ಮಹಾರಾಷ್ಟ್ರದ ಪುಣೆಯಲ್ಲಿ ಕನ್ನಡ ಕಂಪು ಹರಡಿಸುತ್ತಿರುವ ಶಾಲೆಗಳು
ಪುಣೆ, ಜನವರಿ ೦2: ಕರ್ನಾಟಕದಲ್ಲಿಯೇ ಕನ್ನಡ ಶಾಲೆಗಳು ತೆರೆಮರೆಗೆ ಸರಿಯುತ್ತಿದೆ. ಸರ್ಕಾರವೇ ಪ್ರಾಥಮಿಕದಿಂದಲೇ ಇಂಗ್ಲೀಷ್ ಮಾಧ್ಯಮ ಕಲಿಸಲು ತುದಿಗಾಲ ಮೇಲೆ ನಿಂತಿದೆ. ಇಂತಹಾ ಸಮಯದಲ್ಲಿ ಹೊರ ರಾಜ್ಯದಲ್ಲಿನ ಕನ್ನಡ ಶಾಲೆಗಳು ಕನ್ನಡದ ಪರಿಸರಿಸುತ್ತಿರುವ ಅಪರೂಪದ ಸಂಗತಿಗಳು ಕನ್ನಡ ಸುಲಭವಾಗಿ ಅಳಿಯುವುದಲ್ಲ ಎಂಬ ಭರವಸೆ ನೀಡುತ್ತವೆ.
ಪಕ್ಕದ ಮಹಾರಾಷ್ಟ್ರದ ಪುಣೆಯಲ್ಲಿ ಕನ್ನಡ ಶಾಲೆಗಳು ಮರಾಠಿಯ ಇಕ್ಕಟ್ಟಿನ ನಡುವೆಯೂ ಅರಳಿ ಕಸ್ತೂರಿ ಪರಿಮಳಿಸುತ್ತಿವೆ. ಈ ಬಗ್ಗೆ ಕನ್ನಡದ ಶಿಕ್ಷಕರೊಬ್ಬರು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ.

ಪುಣೆ ನಗರಪಾಲಿಕೆಯಲ್ಲಿ ಎರಡು ಕನ್ನಡ ಶಾಲೆಗಳು ಇವೆ. ಎರಡೂ ಸಹ ಪ್ರಾಥಮಿಕ ಶಾಲೆಗಳಾಗಿದ್ದು, ಎರಡರಲ್ಲೂ ಬಹುತೇಕ 150 ವಿದ್ಯಾರ್ಥಿಗಳು ಕನ್ನಡ ಮಾಧ್ಯಮದಲ್ಲಿ ವ್ಯಾಸಾಂಗ ಮಾಡುತ್ತಿದ್ದಾರೆ.
ಇತ್ತೀಚೆಗೆ ಪುಣೆಯಲ್ಲಿ ಶಿಕ್ಷಣ ಉತ್ಸವ ನಡೆದಾಗ ಪುಣೆ ನಗರಪಾಲಿಕೆಯ ಒಂದು ಕನ್ನಡ ಶಾಲೆಯ ವಿದ್ಯಾರ್ಥಿಗಳು ಉತ್ಸವದಲ್ಲಿ ಮಾಹಿತಿ ಅಂಗಡಿಯೊಂದನ್ನು ತೆರೆದು ಇಂಗ್ಲಿಷ್ ಭಾಷಾ ಜ್ಞಾನದ ಬಗ್ಗೆ ಮಾಹಿತಿ ನೀಡಿದರು. 'ಕನ್ನಡ ಆಕ್ಟಿವ್ ಟೀಚರ್' ಎಂಬ ಯೂಟ್ಯೂಬ್ ಚಾನೆಲ್ ಹೊಂದಿರುವ ಶಿಕ್ಷಕರೊಬ್ಬರು ಈ ಶಾಲೆಯ ವಿದ್ಯಾರ್ಥಿಗಳು, ಮುಖ್ಯೋಪಾಧ್ಯಯರು, ಶಿಕ್ಷಕರನ್ನು ಸಂದರ್ಶನ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ.
ಪುಣೆ ಕನ್ನಡ ಶಾಲೆಯ ಮುಖ್ಯಶಿಕ್ಷಕ ಗಣಪತಿ ಮೋರೆ ಹೇಳುವಂತೆ ಪುಣೆ ಮಹಾನಗರ ಪಾಲಿಕೆಯು ಮರಾಠಿ ಶಾಲೆ-ಕನ್ನಡ ಶಾಲೆ ಎಂಬ ಬೇಧ ಮಾಡದೆ ಎಲ್ಲ ಸಹಕಾರ, ಸೌಲಭ್ಯಗಳನ್ನು ನೀಡುತ್ತಿದೆಯಂತೆ. ಮಕ್ಕಳು ಸಹ ಉತ್ಸುಕರಾಗಿ ಕನ್ನಡ ಮಾಧ್ಯಮದಲ್ಲಿ ಕಲಿಯುತ್ತಿದ್ದಾರೆ ಎಂದಿದ್ದಾರೆ ಅವರು.
ಉತ್ಸವದಲ್ಲಿ ವಿದ್ಯಾರ್ಥಿಗಳು 'ಟೆನ್ಸ್ ವೀಲ್' (ಕಾಲದ ಮಾಹಿತಿ ನೀಡುವ ಚಕ್ರ) ವನ್ನು ಶಿಕ್ಷಕರ ಸಹಾಯದಿಂದ ತಯಾರಿಸಿದ್ದರು. ಅವರು ತಯಾರಿಸಿದ ಮಾದರಿ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಸೃಜನಶೀಲತೆಗೆ ಸಾಕ್ಷಿ ಒದಗಿಸುತ್ತಿತ್ತು.
ಒಟ್ಟಿನಲ್ಲಿ ಮಹಾರಾಷ್ಟ್ರದ ಪುಣೆಯಲ್ಲಿ ಕನ್ನಡ ಶಾಲೆ ಇರುವುದು ಮತ್ತು ಒಂದೊಂದು ಶಾಲೆಯಲ್ಲಿ 150 ಮಂದಿ ವಿದ್ಯಾರ್ಥಿಗಳು ಕನ್ನಡ ಕಲಿಯುತ್ತಿರುವುದು ಕನ್ನಡ ಭಾಷೆ ಗಡಿಗಳನ್ನು ದಾಟಿ ಸಾಗುತ್ತಿದೆ ಎಂಬುದಕ್ಕೆ ಉದಾಹರಣೆಯಂತೆ ಇದೆ.
-
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ












Click it and Unblock the Notifications