ಚಂದ್ರನನ್ನು ಲ್ಯಾಂಡರ್ ತಲುಪದಿರಲು 'ಏಕಾದಶಿ' ಕಾರಣ ಅಂತಿದ್ದಾರೆ ಈತ
ಪುಣೆ, ಸೆಪ್ಟೆಂಬರ್ 9: ಅಮೆರಿಕದಲ್ಲಿನ ಬಾಹ್ಯಾಕಾಶ ವಿಜ್ಞಾನಿಗಳು ತಮ್ಮ ಗಗನ ನೌಕೆಯನ್ನು ಚಂದ್ರನಲ್ಲಿಗೆ ಕಳುಹಿಸುವಲ್ಲಿ ಯಶಸ್ವಿ ಆದದ್ದು 39ನೇ ಪ್ರಯತ್ನದಲ್ಲಿ. ಏಕೆಂದರೆ ಅವರು ಉಡ್ಡಯನ ಮಾಡಿದ್ದು 'ಏಕಾದಶಿ'ಯಂದು ಎಂದು ಆರೆಸ್ಸೆಸ್ ನಲ್ಲಿ ಈ ಹಿಂದೆ ಕಾರ್ಯ ನಿರ್ವಹಿಸಿದ್ದ ಸಂಭಾಜಿ ಭಿಡೆ ಸೋಮವಾರ ಹೇಳಿದ್ದಾರೆ.
ಚಂದ್ರನ ಬಳಿ ಹೋಗಿ ಆ ನಂತರ ಸಂಪರ್ಕ ಕಳೆದುಕೊಂಡ ಭಾರತದ ಲ್ಯಾಂಡರ್ ವಿಕ್ರಮ್ ಬಗ್ಗೆ ಅವರು ಮಾತನಾಡಿದ್ದಾರೆ. ಭಿಡೆ ಅವರು ಮಹಾರಾಷ್ಟ್ರದಲ್ಲಿ ಶಿವ್ ಪ್ರತಿಷ್ಠಾನ್ ಹಿಂದೂಸ್ತಾನ್ ನ ನೇತೃತ್ವ ವಹಿಸಿಕೊಂಡಿದ್ದಾರೆ. 2018ರ ಜನವರಿಯಲ್ಲಿ ಕೋರೆಗಾಂವ್- ಭೀಮದಲ್ಲಿ ನಡೆದ ಹಿಂಸಾಚಾರದ ಆರೋಪಿ ಅವರು.
ಅಮೆರಿಕವು ತನ್ನ್ ಬಾಹ್ಯಾಕಾಶ ನೌಕೆಯನ್ನು ಚಂದ್ರನಲ್ಲಿ ಕಳುಹಿಸಲು ಈ ಹಿಂದೆ 38 ಬಾರಿ ಪ್ರಯತ್ನಿಸಿ ವಿಫಲವಾಗಿತ್ತು ಎಂದು ಭಿಡೆ ಸೋಲಾಪುರಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಹೇಳಿದ್ದಾರೆ.

ಆಗ ಅಮೆರಿಕದ ವಿಜ್ಞಾನಿಯೊಬ್ಬರು ಸಲಹೆ ನೀಡಿದರು: ಭಾರತದ ಪದ್ಧತಿಯ ಪ್ರಕಾರ ಕಾಲಮಾನವನ್ನು ಅನುಸರಿಸೋಣ, ನಮ್ಮ ಪದ್ಧತಿ ಬೇಡ ಎಂದರು. ಎಲ್ಲರೂ ಅಚ್ಚರಿಗೊಳ್ಳುವಂತೆ ಅಮೆರಿಕನ್ನರು ಬಾಹ್ಯಾಕಾಶ ನೌಕೆಯನ್ನು ಚಂದ್ರನಲ್ಲಿಗೆ ಕಳುಹಿಸಲು 39ನೇ ಯತ್ನದಲ್ಲಿ ಯಶಸ್ವಿಯಾದರು. ಅದು ಕೂಡ ಭಾರತದ ಕಾಲಮಾನದ ಅನ್ವಯ. ಅವರು ಯಾಕೆ ಯಶಸ್ವಿಯಾದರೆಂದರೆ, ಏಕಾದಶಿಯಂದು ಉಡ್ಡಯನ ಮಾಡಲಾಯಿತು ಎಂದು ಭಿಡೆ ಹೇಳಿದ್ದಾರೆ.
ಏಕಾದಶಿಯು ಪ್ರತಿ ಮಾಸದಲ್ಲಿ ಎರಡು ಬಾರಿ ಬರುತ್ತದೆ. ನಂಬಿಕೆ ಪ್ರಕಾರ, ಕೆಲವರು ಆ ದಿನ ಉಪವಾಸ ಆಚರಿಸುತ್ತಾರೆ. ಅಂದಹಾಗೆ, ಭಿಡೆ ಅವರು ಈ ಹಿಂದೆ ಮತ್ತೊಂದು ಹೇಳಿಕೆ ಮೂಲಕವೂ ಸುದ್ದಿ ಆಗಿದ್ದರು. "ನನ್ನ ತೋಟದಲ್ಲಿ ಬೆಳೆದ ಮಾವಿನ ಹಣ್ಣು ತಿಂದ ಮಹಿಳೆಯರಿಗೆ ಗಂಡು ಮಗು ಆಗಿದೆ" ಎಂದು ನಾಸಿಕ್ ನಲ್ಲಿ ಹೇಳಿದ್ದರು.
-
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ 3 ಜಾಗ ನಿಗದಿ: ಡಿಸಿಎಂ ಡಿ.ಕೆ ಶಿವಕುಮಾರ್ ಅಪ್ಡೇಟ್ಸ್ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್












Click it and Unblock the Notifications