Get Updates
Get notified of breaking news, exclusive insights, and must-see stories!

ರಾಜ್ಯದಲ್ಲಿ ಬರ, ಸಂಬಳದಲ್ಲಿ ಶಾಲಾ ಮಕ್ಕಳಿಗೆ ಬೈಸಿಕಲ್ ಕೊಡಿಸಿದ ಕಾರ್ಮಿಕ! ಜನನಾಯಕರು ಇದನ್ನು ಮಾಡುವುದು ಯಾವಾಗ?

ರಾಯಚೂರು ಮಾರ್ಚ್‌ 06: ಕೂಲಿ ಕಾರ್ಮಿಕನೊಬ್ಬ ತನ್ನ ಸ್ವಂತ ದುಡಿಮೆಯ ಹಣದಿಂದ ಶಾಲಾ ಮಕ್ಕಳಿಗೆ ಬೈಸಿಕಲ್ ಕೊಡಿಸಿದ ಘಟನೆ ರಾಯಚೂರಿನ ದೇವದುರ್ಗ ತಾಲ್ಲೂಕಿನ ಮಲ್ಕಂದಿನ್ನಿ ಗ್ರಾಮದಲ್ಲಿ ನಡೆದಿದೆ. ಆಂಜನೇಯ ಎಂಬುವವರು ತಮ್ಮ ದುಡಿಮೆಯಿಂದ ಬಂದ ಹಣದಲ್ಲಿ ಗ್ರಾಮದ 8ನೇ ತರಗತಿಯ 11 ವಿದ್ಯಾರ್ಥಿಗಳಿಗೆ ಹೀರೊ ಸೈಕಲ್‌ಗಳನ್ನು ಕೊಡಿಸುವ ಮೂಲಕ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಇದಕ್ಕಾಗಿ ಅವರು ₹60 ಸಾವಿರ ಖರ್ಚು ಮಾಡಿದ್ದಾರೆ.ಮಲ್ಕಂದಿನ್ನಿ ಗ್ರಾಮದಲ್ಲಿ ಪ್ರೌಢಶಾಲೆ ಇಲ್ಲ. ಪ್ರೌಢ ಶಿಕ್ಷಣ ಪಡೆಯಲು ವಿದ್ಯಾರ್ಥಿಗಳು 5 ಕಿ.ಮೀ. ದೂರದ ಹೇಮನೂರಿಗೆ ನಡೆದುಕೊಂಡು ಹೋಗುತ್ತಾರೆ. ಪ್ರತಿದಿನ ಕೂಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕ ಆಂಜನೇಯ, ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿಗಳನ್ನು ಗಮನಿಸಿದ್ದಾರೆ. 11 ಸೈಕಲ್ ಖರೀದಿಸಿ ಶನಿವಾರ ಶಾಲೆಗೆ ತೆರಳಿ ಮುಖ್ಯಶಿಕ್ಷಕ ಬಸವರಾಜ ಮತ್ತು ಶಿಕ್ಷಕರ ಸಮ್ಮುಖದಲ್ಲಿ ವಿದ್ಯಾರ್ಥಿಗಳಿಗೆ ನೀಡಿದ್ದಾರೆ.

A worker has given bicycles to school children on salary

'ಬಸ್‌ ವ್ಯವಸ್ಥೆ ಇಲ್ಲದ ಕಾರಣ ನಡೆದುಕೊಂಡು ಹೋಗಲು ಸಾಧ್ಯವಾಗದೆ ಬಹಳಷ್ಟು ಹೆಣ್ಣು ಮಕ್ಕಳು ಶಿಕ್ಷಣದಿಂದ ದೂರ ಉಳಿಯುತ್ತಿದ್ದಾರೆ. ನಮ್ಮ ಗ್ರಾಮದ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು. ನನ್ನ ಈ ಅಲ್ಪ ಸೇವೆಯಿಂದ ಅವರ ಭವಿಷ್ಯ ಉಜ್ವಲವಾಗಲಿ' ಎಂದು ಆಂಜನೇಯ ತಿಳಿಸಿದರು.

ದೇವದುರ್ಗ ತಾಲ್ಲೂಕಿನಲ್ಲಿ 186 ಕಂದಾಯ ಗ್ರಾಮಗಳು, 50ಕ್ಕೂ ಹೆಚ್ಚು ತಾಂಡಾಗಳು ಹಾಗೂ 30 ದೊಡ್ಡಿಗಳಿವೆ. ಅವುಗಳಲ್ಲಿ ಸುಮಾರು 100ಕ್ಕೂ ಹೆಚ್ಚು ಗ್ರಾಮಗಳಿಗೆ ಇಂದಿಗೂ ಬಸ್‌ನ ವ್ಯವಸ್ಥೆ ಇಲ್ಲ. ಇದರಿಂದ ಮಕ್ಕಳು ಶಿಕ್ಷಣವನ್ನು ಅರ್ಧಕ್ಕೆ ಮೊಟಕುಗೊಳಿಸುತ್ತಿದ್ದಾರೆ.

ಪ್ರೌಢಶಾಲೆಗೆ ನಡೆದು ಹೋಗಲಾಗದೆ ಪ್ರತಿವರ್ಷ ೧೫ ರಿಂದ ೨೦ ವಿದ್ಯಾರ್ಥಿನಿಯರು ಶಿಕ್ಷಣವನ್ನು ಅರ್ಧಕ್ಕೆ ನಿಲ್ಲಿಸುತ್ತಿದ್ದಾರೆ. ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎಂದು ಸೈಕಲ್ ನೀಡಿದ್ದೇನೆ ಎಂದು ಕೂಲಿ ಕಾರ್ಮಿಕ ಆ ಂಜನೇಯ ಮಲ್ಕಂದಿನ್ನಿ ಹೇಳಿದರು.

