ಶ್ರೀರಾಮನ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಆರೋಪಿ ಬಂಧನ
ರಾಯಚೂರು, ಆ. 19: ಬೆಂಗಳೂರಿನ ದೇವರ ಜೀವನಹಳ್ಳಿ ಹಾಗೂ ಕಾಡುಗೊಂಡನಹಳ್ಳಿ ಗಲಭೆಯಿಂದ ಸುಧಾರಿಸಿಕೊಳ್ಳುವಷ್ಟರಲ್ಲೇ ರಾಯಚೂರು ಜಿಲ್ಲೆಯಲ್ಲಿ ಇಂಥದ್ದೇ ಘಟನೆಯೊಂದು ನಡೆದಿದೆ. ಫೇಸ್ಬುಕ್ ಪೋಸ್ಟ್ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ ನೂರಾರು ಮಂದಿ ಪೊಲೀಸ್ ಠಾಣೆಯ ಬಳಿ ಜಮಾಯಿಸಿದ್ದಾರೆ. ದೇವದುರ್ಗ ಪಟ್ಟಣದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ.
Recommended Video
ಇದೀಗ ಬಂದ ಅಪ್ಡೇಟ್(ಸಮಯ 11.10): ಶ್ರೀರಾಮನ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಆರೋಪಿ ಬಂಧನವಾಗಿದೆ. ದೇವದುರ್ಗ ಪಟ್ಟಣದಲ್ಲಿ ಉದ್ವಿಗ್ನ ಪರಿಸ್ಥಿತಿಗೆ ಕಾರಣವಾಗಿದ್ದ ಫೇಸ್ಬುಕ್ ಪೋಸ್ಟ್ ಹಾಕಿದ್ದ ಆರೋಪಿ ಜಹೀರ್ ಬಂಧಿಸಿರುವ ಪಟ್ಟಣದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಎಫ್ಐಆರ್ ಹಾಕುತ್ತಿದ್ದಾರೆ. ಎಫ್ಐಆರ್ ಪ್ರತಿ ನೋಡಿದ ಬಳಿಕ ಸ್ಥಳದಿಂದ ತೆರಳುವುದಾಗಿ ಠಾಣೆ ಮುಂದೆ ಜಮಾಯಿಸಿರುವ ಗುಂಪು ಹೇಳಿದೆ.
ಬೆಂಗಳೂರಿನ ಕಾವಲ್ ಬೈರಸಂದ್ರದಲ್ಲಿ ಶಾಸಕ ಅಖಂಡ ಶ್ರೀನಿವಾಸ್ ಅವರ ಸಂಬಂಧಿಕ ನವೀನ್ ಎಂಬಾತ ಪ್ರವಾದಿ ಮೊಹಮ್ಮದರ ಬಗ್ಗೆ ಅವಹೇಳನಕಾರಿ ಫೇಸ್ಬುಕ್ ಪೋಸ್ಟ್ ಹಾಕಿದ್ದರಿಂದ ಆರಂಭವಾದ ಸಣ್ಣಕಿಡಿ ದೊಡ್ಡದಾಗಿ ಹೊತ್ತಿ ಉರಿದಿದ್ದನ್ನು ಮಾಧ್ಯಮಗಳಲ್ಲಿ ಇಡೀ ದೇಶವೇ ನೋಡಿದೆ. ಅನೇಕ ಮಂದಿ ಪೊಲೀಸರಿಗೆ ಗಾಯಗಳಾಗಿದ್ದು, ಅಪಾರ ಪ್ರಮಾಣದ ಆಸ್ತಿ ಪಾಸ್ತಿ ನಷ್ಟವಾಗಿದ್ದು, ಮೂವರು ಪೊಲೀಸರ ಗುಂಡೇಟಿಗೆ ಬಲಿಯಾಗಿದ್ದರು. ಈ ಘಟನೆಗೆ ಸಂಬಂಧಿಸಿದಂತೆ ಇನ್ನೂ ಶಂಕಿತರನ್ನು ಬಂಧಿಸಲಾಗುತ್ತಿದೆ.

ಅಯೋಧ್ಯೆಯ ಶ್ರೀರಾಮಚಂದ್ರನ ಬಗ್ಗೆ ಅವಹೇಳನಕಾರಿ ಪೋಸ್ಟ್ ವೊಂದು ಜನಪ್ರಿಯ ಸಾಮಾಜಿಕ ಜಾಲ ತಾಣ ಫೇಸ್ಬುಕ್ ನಲ್ಲಿ ಕಾಣಿಸಿಕೊಂಡಿದೆ. ಇದರಿಂದ ದೇವದುರ್ಗ ಪಟ್ಟಣದಲ್ಲೂ ಹಿಂದು ಮುಸ್ಲಿಂ ಸೌಹಾರ್ದತೆ ಬೆಂಕಿ ಇಡುವಂಥ ಪರಿಸ್ಥಿತಿ ನಿರ್ಮಾಣವಾಗಲು ಕಾರಣವಾಗಿದ್ದು ಫೇಸ್ಬುಕ್ ಪೋಸ್ಟ್. ದೇವದುರ್ಗದ ನಿವಾಸಿಯಾದ ಮುಸ್ಲಿಂ ಯುವಕನಿಂದ ಈ ರೀತಿ ಪ್ರಮಾದವಾಗಿದೆ ಎಂದು ಆರೋಪಿಸಿ ಶ್ರೀರಾಮ ಸೇನೆ ಕಾರ್ಯಕರ್ತರು ಪ್ರತಿಭಟನೆಗಿಳಿದಿದ್ದಾರೆ.
ದೇವದುರ್ಗದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದ್ದು, ಪೋಲಿಸ್ ಠಾಣೆ ಮುಂದೆ ಜಮಾಯಿಸಿದ ನೂರಾರು ಶ್ರೀರಾಮ ಸೇನೆ ಕಾರ್ಯಕರ್ತರು, ಮುಸ್ಲಿಂ ಯುವಕನ ಬಂಧನಕ್ಕೆ ಅಗ್ರಹಿಸಿದ್ದಾರೆ. ಪರಿಸ್ಥಿತಿ ತಿಳಿಗೊಳಿಸಲು ಪೊಲೀಸರು ಶತಪ್ರಯತ್ನಪಡುತ್ತಿದ್ದಾರೆ.
-
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ












Click it and Unblock the Notifications