ಲಿಂಗಸುಗೂರಲ್ಲಿ 11ನೇ ಕನ್ನಡ ಸಾಹಿತ್ಯ ಸಮ್ಮೇಳನ: ನುಡಿ ಜಾತ್ರೆ ಕಲರವಕ್ಕೆ ಕ್ಷಣಗಣನೆ
ರಾಯಚೂರು, ಡಿಸೆಂಬರ್, 10: ಲಿಂಗಸುಗೂರಿನಲ್ಲಿ ಡಿಸೆಂಬರ್ 10, 11ರಂದು 11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿದೆ. ಐತಿಹಾಸಿಕ ಕೋಟೆ, ಪ್ರಾಚೀನ ಇತಿಹಾಸ ಕುರುಹುಗಳು, ಶರಣರು, ಸಂತರು, ದಾಸರು, ಸೂಫಿಗಳು ನಡೆದಾಡಿದ ತಾಲೂಕು ಕೇಂದ್ರದಲ್ಲಿ ಕನ್ನಡ ನುಡಿ ಜಾತ್ರೆ ಸಂಭ್ರಮ ವೀಕ್ಷಣೆಗೆ ಸಾಹಿತಿಗಳು, ಕನ್ನಡ ಅಭಿಮಾನಿಗಳು, ಮಕ್ಕಳು ಉತ್ಸುಕತೆಯಿಂದ ಕಾಯುತ್ತಿದ್ದಾರೆ.
ಎರಡು ದಶಕಗಳ ಹಿಂದೆ 1999ರಲ್ಲಿ ಇಲ್ಲಿನ ಜೂನಿಯರ್ ಕಾಲೇಜು ಮೈದಾನದಲ್ಲಿ 5ನೇ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜಿಸುವ ಮೂಲಕ ಸಾಹಿತ್ಯಾಸಕ್ತರಲ್ಲಿ ಮೆಚ್ಚುಗೆ ಗಳಿಸಿದ್ದನ್ನು ಸ್ಮರಿಸಬಹುದು. ಇನ್ನು ಎರಡು ದಿನಗಳ ಕಾಲ ನಡೆಯುವ ಕನ್ನಡ ನುಡಿ ಜಾತ್ರೆಗೆ ಪಟ್ಟಣದ ರಸ್ತೆ, ಕಾಲೇಜು ಮೈದಾನ ಮದುವಣಿಗಿತ್ತಿಯಂತೆ ಸಿಂಗಾರಗೊಂಡಿದೆ.

ಸಾಹತ್ಯಕ್ಕೆ ಕೊಡುಗೆ ನೀಡಿದ ಮಹಾನೀಯರು
ಜೇಡರ ದಾಸಿಮಯ್ಯ, ಆಯ್ದಕ್ಕಿ ಲಕ್ಕಮ್ಮ ಮಾರಯ್ಯ, ಸಂತೆಕೆಲ್ಲೂರಿನ ಘನ ವೈರಾಗ್ಯ ಚಕ್ರವರ್ತಿ ಘನಮಠ ಶಿವಯೋಗಿಗಳು, ನೀರಲಕೇರಿ ಬಸವ ಲಿಂಗ ಶಿವಯೋಗಿ, ಪ್ರಾಣೇಶ ದಾಸರು, ಗೊರೆಬಾಳ ಹನುಮಂತರಾಯರು, ಗೋನವಾರದ ರಾಮದಾಸರು, ವೆಂಕಟರಾವ್ ಕುಲಕರ್ಣಿ ಸೇರಿದಂತೆ ಶ್ರೇಷ್ಠವರ್ಯರು ಕನ್ನಡ ಸಾಹಿತ್ಯಕ್ಕೆ ಈ ನೆಲದಿಂದಲೇ ಕೊಡುಗೆ ನೀಡಿದ್ದು ಸ್ಮರಣೀಯವಾಗಿದೆ.

ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಕಲ ಸಿದ್ಧತೆ
ರಾಯಚೂರು ಜಿಲ್ಲಾ 11ನೇ ಕನ್ನಡ ಸಾಹಿತ್ಯ ಸಮ್ಮೇಳನ ವೀರಹನುಮಾನ ಅಧ್ಯಕ್ಷತೆಯಲ್ಲಿ ನಡೆಯುತ್ತಿದೆ. ಸಮ್ಮೇಳನಕ್ಕೆ ಶಾಸಕ ಡಿ.ಎಸ್. ಹೂಲಗೇರಿ ಅಧ್ಯಕ್ಷತೆಯಲ್ಲಿ ಸ್ವಾಗತ ಸಮಿತಿ ರಚಿಸಲಾಗಿದೆ. ಮತ್ತೊಂದೆಡ ಕನ್ನಡ ಹಬ್ಬಕ್ಕೆ ಸಂಘಟಕರು ಅಹೋರಾತ್ರಿ ಸಿದ್ಧತೆಗಳನ್ನು ಮಾಡಿಕೊಂಡಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ ಕೈಗೆತ್ತಿಕೊಂಡ ಕಾರ್ಯ ಚಟುವಟಕೆಗಳಿಗೆ ತಾಲೂಕು ಆಡಳಿತ, ಪುರಸಭೆ ಸಹಯೋಗದಲ್ಲಿ ಸಿದ್ಧತೆಗಳನ್ನು ಮಾಡಲಾಗಿದೆ. ರಸ್ತೆಗಳ ಸ್ವಚ್ಛತೆ, ವಿದ್ಯುತ್ ದೀಪ ಅಲಂಕಾರ, ಮುಖ್ಯರಸ್ತೆ ಕಂಬಗಳಿಗೆ ಕನ್ನಡ ಧ್ವಜದ ಬಟ್ಟೆಗಳ ಅಲಂಕಾರ, ವೇದಿಕೆ, ಪುಸ್ತಕದ ಮಳಿಗೆ ಹಾಗೂ ಊಟ, ಉಪಾಹಾರಕ್ಕೆ ಅಚ್ಚುಕಟ್ಟಾದ ವ್ಯವಸ್ಥೆ ಮಾಡಿಕೊಂಡಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications