ರಾಯಚೂರು ಜಿಲ್ಲೆಯಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ಹೆಚ್ಚು ಬಿಯರ್ ಮಾರಾಟ, 2022ರ ದಾಖಲೆ ಉಡೀಸ್, ಎಲ್ಲೆಲ್ಲಿ ಎಷ್ಟು?
ರಾಯಚೂರು, ಜೂನ್, 02: ರಾಯಚೂರು ಜಿಲ್ಲೆಯಲ್ಲಿ ಕಳೆದ ವರ್ಷಕ್ಕಿಂತ ಬಾರಿ ದಾಖಲೆ ಮಟ್ಟದಲ್ಲಿ ಬಿಯರ್ ಮಾರಾಟ ಆಗಿದೆ. ಹಾಗಾದರೆ ಎಲ್ಲೆಲ್ಲಿ ಎಷ್ಟು ಬಿಯರ್ ಬಾಕ್ಸ್ಗಳು ಮಾರಾಟ ಆಗಿವೆ ಹಾಗೂ ಇದಕ್ಕೆ ಪ್ರಮುಖ ಕಾರಣ ಏನು ಅನ್ನುವ ಸಂಪೂರ್ಣ ವಿವರವನ್ನು ಇಲ್ಲಿ ತಿಳಿಯಿರಿ.
ಕೊರೊನಾ ಕಾರಣದಿಂದ ಕಳೆದ ಎರಡು ವರ್ಷ ಮದ್ಯಪ್ರಿಯರು ಬೇಸಿಗೆಯಲ್ಲಿ ಮದ್ಯ ಸೇವನೆ ಕಡಿಮೆ ಮಾಡಿದ್ದರು. ಆದರೆ ಈ ಬಾರಿ ರಾಯಚೂರು ಜಿಲ್ಲೆಯಲ್ಲಿ ಕಳೆದ ವರ್ಷಕ್ಕಿಂತ ಎರಡು ತಿಂಗಳಲ್ಲಿ ಸುಮಾರು 3.29 ಲಕ್ಷ ಬಾಕ್ಸ್ ಬಿಯರ್ ಮಾರಾಟ ಮಾಡಿ ದಾಖಲೆ ನಿರ್ಮಾಣ ಆಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಪ್ರತಿ ವರ್ಷ ಬೇಸಿಗೆ ಕಾಲದಲ್ಲಿ ಬಿಯರ್ ಮಾರಾಟ ಹೆಚ್ಚಾಗುತ್ತಲೇ ಇದೆ. ಅನೇಕ ಮದ್ಯಪ್ರಿಯರು ಬೇಸಿಗೆಯಲ್ಲಿ ಕೂಲ್ ಆಗಿರಲು ಬಿಯರ್ ಕುಡಿಯಲು ಪ್ರಾರಂಭ ಮಾಡಿದ್ದಾರೆ. ಇದರಲ್ಲಿ ಆಲ್ಕೋಹಾಲ್ ಪ್ರಮಾಣ ಕಡಿಮೆ ಪ್ರಮಾಣದಲ್ಲಿ ಇರುತ್ತದೆ. ಮತ್ತು ಇದು ಆರೋಗ್ಯಕ್ಕೆ ಹಾನಿಕಾರಕ ಅಲ್ಲ ಎಂಬ ತಪ್ಪು ಕಲ್ಪನೆಯಿಂದ ಬೇಸಿಗೆಯಲ್ಲಿ ಬಿಯರ್ ಅನ್ನು ಜನರು ಹೆಚ್ಚಾಗಿ ಕುಡಿಯುತ್ತಿದ್ದಾರೆ.
ರಾಯಚುರು ಜಿಲ್ಲೆಯಲ್ಲಂತೂ ಯುವ ಜನತೆ ಬಿಯರ್ ಅನ್ನು ಎಳನೀರಿನಂತೆ ಕುಡಿಯುತ್ತಿರುವುದು ಬೆಳಕಿಗೆ ಬಂದಿದೆ. ಪ್ರತಿ ವರ್ಷದ ಮಾರ್ಚ್ ಮತ್ತು ಏಪ್ರಿಲ್ ತಿಂಗಳಲ್ಲಿ ಬಿಯರ್ ಮಾರಾಟ ಹೆಚ್ಚಾಗಿರುತ್ತದೆ. ಈ ವರ್ಷ ಈಗಾಗಲೇ ಬೇಸಿಗೆಯ ಬಿಸಿಲಿಗೆ ಜಿಲ್ಲೆಯ ಜನತೆ ತತ್ತರಿಸಿದ್ದು, ರಾಜ್ಯದಲ್ಲೇ ಅತಿ ಹೆಚ್ಚಿನ ತಾಪಮಾನ ಸಿಂಧನೂರಿನ ಸಾಲಗುಂದಾದಲ್ಲಿ 45.6 ಡಿಗ್ರಿ ದಾಖಲಾಗಿತ್ತು. ಜಿಲ್ಲೆಯ ಎಲ್ಲೆಡೆ 43ರಿಂದ 45 ಡಿಗ್ರಿ ತಾಪಮಾನ ದಾಖಲಾಗಿದ್ದು, ಹೀಗೆ ಬಿಸಿಲಿನ ಝಳ ಹೆಚ್ಚಳದಿಂದ ಜನರು ಬಿಯರ್ ಮೊರೆ ಹೋಗಲು ಕಾರಣವಾಗಿದೆ.
ಈ ಬಾರಿ ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬಿಯರ್ ಮಾರಾಟ ಮಾಡಲಾಗಿದ್ದು, ಕಳೆದ ವರ್ಷ 6,12,709 ಬಾಕ್ಸ್ ಮಾರಾಟ ಆಗಿದ್ದರೆ, ಈ ಬಾರಿ 8,71,714 ಬಾಕ್ಸ್ ಬಿಯರ್ಗಳು ಮಾರಾಟ ಆಗಿವೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಸುಮಾರು 2,59,005 ಬಿಯರ್ ಬಾಕ್ಸ್ಗಳ ಮಾರಾಟ ಹೆಚ್ಚಾಗಿದೆ ಎಂದು ಅಬಕಾರಿ ಇಲಾಖೆ ಮಾಹಿತಿ ನೀಡಿದೆ.
ಎಲ್ಲೆಲ್ಲಿ ಎಷ್ಟು ಬಿಯರ್ ಮಾರಾಟ?
1. ರಾಯಚೂರು - 3,29,773
2. ಮಾನ್ವಿ 2,55,483
3. ಸಿಂಧನೂರು 1,38,915,
4. ಲಿಂಗಸೂಗೂರು 1,47,534 ಬಿಯರ್ ಬಾಕ್ಸ್ಗಳ ಮಾರಾಟ
ಕೇವಲ ಎರಡೇ ತಿಂಗಳಲ್ಲಿ ಬಿಯರ್ ಮಾರಾಟ ಹೆಚ್ಚಾಗಿದ್ದು, ಇದು ಕಳೆದ ವರ್ಷಕ್ಕಿಂತ ಹೆಚ್ಚಿನ ದಾಖಲೆ ಆಗಿದೆ ಎಂದು ವೈನ್ ಶಾಪ್ ಮಾಲೀಕರು ತಿಳಿಸಿದ್ದಾರೆ. ಮತ್ತೊಂದೆಡೆ ಬಿಯರ್ ಕುಡಿಯುವ ಚಟ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಬಿಸಿಲಿನ ವಾತಾವರಣದಲ್ಲಿ ಮದ್ಯಪಾನ ಮಾಡುವುದು ದೈಹಿಕ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ವೈದ್ಯರು ಎಚ್ಚರಿಕೆ ನೀಡಿದ್ದಾರೆ.
ಪ್ರತಿ ವರ್ಷ ಬೇಸಿಗೆಯಲ್ಲಿ ಕಡಿಮೆ ದರದಲ್ಲಿ ಬಿಯರ್ ದೊರೆಯುತ್ತದೆ. ಇದರಲ್ಲಿ ನಾನಾ ಬಗೆಯ ಬಿಯರ್ ದೊರೆಯುತ್ತಿದ್ದು, ಎರಡು ಕಂಪನಿಯ ಬಿಯರ್ಗಳು ಮಾತ್ರ ಕೇವಲ ನೂರು ರೂಪಾಯಿಗೆ ದೊರೆಯುತ್ತದೆ. ಆಂಧ್ರಪ್ರದೇಶ ಮತ್ತು ತೆಲಂಗಾಣದ ಗಡಿಯಲ್ಲಿ ಇರುವ ಜಿಲ್ಲೆಯ ಗ್ರಾಮಸ್ಥರು ಕೇವಲ ಹತ್ತು ರೂಪಾಯಿ ದೊರೆಯುವ ಸೇಂದಿ ಮೊರೆ ಹೋಗಿದ್ದಾರೆ. ಅಬಕಾರಿ ಇಲಾಖೆ ಜಾಗೃತಿ ಮೂಡಿಸಿದರೂ ಕಳ್ಳತನದಿಂದ ಸೇಂದಿಯನ್ನು ಪಕ್ಕದ ರಾಜ್ಯಗಳಿಂದ ತಂದು ಸೇವನೆ ಮಾಡುತ್ತಿದ್ದಾರೆ ಎಂದು ತಿಳಿದುಬಂದಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications