ಆರ್ಟಿಪಿಎಸ್ ವಿದ್ಯುತ್ ಘಟಕಗಳಿಂದ ಮೇ 5ರಂದು 32 ಸಾವಿರ ಮಿಲಿಯನ್ ಯೂನಿಟ್ ಉತ್ಪಾದನೆ
ರಾಯಚೂರು, ಮೇ 5: ಕಲ್ಲಿದ್ದಲ ಕೊರತೆಯಿಂದ ವಿದ್ಯುತ್ ಉತ್ಪಾದನೆಯ ಬಗ್ಗೆ ಆತಂಕ ಇರುವ ಮಧ್ಯೆಯೇ ರಾಯಚೂರು ಶಾಖೋತ್ಪನ್ನ ವಿದ್ಯುತ್ ಕೇಂದ್ರ (ಆರ್ಟಿಪಿಎಸ್) ವಿದ್ಯುತ್ ಉತ್ಪಾದನೆ ಹೆಚ್ಚಳ ಮಾಡಿದೆ.
ಪ್ರಸಕ್ತ ಸಾಲಿನಲ್ಲಿ ಆರ್ಟಿಪಿಎಸ್ನ ಒಟ್ಟು ಎಂಟು ವಿದ್ಯುತ್ ಘಟಕಗಳಿಂದ ಗುರುವಾರ 32 ಸಾವಿರ ಮಿಲಿಯನ್ ಯೂನಿಟ್ ವಿದ್ಯುತ್ ಉತ್ಪಾದನೆ ಮಾಡುವ ಮೂಲಕ ಅಧಿಕಾರಿಗಳಲ್ಲಿ ಆತ್ಮವಿಶ್ವಾಸ ಹೆಚ್ಚಿಸಿದೆ.
ರಾಯಚೂರು ಜಿಲ್ಲೆಯ ಶಕ್ತಿನಗರದ ಆರ್ಟಿಪಿಎಸ್ನಲ್ಲಿ ಒಟ್ಟು ಎಂಟು ವಿದ್ಯುತ್ ಘಟಕಗಳಿಂದ ರಾಜ್ಯಕ್ಕೆ ಶೇಕಡಾ 40 ರಷ್ಟು ವಿದ್ಯುತ್ ಉತ್ಪಾದನೆ ಮಾಡಲಾಗುತ್ತಿದೆ. ಕಳೆದ ತಿಂಗಳಿಂದ ಕಲ್ಲಿದ್ದಲು ಸಮಸ್ಯೆಯಿಂದಾಗಿ ಆರ್ಟಿಪಿಎಸ್ ಎಂಟು ವಿದ್ಯುತ್ ಘಟಕಗಳನ್ನು ಸಂಪೂರ್ಣವಾಗಿ ಉತ್ಪಾದನೆ ಮಾಡಲು ಆಗಲಿಲ್ಲ. ಇಂತಹ ಒತ್ತಡದ ಮಧ್ಯೆಯೂ ಬೇಡಿಕೆಗೆ ಅನುಸಾರವಾಗಿ ಆರ್ಟಿಪಿಎಸ್ ಅಧಿಕಾರಿಗಳು ಮತ್ತು ಕಾರ್ಮಿಕರು ಕಾರ್ಯನಿರ್ವಹಿಸುತ್ತಿದ್ದರು.

1.12 ಲಕ್ಷ ಮೆಟ್ರಿಕ್ ಟನ್ ಕಲ್ಲಿದ್ದಲು ಸಂಗ್ರಹ:
"ಕಲ್ಲಿದ್ದಲು ವಿಭಾಗದಲ್ಲಿ ಒಟ್ಟು 1 ಲಕ್ಷ 12 ಸಾವಿರ ಮೆಟ್ರಿಕ್ ಟನ್ ರಷ್ಟು ಕಲ್ಲಿದ್ದಲು ಸಂಗ್ರಹ ಇದೆ. ದಿನಕ್ಕೆ 1 ರಿಂದ 6 ಕಲ್ಲಿದ್ದಲು ರೇಕ್ಗಳು ಬರುತ್ತಿವೆ. ಸದ್ಯಕ್ಕೆ ಕಲ್ಲಿದ್ದಲು ಸಮಸ್ಯೆ ಇಲ್ಲ," ಎಂದು ಆರ್ಟಿಪಿಎಸ್ ಮುಖ್ಯ ಕಾರ್ಯನಿರ್ವಾಹಕ ನಿರ್ದೇಶಕ ಶಶಿಕಾಂತ ಅವರನ್ನು 'ಒನ್ಇಂಡಿಯಾ ಕನ್ನಡ' ಸಂಪರ್ಕಿಸಿದಾಗ ಮಾಹಿತಿ ನೀಡಿದರು.
