮವಾಗಿಲ್ಲ. ಆದರೆ ಸೌಲಭ್ಯಗಳು ಸುಧಾರಿಸುತ್ತಿವೆ," ಎಂದು ಅಭಿಪ್ರಾಯಿಸಿದರು.
ಈ ಸಂದರ್ಭದಲ್ಲೇ ನಾನು ಶೇಕಡಾ 10 ರಷ್ಟು ರಾಜಕೀಯ ಮತ್ತು ಶೇಕಡಾ 90 ರಷ್ಟು ಸಾಮಾಜಿಕ ಕಾರ್ಯಗಳನ್ನು ಮಾಡುತ್ತೇನೆ ಎಂದು ನಿತಿನ್ ಗಡ್ಕರಿ ಹೇಳಿಕೊಂಡಿದ್ದಾರೆ.
-
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ












Click it and Unblock the Notifications