ರಾಯಚೂರು 186 ಕೋಟಿ ರೂ. ವೆಚ್ಚದ ವಿಮಾನ ನಿಲ್ದಾಣಕ್ಕೆ 23 ಎಕರೆ ಭೂ ಸ್ವಾಧೀನ
ರಾಯಚೂರು ಮೇ 12: ರಾಜ್ಯ ಸರ್ಕಾರ ಮಾರ್ಚ್ 4ರಂದು 2022-2023 ಸಾಲಿನ ಬಜೆಟ್ ಮಂಡಿಸಿತು. ಇದರಲ್ಲಿ ರಾಯಚೂರು ಭಾಗಕ್ಕೆ 186 ಕೋಟಿ ರೂ. ವೆಚ್ಚದಲ್ಲಿ ಗ್ರೀನ್ ಫೀಲ್ಡ್ ವಿಮಾನ ನಿಲ್ದಾಣ ಸ್ಥಾಪನೆಗೆ ಆಧ್ಯತೆ ನೀಡಲಾಗಿದೆ. ಹೀಗಾಗಿ ಇದರ ನಿರ್ಮಾಣಕ್ಕೆ ಬೇಕಾಗಿರುವ 23 ಎಕರೆ ಭೂಮಿಯನ್ನು ಸ್ವಾಧೀನ ಅಥವಾ ಖರೀದಿ ಮಾಡಲು ನಿರ್ಧಾರ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಎಲ್.ಚಂದ್ರಶೇಖರ ನಾಯಕ ತಿಳಿಸಿದ್ದಾರೆ.
ವಿಮಾನ ನಿಲ್ದಾಣಕ್ಕೆ ಚಾಲನೆ ನೀಡಲು ಈಗಿನ ವಿಮಾನ ತಂಗುದಾಣ ಪಕ್ಕದಲ್ಲಿರುವ ಖಾಸಗಿಯವರ 23 ಎಕರೆ ಭೂಮಿ ಸ್ವಾಧೀನ ಅಥವಾ ಖರೀದಿಸಲಾಗುವುದು ಎಂದು ಎಲ್. ಚಂದ್ರಶೇಖರ ನಾಯಕ ತಿಳಿಸಿದ್ದಾರೆ. ರಾಯಚೂರು ಏರೋಡ್ರಮ್ ಹೆಸರಿನಲ್ಲಿ 315 ಎಕರೆ ಭೂಮಿ ಇದೆ. ಆದರೆ, ನಿಗದಿ ಪಡಿಸಿದ ನಿವೇಶನ ಪಕ್ಕದಲ್ಲಿ ಇದ್ದ 23 ಎಕರೆ ಭೂಮಿ ಖಾಸಗಿಯವರಿಗೆ ಸೇರಿದ್ದಾಗಿದ್ದರೆ, ಇನ್ನೊಂದು ಭಾಗದಲ್ಲಿ ವಿಮಾನ ತಂಗುದಾಣಕ್ಕೆ ಸೇರಿದ 23 ಎಕರೆ ಭೂಮಿ ಇದೆ.
ಹೀಗಾಗಿ ವಿಮಾನ ನಿಲ್ದಾಣಕ್ಕೆ ಬೇಕಾಗುವ 315 ಎಕರೆ ಭೂಮಿ ಸರಿದೂಗಿಸಲು ಖಾಸಗಿಯವರ 23 ಎಕರೆ ಭೂಮಿ ಸ್ವಾಧೀನಪಡಿಸಿಕೊಂಡು ಸರಿಪಡಿಸಲು ನಿರ್ಧರಿಸಲಾಗಿದೆ ಎಂದರು.

ಸರ್ಕಾರಕ್ಕೆ ಪತ್ರ:
ಜಿಲ್ಲೆಯಲ್ಲಿ 2009ರಲ್ಲಿ ಕೃಷ್ಣಾ ಹಾಗೂ ತುಂಗಭದ್ರಾ ಪ್ರವಾಹದಿಂದ ಪುನರ್ವಸತಿಗೊಂಡ ಗ್ರಾಮಗಳಲ್ಲಿ ಮೂಲಭೂತ ಸೌಲಭ್ಯ ಕಲ್ಪಿಸಲು ಬೇಕಾಗುವ ಅಗತ್ಯ ಅನುದಾನ ಬಿಡುಗಡೆಗೆ ಸರ್ಕಾರಕ್ಕೆ ಪತ್ರ ಬರೆಯುವುದಾಗಿ ತಿಳಿಸಿದರು.
ಈ ವಿಷಯಕ್ಕೆ ಸಂಬಂಧಿಸಿದಂತೆ ತಹಶೀಲ್ದಾರರಿಂದ ಮಾಹಿತಿ ಪಡೆದು ಯಾವ ತಾಲೂಕಿನ ಗ್ರಾಮಗಳಿಗೆ ಮೂಲ ಸೌಕರ್ಯಕ್ಕೆ ಎಷ್ಟು ಅನುದಾನ ಬೇಕಾಗುತ್ತದೆ ಎಂಬುದರ ಮಾಹಿತಿ ಪಡೆದು ಪತ್ರದಲ್ಲಿ ವಿವರಿಸಿಬರೆಯುವುದಾಗಿ ಹೇಳಿದರು.
ಕಡತ ವಿಲೇವಾರಿಗೆ ಚುರುಕು:
ತಮ್ಮ ಕಚೇರಿಯಲ್ಲಿ ಯಾವುದೆ ಕಡತಗಳು ವಿಳಂಬವಾಗದಂತೆ ವಿಲೇವಾರಿಯಾಗಲು ಅಧೀನ ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗೆ ಕಟ್ಟುನಿಟ್ಟಿನ ಸೂಚನೆ ನೀಡುವುದಾಗಿ ತಿಳಿಸಿದರು.