ಆರ್ಟಿಪಿಎಸ್ ಎಂಟು ಘಟಕಗಳಿಂದ 1,720 ಸಾಮರ್ಥ್ಯದ ಉತ್ಪಾದನೆಯಲ್ಲಿ 210 ಮೆಗಾವಾಟ್ ಸಾಮರ್ಥ್ಯದ ಒಂದನೇ ವಿದ್ಯುತ್ ಘಟಕದಿಂದ 134 ಮೆಗಾವಾಟ್, 2ನೇ ಘಟಕದಿಂದ 132 ಮೆಗಾವಾಟ್, 3ನೇ ಘಟಕದಿಂದ 137 ಮೆಗಾವಾಟ್, 4ನೇ ಘಟಕದಿಂದ 140 ಮೆಗಾವಾಟ್, 5ನೇ ಘಟಕದಿಂದ 132, 6ನೇ ವಿದ್ಯುತ್ ಘಟಕದಿಂದ 129 , 7ನೇ ವಿದ್ಯುತ್ ಘಟಕದಿಂದ 191 ಮೆಗಾವಾಟ್ ಹಾಗೂ 250 ಮೆಗಾವಾಟ್ ಸಾಮರ್ಥ್ಯದ 8ನೇ ಘಟಕದಿಂದ 153 ಮೆಗಾವಾಟ್ ಸೇರಿ ಒಟ್ಟು 1,140 ಮೆಗಾವಾಟ್ ಸಾಮರ್ಥ್ಯದ ವಿದ್ಯುತ್ ಉತ್ಪಾದನೆ ಆಗುತ್ತಿದೆ ಎಂದು ಮೂಲಗಳು ತಿಳಿಸಿವೆ.

ಬೇಸಿಗೆಯಲ್ಲಿ ನಿಟ್ಟುಸಿರು:
ಬೇಸಿಗೆಯಲ್ಲಿ ಆರ್ಟಿಪಿಎಸ್ನ ವಿದ್ಯುತ್ ಘಟಕಗಳ ಉತ್ಪಾದನೆಗೆ ತಾಂತ್ರಿಕ ಸಮಸ್ಯೆ ಆಗದಂತೆ ಕ್ರಮ ಕೈಗೊಳ್ಳಬೇಕು ಎಂಬುದು ಕರ್ನಾಟಕ ವಿದ್ಯುತ್ ನಿಗಮದ ಅಧಿಕಾರಿಗಳಿಂದ , ಆರ್ಟಿಪಿಎಸ್ ಅಧಿಕಾರಿಗಳಿಗೆ ಒತ್ತಡ ಇರುತ್ತದೆ. ಈ ವಿದ್ಯುತ್ ಘಟಕಗಳಿಂದ , ವಿದ್ಯುತ್ ಉತ್ಪಾದನೆ ಪ್ರಮಾಣ ಕಡಿಮೆಯಾದರೂ ಸಾಕು, ರಾಜ್ಯ ಕಗ್ಗತ್ತಲಲು ಆವರಿಸುವ ಆತಂಕ ಎದುರಾಗುತ್ತದೆ. ಹೀಗಾಗಿ ಇಂತಹ ಒತ್ತಡಗಳ ಮಧ್ಯೆಯೂ , ಇವತ್ತು 32 ಸಾವಿರ ಮಿಲಿಯನ್ ಯೂನಿಟ್ ವಿದ್ಯುತ್ ಉತ್ಪಾದನೆ ಆಗಿದೆ. ಇದರಿಂದಾಗಿ ಸ್ವಲ್ಪಮಟ್ಟಿಗೆ ಅಧಿಕಾರಿಗಳು ನಿಟ್ಟುಸಿರು ಬಿಟ್ಟಿದ್ದಾರೆ. ಜೊತೆಗೆ ಆತ್ಮವಿಶ್ವಾಸವು ಹೆಚ್ಚಿಸಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications