ದೇವದುರ್ಗದಲ್ಲಿ 40-50 ವರ್ಷದವರೂ ವೃದ್ದಾಪ್ಯ ವೇತನ ಫಲಾನುಭವಿಗಳು!
ರಾಯಚೂರು ಸೆಪ್ಟೆಂಬರ್ 23: ಸಾಮಾಜಿಕ ಪಿಂಚಣಿ ಯೋಜನೆಯಾದ ವೃದ್ಧಾಪ್ಯ ವೇತನವನ್ನು ತಾಲ್ಲೂಕಿನಲ್ಲಿ 40-50 ವಯೋಮಾನದ ಜನರಿಗೆ ಮಂಜೂರು ಮಾಡುತ್ತಿರುವ ಆರೋಪ ಕೇಳಿ ಬಂದಿದೆ. ಅನರ್ಹರಿಗೆ ಸಾಮಾಜಿಕ ಪಿಂಚಣಿ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 13 ರಿಂದ 17ರವರೆಗೆ ಕಲಬುರಗಿಯ ವಿಭಾಗೀಯ ಲೆಕ್ಕಪರಿಶೋಧನಾ ಸಮಿತಿಯು ಪರಿಶೀಲನೆ ನಡೆಸಿದ್ದು, ಈ ವೇಳೆ ಅನರ್ಹರಿಗೆ ವೃದ್ದಾಪ್ಯ ವೇತನ ಮಂಜೂರು ಮಾಡಿರುವುದು ಬೆಳಕಿಗೆ ಬಂದಿದೆ.
ದೇವದುರ್ಗ ತಾಲ್ಲೂಕಿನ ಸುಮಾರು 6 ಸಾವಿರಕ್ಕೂ ಹೆಚ್ಚು ಮಂದಿ ಅನರ್ಹರು ವೃದ್ಯಾಪ್ಯ ವೇತನ, ಅಂಗವಿಕಲ, ಸಂಧ್ಯಾ ಸುರಕ್ಷಾ ಯೋಜನೆ, ಮನಸ್ವಿನಿ ಯೋಜನೆಯ ಫಲಾನುಭವಿಗಳಾಗಿದ್ದಾರೆ ಎಂಬುದು ಪರಿಶೀಲನೆ ವೇಳೆ ಬಹಿರಂಗವಾಗಿದೆ.
ಪರಿಶೀಲನೆ ವೇಳೆ ಲೆಕ್ಕಪತ್ರಗಳು ತಾಳೆಯಾಗಿಲ್ಲ ಎಂಬುದು ಮೇಲುನೋಟಕ್ಕೆ ಕಂಡು ಬಂದಿದೆ. ಸಾಕಷ್ಟು ಲೋಪ ದೋಷಗಳಿದ್ದು, ಈ ಕುರಿತು ಒಂದು ತಿಂಗಳ ಒಳಗೆ ಉತ್ತರ ನೀಡುವಂತೆ ತಿಳಿಸಲಾಗಿದೆ. ನಂತರ ವಿಭಾಗೀಯ ಆಯುಕ್ತರಿಗೆ ವರದಿ ಸಲ್ಲಿಸಲಾಗುವುದು ಎಂದು ಲೆಕ್ಕ ಪರಿಶೋಧನಾ ಅಧಿಕಾರಿಗಳು ತಿಳಿಸಿದರು.

"ಸಾಮಾಜಿಕ ಪಿಂಚಣಿ ಸೌಲಭ್ಯಕ್ಕೆ ಅರ್ಹರಾದ ನಾವು ಕಳೆದ 2 ವರ್ಷದಿಂದ ನಿರಂತರವಾಗಿ ಅರ್ಜಿ ಸಲ್ಲಿಸುತ್ತಿದ್ದು, ಹಣ ನೀಡದ ಹಿನ್ನೆಲೆಯಲ್ಲಿ ತಹಶೀಲ್ದಾರ್ ಅರ್ಜಿಗಳನ್ನು ತಿರಸ್ಕರಿಸಿದ್ದಾರೆ" ಎಂದು ತಾಲ್ಲೂಕಿನ ಗಬ್ಬೂರಿನ ಬೂದಿಬಸವ, ಜಾಲಹಳ್ಳಿಯ ರಂಗನಾಥ, ಲಿಂಗಣ್ಣ, ಯಾಟಗಲ ಗ್ರಾಮದ ಗಂಗಪ್ಪ ಮತ್ತು ಅರಕೇರದ ನಾಗರಾಜ ಆರೋಪಿಸಿದ್ದಾರೆ.