ನನ್ನ ಸಹಿಗಾಗಿ ಇರುವ ಯಾವುದೇ ಕಡತಗಳು ತಮ್ಮ ಬಳಿ ಇಟ್ಟುಕೊಳ್ಳದೆ ಅಂದಿನ ಕಡತ ಅಂದೆ ನನ್ನ ಬಳಿ ರವಾನಿಸಿ ಸಹಿ ಪಡೆಯಬೇಕು. ಆದರೆ , ಅದು ಬಿಟ್ಟು ನನ್ನ ಬಳಿ ಕಡತ ತೆಗೆದುಕೊಂಡು ಹೋದರೆ ಬೇಜಾರು, ಬಯ್ಯತ್ತಾರೆ ಎನ್ನುವ ನೆಪ ಹೇಲದೆ ಕಡತಗಳು ಸಹಿಗೆ ಮಂಡಿಸಬೇಕು ಎಂದುಸೂಚನೆ ನೀಡುವುದಾಗಿ ಪುನರುಚ್ಚರಿಸಿದರು.
ಕಂದಾಯ ಕಾರ್ಯಕ್ಕೆ ಆದ್ಯತೆ:
ಜಿಲ್ಲೆಯಲ್ಲಿ 1956ನೇ ಸಾಲಿನಲ್ಲಿ ತುಂಗಭದ್ರಾ ಎಡದಂಡೆಗೆ ಸ್ಔಆಧೀನಪಡಿಸಿಕೊಂಡ ಭೂಮಿ ಇನ್ನೂ ಸರ್ಕಾರದ ಹೆಸರಿಗೆ ಆಗಿಲ್ಲ. ಹೀಗಾಗಿ ಸರ್ಕಾರ ಪುನರ್ ವಸತಿಗೆ ಸೇರಿದಂತೆ ವಿವಿಧ ಉದ್ದೇಶಕ್ಕೆ ಸ್ವಾಧೀನಪಡಿಸಿಕೊಂಡ ಖಾಸಗಿ ಭೂಮಿಯನ್ನು ಸಂಬಂಧಪಟ್ಟ ಇಆಳಾಕೆಗೆ ಅಥವಾ ಸರ್ಕಾರ ಎಂದು ನಮೂದಿಸುವ ಕಾರ್ಯಕ್ಕೆ ಚಾಲನೆ ನೀಡಲಾಗುವುದು ಎಂದರು.
-
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ -
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ -
ಎಲೆಕ್ಷನ್ ಇವತ್ತೇ ನಡೆದರೆ ತಮಿಳುನಾಡು, ಕೇರಳಂ, ಪಶ್ಚಿಮ ಬಂಗಾಳದಲ್ಲಿ ಯಾರಿಗೆ ಗೆಲುವು? ಸಮೀಕ್ಷೆ ನೀಡಿದ ಮಾಹಿತಿ ಇಲ್ಲಿದೆ -
ಟೀಂ ಇಂಡಿಯಾ ಕ್ರಿಕೆಟರ್ ಕುಲದೀಪ್ ಯಾದವ್ ಕೈಹಿಡಿದ ವಂಶಿಕಾ ಚಡ್ಡಾ ಯಾರು? -
Bengaluru: 1 ತಿಂಗಳು ಬದುಕೋಕೆ ಇಷ್ಟೊಂದು ಖರ್ಚಾಗುತ್ತಾ? ಯುವತಿಯ ಪೋಸ್ಟ್ ಕಂಡು ಬೆಚ್ಚಿಬಿದ್ದ ನೆಟ್ಟಿಗರು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
Oscars 2026: ಮೈಕಲ್ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ: ಪ್ರಶಸ್ತಿ ವಿಜೇತರ ಪಟ್ಟಿ ಇಲ್ಲಿದೆ












Click it and Unblock the Notifications