ರಾಯಚೂರು; ಕಲುಷಿತ ನೀರು ಸೇವನೆ ಮಹಿಳೆ ಸಾವು, 40 ಜನರು ಅಸ್ವಸ್ಥ
ರಾಯಚೂರು, ಜು.4: ರಾಯಚೂರು ನಗರದಲ್ಲಿ ಕಲುಷಿತ ನೀರು ಸೇವಿಸಿ ಕಳೆದ ತಿಂಗಳು 7 ಜನರು ಮೃತಪಟ್ಟಿದ್ದರು. ಈಗ ಮತ್ತೆ ಇಂತಹ ಪ್ರಕರಣ ನಡೆದಿದೆ.
ಜಿಲ್ಲೆಯ ಮಾನ್ವಿ ತಾಲ್ಲೂಕಿನ ವಲ್ಕಂದಿನ್ನಿ ಮತ್ತು ಜೂಕೂರ ಗ್ರಾಮಗಳಲ್ಲಿ ಕಲುಷಿತ ನೀರು ಸೇವಿಸಿ ಓರ್ವ ಮಹಿಳೆ ಮೃತಪಟ್ಟಿದ್ದಾರೆ, 40 ಜನರು ಅಸ್ವಸ್ಥಗೊಂಡಿದ್ದಾರೆ. ಈ ಘಟನೆ ಗ್ರಾಮದ ಜನರಲ್ಲಿ ಆತಂಕ ಹುಟ್ಟಿಸಿದೆ.
ವಲ್ಕಂದಿನ್ನಿ ಮತ್ತು ಜೂಕೂರ ಗ್ರಾಮಗಳಲ್ಲಿ ಜನರು ಭಾನುವಾರ ಕಲುಷಿತ ನೀರು ಸೇವಿಸಿದ್ದರು. ಜೂಕೂರು ಗ್ರಾಮದ ಲಕ್ಷ್ಮೀ ಎಂಬ ಮಹಿಳೆ ಮೃತಪಟ್ಟಿದ್ದಾರೆ.

ಪಿಡಿಒ ಮತ್ತು ತಾ ಪಂ.ಇಒ ವಿರುದ್ಧ ಗ್ರಾಮಸ್ಥರ ಆಕ್ರೋಶ
ಮಾನ್ವಿ ತಾಲೂಕಿನ ವಲ್ಕಂದಿನ್ನಿ ಮತ್ತು ಜೂಕೂರು ಗ್ರಾಮದಲ್ಲಿ ಜೂನ್ 30ರಿಂದ ಕಲುಷಿತ ನೀರು ಸರಬರಾಜು ಆಗುತ್ತಿತ್ತು. ಬಗ್ಗೆ ಅಧಿಕಾರಿಗಳ ಗಮನಕ್ಕೆ ತಂದರೂ ಸಹ ಅಧಿಕಾರಿಗಳು ಕ್ರಮ ಕೈಗೊಂಡಿಲ್ಲ. ಹೀಗಾಗಿ ಕಲುಷಿತ ನೀರು ಸೇವನೆ ಮಾಡಿದ ಜೂಕೂರು ಗ್ರಾಮದ ಲಕ್ಷ್ಮಿ ( 26) ಎಂಬ ಮಹಿಳೆಗೆ ವಾಂತಿ, ಭೇದಿ ಶುರುವಾಗಿದೆ. ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ವೈದ್ಯರು ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ರಾಯಚೂರಿನ ರಿಮ್ಸ್ ಆಸ್ಪತ್ರೆ ಕರೆದುಕೊಂಡು ಹೋಗುವಂತೆ ಹೇಳಿದ್ದಾರೆ. ರಿಮ್ಸ್ಗೆ ಕರೆದುಕೊಂಡು ಹೋಗಲು ತಯಾರಿ ನಡಸುವಾಗಲೇ ಆಕೆ ಮೃತಪಟ್ಟಿದ್ದಾಳೆ. ನೀರು ಕುಡಿದು ಅಸ್ವಸ್ಥರಾದವರಲ್ಲಿ ಶಾಲಾ ಮಕ್ಕಳು ಸಹ ಸೇರಿದ್ದಾರೆ.

ಕಲುಷಿತ ನೀರಿನಿಂದಲೇ ಸಮಸ್ಯೆ
ವೆಲ್ಕಂದಿನ್ನಿ ಹಾಗೂ ಜೂಕೂರು ಗ್ರಾಮಕ್ಕೆ ನಿತ್ಯ ತುಂಗಭದ್ರಾ ನದಿಯ ನೀರು ಕಾಲುವೆ ಮೂಲಕ ಸರಬರಾಜು ಆಗುತ್ತದೆ. ಕಾಲುವೆ ಕಲುಷಿತಗೊಂಡಿದ್ದು, ಅದರಿಂದಲೇ ಗ್ರಾಮಗಳಲ್ಲಿ ವಾಂತಿ-ಬೇಧಿ ಶುರುವಾಗಿದೆ ಎಂಬುದು ಜನರ ಆರೋಪ. ಗ್ರಾಮ ಪಂಚಾಯತಿ ಪಿಡಿಒ ಮತ್ತು ಮಾನವಿ ತಾಲೂಕಾ ಪಂಚಾಯತಿ ಇಒಗಳ ನಿರ್ಲಕ್ಷ್ಯವೇ ಘಟನೆಗೆ ಕಾರಣ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.
ಅರೋಗ್ಯ ಇಲಾಖೆ ಅಧಿಕಾರಿಗಳು ಗ್ರಾಮದ ಮನೆ- ಮನೆಗಳಿಗೆ ಭೇಟಿ ನೀಡಿ ನಲ್ಲಿಯಲ್ಲಿ ಸರಬರಾಜು ಆಗುವ ನೀರನ್ನು ಸೋಸಿ ಮತ್ತು ಕಾಯಿಸಿ ಕುಡಿಯುವಂತೆ ಜಾಗೃತಿ ಮೂಡಿಸುತ್ತಿದ್ದಾರೆ. ಜೊತೆಗೆ ವಲ್ಕಂದಿನ್ನಿ ಗ್ರಾಮದ ಸಮುದಾಯ ಭವನದಲ್ಲಿ ವೈದ್ಯರು ತಂಡವು ಜನರಿಗೆ ಚಿಕಿತ್ಸೆ ನೀಡಲು ಮುಂದಾಗಿದೆ.

ಅಧಿಕಾರಿಗಳು, ಶಾಸಕರ ನಡೆ ವಿರುದ್ಧ ಆಕ್ರೋಶ
ಕಲುಷಿತ ನೀರು ಸೇವಿಸಿ ಓರ್ವ ಮಹಿಳೆ ಸಾವನ್ನಪ್ಪಿದ ಬಳಿಕ ಎಚ್ಚತ್ತುಕೊಂಡ ಅಧಿಕಾರಿಗಳು ಹಾಗೂ ರಾಯಚೂರು ಡಿಎಚ್ ಒ ಡಾ. ಸುರೇಂದ್ರ ಬಾಬು ವಲ್ಕಂದಿನ್ನಿ ಮತ್ತು ಜೂಕೂರು ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗ್ರಾಮದಲ್ಲಿ ಮೊಬೈಲ್ ಆಸ್ಪತ್ರೆ ಮತ್ತು ಆಂಬುಲೆನ್ಸ್ ವ್ಯವಸ್ಥೆ ಸಹ ಮಾಡಿದ್ದಾರೆ. ಮಹಿಳೆ ಸಾವಿನ ಕಾರಣದ ಬಗ್ಗೆ ವರದಿಯನ್ನು ಸಹ ಅಧಿಕಾರಿಗಳು ಹೇಳಿದ್ದಾರೆ.
ಗ್ರಾಮ ಪಂಚಾಯತಿ ಸರಬರಾಜು ಮಾಡಿದ ನೀರು ಸೇವಿಸಿದ ಎರಡು ಗ್ರಾಮಗಳ ಜನರು ಈಗ ವಾಂತಿ, ಬೇಂಧಿಯಿಂದ ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ. ಆದರೆ ಜಿಲ್ಲಾ ಪಂಚಾಯತ್ ಸಿಇಒ ಹಾಗೂ ಜನಪ್ರತಿನಿಧಿಗಳು ಯಾರು ಗ್ರಾಮಕ್ಕೆ ಭೇಟಿ ನೀಡಿಲ್ಲ ಎಂದು ಜನರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರಾಯಚೂರಿನ ವಿವಿಧ ಆಸ್ಪತ್ರೆಗಳಿಗೆ ದಾಖಲು
ಅಸ್ವಸ್ಥಗೊಂಡಿರುವ ಜನರು ರಾಯಚೂರಿನ ವಿವಿಧ ಆಸ್ಪತ್ರೆಗಳಿಗೆ ದಾಖಲಾಗಿದ್ದಾರೆ. ಆರೋಗ್ಯ ಇಲಾಖೆ ಸಿಬ್ಬಂದಿ ಗ್ರಾಮಗಳಿಗೆ ಧಾವಿಸಿ ಸಮುದಾಯ ಭವನಗಳಲ್ಲೇ ಹೊರರೋಗಿ ವಿಭಾಗ ಆರಂಭಿಸಿ ಚಿಕಿತ್ಸೆ ನೀಡಿ, ಕೆಲವರನ್ನು ಆಸ್ಪತ್ರೆಗಳಿಗೆ ರವಾನಿಸಿದ್ದಾರೆ.
"ನದಿಯಿಂದ ಪೂರೈಸಲಾದ ನೀರು ಕುಡಿದಿರುವುದರಿಂದ ಗ್ರಾಮಸ್ಥರಿಗೆ ವಾಂತಿ ಬೇಧಿಯಾಗಿ ಅಸ್ವಸ್ಥಗೊಳ್ಳಲು ಕಾರಣವಾಗಿದೆ. ವಲ್ಕಂದಿನ್ನಿಯಲ್ಲಿ 25 ಮತ್ತು ಜೂಕೂರಿನಲ್ಲಿ 15 ಜನರು ಅಸ್ವಸ್ಥಗೊಂಡಿದ್ದಾರೆ" ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಚಂದ್ರಶೇಖರಯ್ಯ ತಿಳಿಸಿದರು.
-
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ -
ಸಾಮಾಜಿಕ ಜಾಲತಾಣದ ಕರೆಗೆ ಓಗೊಟ್ಟ ಹೆಚ್.ಡಿ.ಕುಮಾರಸ್ವಾಮಿ: ನಂಜನಗೂಡಿನ ಹುಲ್ಲಳ್ಳಿಯ ನೊಂದ ಕುಟುಂಬಕ್ಕೆ ಅಭಯ -
ಡಿವಿಜಿ ಒಡನಾಡಿ,ರಾಷ್ಟ್ರೋತ್ಥಾನದ ಮಾಜಿ ಅಧ್ಯಕ್ಷ ಎಸ್ಆರ್ ರಾಮಸ್ವಾಮಿ ನಿಧನ












Click it and Unblock the Notifications