"ಕಂದಾಯ ಇಲಾಖೆ ಅಧಿಕಾರಿಗಳು ಮಧ್ಯವರ್ತಿಗಳ ಮೂಲಕ ಸಾಮಾಜಿಕ ಪಿಂಚಣಿಯ ಒಂದು ಅರ್ಜಿಗೆ 6 ಸಾವಿರ ರೂ ನಿಗದಿಪಡಿಸಿದ್ದು, ನಿಗದಿತ ಹಣ ನೀಡಿದ ಬಳಿಕ ತಹಶೀಲ್ದಾರ್ ಆದೇಶ ಪ್ರತಿ ನೀಡುತ್ತಿದ್ದಾರೆ. ಅರಿಶಿಣಗಿ, ಕೊಪ್ಪರ, ರಾಮನಾಳ ಗ್ರಾಮದ ಕಡಿಮೆ ವಯೋಮಾನದವರಿಗೆ ಈಗಾಗಲೇ ವೃದ್ಯಾಪ್ಯ ವೇತನ ಮಂಜೂರು ಮಾಡಲಾಗಿದೆ. ದೇವದುರ್ಗ, ಗಬ್ಬೂರು, ಜಾಲಹಳ್ಳಿ, ಅರಕೇರಾ ಹೋಬಳಿಗಳ ವ್ಯಾಪ್ತಿಯಲ್ಲಿ ಮಧ್ಯವರ್ತಿಗಳ ಹಾವಳಿ ಹೆಚ್ಚಾಗಿದೆ" ಎಂದು ವೃದ್ಯಾಪ್ಯ ವೇತನ ವಂಚಿತರು ಆರೋಪಿಸಿದ್ದಾರೆ.
ಸರ್ಕಾರದ ಬಹುತೇಕ ಯೋಜನೆಗಳಿಗೆ ಸಲ್ಲಿಸುವ ಅರ್ಜಿಗಳಿಗೆ ಹಿಂಬರಹ ನೀಡಿ ನಂತರ ಅವುಗಳಿಗೆ ಮಧ್ಯವರ್ತಿಗಳ ಮೂಲಕ ಹಣಕ್ಕೆ ಬೇಡಿಕೆ ಇಡುತ್ತಾರೆ. ತಾಲ್ಲೂಕಿನ ಹಲವು ವೃದ್ಧರೂ, ವಿಧವೆಯರು, ಅಂಗವಿಕಲರು ಕಚೇರಿಗೆ ಅಲೆದು ಬೇಸತ್ತಿದ್ದಾರೆ. ಪಟ್ಟಣದ ಕೆಲವು ಸರ್ಕಾರಿ ವೈದ್ಯರು 2 ಸಾವಿರ ರೂ ನೀಡಿದರೆ ವಯಸ್ಸಿನ ದೃಢೀಕರಣ ಪ್ರಮಾಣ ಪತ್ರಕ್ಕೆ ಸಹಿ ಹಾಕುತ್ತಾರೆ ಎಂದು ಸೂಗರಾಳ ಗ್ರಾಮದ ವೃದ್ಧ ಸಾಬಯ್ಯ ಎಂಬುವವರು ಆರೋಪಿಸಿದ್ದಾರೆ.
ತಾಲ್ಲೂಕಿನಾದ್ಯಂತ ಪ್ರತಿ ಹಳ್ಳಿಗಳಲ್ಲೂ ನಕಲಿ ಫಲಾನುಭವಿಗಳನ್ನು ಪತ್ತೆ ಹಚ್ಚಿ ಮಾಹಿತಿ ಸಂಗ್ರಹಿಸಿದ್ದೇವೆ.ಈ ಕುರಿತು ಜಿಲ್ಲಾಧಿಕಾರಿಗೆ ದೂರು ನೀಡಲಾಗುವುದು ಎಂದು ಕರಿಗುಡ್ಡದ ರಾಮಣ್ಣ ಹೇಳಿದರು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications