ಬೋರ್ವೆಲ್ ನಲ್ಲಿ ಬಿದ್ದಿದ್ದ 6 ವರ್ಷದ ಮಗು ಪವಾಡಸದೃಶ ಪಾರು
ಪುಣೆ, ಫೆಬ್ರವರಿ 21 : ಈ ಘಟನೆಯನ್ನು ಪವಾಡವೆಂದೇ ಕರೆಯಬಹುದು. ಏಕೆಂದರೆ, ಸತತ 16 ಗಂಟೆಗಳ ಪ್ರಯತ್ನದ ನಂತರ, ಬೋರ್ವೆಲ್ ನಲ್ಲಿ ಬಿದ್ದಿದ್ದ 6 ವರ್ಷದ ಬಾಲಕನನ್ನು ರಕ್ಷಿಸಲಾಗಿದೆ.
ಪುಣೆ ಜಿಲ್ಲೆಯ ತೋರಂಡಾಳೆ ಗ್ರಾಮದಲ್ಲಿ ರವಿ ಪಂಡಿತ್ ಭಿಲ್ ಎಂಬ ಬಾಲಕ 200 ಅಡಿ ಕೊರೆಯಲಾಗಿದ್ದ ಬೋರ್ವೆಲ್ ಗೆ ಬುಧವಾರ ಬಿದ್ದಿದ್ದ. ಆಟವಾಡಲು ಹೋಗಿದ್ದಾಗ ಬೋರ್ವೆಲ್ ನಲ್ಲಿ ಬಿದ್ದಿದ್ದ ಬಾಲಕ 10 ಅಡಿ ಆಳದಲ್ಲಿ ಸಿಲುಕಿದ್ದ.
ಈ ಘಟನೆ ಬುಧವಾರ ಸಂಜೆ 4.30ರ ಸುಮಾರಿಗೆ ಘಟಿಸಿತ್ತು. ಕಾರ್ಮಿಕನಾಗಿರುವ ತಂದೆಯ ಬಳಿ ಆಟವಾಡುತ್ತಿದ್ದ ರವಿ ಇದ್ದಕ್ಕಿದ್ದಂತೆ ತೆರೆದ ಬೋರ್ವೆಲ್ ನಲ್ಲಿ ಬಿದ್ದಿದ್ದ. ಆ ಸಮಯದಲ್ಲಿ ಆತನ ತಂದೆ ರಸ್ತೆ ರಿಪೇರಿಯಲ್ಲಿ ತೊಡಗಿದ್ದರು.

ಮಗುವಿನ ರಕ್ಷಣಾ ಕಾರ್ಯದಲ್ಲಿ ಭಾಗಿಯಾದ ಸಿಬ್ಬಂದಿಯ ಮೇಲೆ ಪ್ರಶಂಸೆಯ ಸುರಿಮಳೆಯಾಗುತ್ತಿದೆ. ನ್ಯಾಷನಲ್ ಡಿಸಾಸ್ಟರ್ ರೆಸ್ಪಾನ್ಸ್ ಫೋರ್ಸ್ (ಎನ್ಡಿಆರ್ಎಫ್) ಸಿಬ್ಬಂದಿಗಳು ಸತತ 16 ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಮಗುವನ್ನು ರಕ್ಷಿಸಿದ್ದಾರೆ.
ನಾಮದೇವ್ ಜಾಧವ್ ಎಂಬುವವರಿಗೆ ಸೇರಿದ ಫಾರ್ಮ್ ನಲ್ಲಿ ರವಿ ಭಿಲ್ ಬಿದ್ದಿದ್ದ. ಇಡೀ ರಾತ್ರಿ ಕಾರ್ಯಾಚರಣೆ ನಡೆಸಿದ ಸಿಬ್ಬಂದಿ ಗುರುವಾರ ಬೆಳಿಗ್ಗೆ 9.30ರ ಸುಮಾರಿಗೆ ಮಗುವನ್ನು ಸುರಕ್ಷಿತವಾಗಿ ಆಚೆ ಕರೆದುಕೊಂಡು ಬಂದರು. ರವಿ ಜೀವಂತವಾಗಿದ್ದು ತಿಳಿಯುತ್ತಿದ್ದಂತೆ ಪಾಲಕರ ಸಂತೋಷಕ್ಕೆ ಪಾರವೇ ಇರಲಿಲ್ಲ.
ಮಗುವಿಗೆ ಯಾವುದೇ ಗಾಯವಾಗದಂತೆ ಹೊರತೆಗೆಯುವುದು ಅತ್ಯಂತರ ಕ್ಲಿಷ್ಟಕರ ಕೆಲಸವಾಗಿತ್ತು ಎಂದು ಎನ್ಡಿಎಲ್ಎಫ್ ನ ಅಧಿಕಾರಿ ತಿಳಿಸಿದ್ದಾರೆ. ಬೋರ್ವೆಲ್ ಗೆ ಸಮಾನಾಂತರವಾಗಿ ನೆಲವನ್ನು ಅಗೆದು ಮಗುವನ್ನು ಹೊರತೆಗೆಯಲಾಯಿತು.
NDRF team has successfully rescued the child from the borewell after a difficult operation of 13 hours. Kudos to your efforts, @NDRFHQ @mid_day pic.twitter.com/8AQ3XRQRbq
— Diwakar Sharma (@DiwakarSharmaa) February 21, 2019
ಗುಟೂಂರಿನಲ್ಲೂ ಮಗುವಿನ ರಕ್ಷಣೆ : ಒಂದೂಮುಕ್ಕಾಲು ವರ್ಷಗಳ ಹಿಂದೆ ಗುಂಟೂರಿನಲ್ಲಿಯೂ ಎರಡು ವರ್ಷದ ಮಗು ಕೊಳವೆ ಬಾವಿಗೆ ಬಿದ್ದಿತ್ತು. ಸತತ 12 ಗಂಟೆಗಳ ಕಾರ್ಯಾಚರಣೆ ನಡೆಸಿ ಮಗುವನ್ನು ರಕ್ಷಿಸಲಾಗಿತ್ತು.
ಝಂಜರವಾಡದ ಘಟನೆ : ಕರ್ನಾಟಕದ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಝಂಜರವಾಡದಲ್ಲಿ ತೆರೆದ ಕೊಳವೆ ಬಾವಿಗೆ ಬಿದ್ದಿದ್ದ ಕಾವೇರಿ ಎಂಬ ಬಾಲಕಿಯನ್ನು ರಕ್ಷಿಸಲು ಸಾಧ್ಯವಾಗಿರಲಿಲ್ಲ. ರಕ್ಷಣಾ ಸಿಬ್ಬಂದಿ ಸತತ 54 ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿದ್ದರೂ ಬದುಕುವ ಅದೃಷ್ಟ ಕಾವೇರಿಗೆ ಇರಲಿಲ್ಲ.
-
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು












Click it and Unblock the Notifications