ಗ್ರಾಮೀಣ ಪ್ರದೇಶದ ಸಾವಿರಾರು ವಿದ್ಯಾರ್ಥಿಗಳು ನಡೆದು ಶಾಲೆಗಳಿಗೆ ತೆರಳುತ್ತಾರೆ. ಸರ್ಕಾರ ಉಚಿತ ಸೈಕಲ್ ವಿತರಣೆ ಯೋಜನೆಯನ್ನು ಮತ್ತೆ ಆರಂಭಿಸಬೇಕು ಎಂದು ಸೈಕಲ್ ಪಡೆದ ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ.

ಯೋಜನೆ ಹಿನ್ನೆಲೆ

2006-07ನೇ ಸಾಲಿನಲ್ಲಿ ಅಂದಿನ ಜೆಡಿಎಸ್‌-ಬಿಜೆಪಿ ಸಮ್ಮಿಶ್ರ ಸರಕಾರ ಸೈಕಲ್‌ ವಿತರಿಸುವ ಯೋಜನೆ ಪ್ರಾರಂಭಿಸಿತು. ಶಾಲೆ ಬಿಟ್ಟ ಹೆಣ್ಣು ಮಕ್ಕಳನ್ನು ಮತ್ತೆ ಶಾಲೆಗೆ ಕರೆತರುವ ಉದ್ದೇಶದಿಂದ 8ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿನಿಯರಿಗೆ ಸೈಕಲ್‌ ನೀಡಲು ಮುಂದಾಯಿತು. ಈ ಯೋಜನೆ ಹೆಚ್ಚು ಪ್ರಚಾರ ಪಡೆದ ಹಿನ್ನೆಲೆಯಲ್ಲಿ ಪಾಲಕರು ಬಾಲಕರಿಗೂ ವಿಸ್ತರಿಸುವಂತೆ ಬೇಡಿಕೆ ಮುಂದಿಟ್ಟರು. ಆನಂತರದಲ್ಲಿ ಸರಕಾರ ಪ್ರೌಢಶಾಲೆಗೆ ಸೇರುವ ಬಾಲಕ ಮತ್ತು ಬಾಲಕಿಯರಿಗೆ ಸೈಕಲ್‌ ವಿತರಿಸಲು ಮುಂದಾಯಿತು. ಮಹಾನಗರ ಪಾಲಿಕೆಗೆ ಸೇರಿದ ಹಾಗೂ ಬಸ್‌ಗಳ ಸಂಖ್ಯೆ ಹೆಚ್ಚಿರುವ ನಗರಗಳಲ್ಲಿ ಓದುತ್ತಿರುವ ಮಕ್ಕಳಿಗೆ ಯೋಜನೆ ಪ್ರಯೋಜನ ದೊರೆಯುವುದಿಲ್ಲ. 2015-16ನೇ ಶೈಕ್ಷಣಿಕ ವರ್ಷದಲ್ಲಿ ಶೂ ಮತ್ತು ಸಾಕ್ಸ್‌ ವಿತರಿಸುವ ಯೋಜನೆ ಆರಂಭವಾಗಿತ್ತು. ಕೊರೊನಾದಿಂದಾಗಿ ಶಾಲೆಗಳೇ ಸರಿಯಾಗಿ ನಡೆಯದೇ ಇದ್ದುದರಿಂದ ಈ ಯೋಜನೆಯನ್ನು ಕೂಡ ಮೊಟಕುಗೊಳಿಸಿತು.

ಸರಕಾರಿ ಶಾಲಾ ಮಕ್ಕಳಲ್ಲಿನ ಪೌಷ್ಟಿಕಾಂಶ ಗುಣಮಟ್ಟ ಹೆಚ್ಚಿಸುವ ಉದ್ದೇಶದಿಂದ ಜಾರಿಗೆ ತಂದ ವಾರದಲ್ಲಿ 2 ದಿನ ಮೊಟ್ಟೆ ಯೋಜನೆಯನ್ನು 5 ದಿನಕ್ಕೆ ವಿಸ್ತರಣೆ ಮಾಡುವ ಉದ್ದೇಶದಿಂದ ಅನುದಾನ ಕೋರಿ ಶಿಕ್ಷಣ ಇಲಾಖೆ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ.

ಗ್ರಾಮೀಣ ಪ್ರದೇಶದಲ್ಲಿ ಶಾಲೆಗಳಿಗೆ ತೆರಳಲು ಸೈಕಲ್‌ ಹೆಚ್ಚು ಅನುಕೂಲಕರ. ಪ್ರೌಢಶಾಲೆ ಐದಾರು ಕಿ. ಮೀ. ದೂರವಿದ್ದರೆ ಮಕ್ಕಳು ಶಾಲೆಗೆ ಹೋಗುವುದಿಲ್ಲ. ಹಾಗಾಗಿ ಸರಕಾರ ನಮಗೆ ಸೈಕಲ್‌ ನೀಡಬೇಕು ಎಂದು ಬೆಂಗಳೂರಿನ ಪ್ರೌಢಶಾಲೆ ವಿದ್ಯಾರ್ಥಿ ಪ್ರಸಾದ್‌ ಬಾಬು ಆಗ್ರಹಿಸಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+