ರಾಯಚೂರಿನ ಆರ್ಟಿಪಿಎಸ್ 2ನೇ ವಿದ್ಯುತ್ ಘಟಕದಲ್ಲಿ ಅವಘಡ: 3 ಜನರಿಗೆ ಗಂಭೀರ ಗಾಯ
ರಾಯಚೂರು, ಜನವರಿ, 04: ರಾಯಚೂರು ಆರ್ಟಿಪಿಎಸ್ನ ಎರಡನೇ ವಿದ್ಯುತ್ ಘಟಕದ ಕೋಲ್ ಫೀಡರ್ಗಳಲ್ಲಿ ಕೆಲಸ ಮಾಡುತ್ತಿದ್ದ 3 ಜನ ಗುತ್ತಿಗೆ ಕಾರ್ಮಿಕರು ಕುಸಿದು ಬಿದ್ದು ಗಂಭೀರ ಗಾಯಗಳಾಗಿರುವ ಘಟನೆ ಬುಧವಾರ ಬೆಳಗ್ಗೆ ನಡೆದಿದೆ. ಬಿಹಾರ ರಾಜ್ಯದ ಮೂಲದ ಕಾರ್ಮಿಕರಾದ ರಾಮಪ್ರೀತ್ , ಮಹಾದೇವ, ಸೋನು ಅವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಚಿಕಿತ್ಸೆಗಾಗಿ ರಾಯಚೂರು ನಗರದ ಭಂಡಾರಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.
2022 ಆಗಸ್ಟ್ 10ರಂದು 210 ಮೆಗಾವ್ಯಾಟ್ ಸಾಮರ್ಥ್ಯದ ಒಂದನೇ ವಿದ್ಯುತ್ ಘಟಕದ ಆರು ಕೋಲ್ ಫೀಡರ್ಗಳಲ್ಲಿ, ಮೂರು ಕೋಲ್ ಫೀಡರ್ಗಳು ಕುಸಿದು ಬಿದ್ದಿವೆ. ಕೋಲ್ ಫೀಡರ್ಗಳಲ್ಲಿ ಕೆಲಸ ಮಾಡುತ್ತಿರುವಾಗ ಬುಧವಾರ (ಜನವರಿ 4 ರಂದು) ಬೆಳಗ್ಗೆ 11 ಗಂಟೆಗೆ 10 ಅಡಿ ಎತ್ತರದಿಂದ ಕಾರ್ಮಿಕರೊಬ್ಬನು ಕೆಳಗೆ ಬಿದಿದ್ದಾರೆ. ಕಳಗಡೆ ಕೆಲಸ ಮಾಡುತ್ತಿದ್ದ ಇನ್ನೂ ಇಬ್ಬರು ಕಾರ್ಮಿಕರ ಮೇಲೆ ಬಿದ್ದ ಕಾರಣ 3 ಜನರಿಗೆ ಗಾಯಗಳಾಗಿವೆ.
ಸ್ಥಳಕ್ಕೆ ಆರ್ಟಿಪಿಎಸ್ ಮುಖ್ಯ ಕಾರ್ಯನಿರ್ವಹಕಾ ನಿರ್ದೇಶಕ ಸಿ.ಎಂ.ದಿವಾಕರ ಭೇಟಿ ನೀಡಿ ಪರಿಶೀಲಿಸಿದರು. ನಂತರ ಸ್ಥಳೀಯ ವೈದ್ಯರ ತಂಡ ಗಾಯಗೊಂಡವರಿಗೆ ತಾತ್ಕಾಲಿಕವಾಗಿ ಚಿಕಿತ್ಸೆ ನೀಡಿದರು.

ಸ್ಥಳೀಯರಿಗೆ ಕೆಲಸ ನೀಡುತ್ತಿಲ್ಲ, ಆರೋಪ
ಕೆಲಸ ಮಾಡುವ ಕಾರ್ಮಿಕರಿಗೆ ಸುರಕ್ಷತಾ ಸಾಮಾಗ್ರಿಗಳನ್ನು ನೀಡಲಾಗಿದೆ. ಕಾಲು ಜಾರಿ ಬಿದ್ದ ಕಾರಣ ಈ ಅವಘಡ ಸಂಭವಿಸಿದೆ. ಬೆನ್ನಿಗೆ ಸೇಫ್ಟಿ ಬೆಲ್ಟ್ ಕಟ್ಟಿಕೊಂಡ ಪರಿಣಾಮ ಕಾರ್ಮಿಕರು ಪ್ರಾಣಪ್ರಾಯದಿಂದ ಪಾರಾಗಿದ್ದಾರೆ. 3 ಜನರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ರಾಯಚೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ ಎಂದು ಆರ್ಟಿಪಿಎಸ್ ಮುಖ್ಯ ಕಾರ್ಯನಿರ್ವಹಕಾ ನಿರ್ದೇಶಕ ಸಿ.ಎಂ.ದಿವಾಕರ ಹೇಳಿದರು. ಕೆಲಸ ಮಾಡುವ ಕಾರ್ಮಿಕರಿಗೆ ಸರಿಯಾದ ಸುರಕ್ಷತೆ ಸಾಮಾಗ್ರಿಗಳು ನೀಡದ ಕಾರಣ ಇಂತಹ ಅವಘಡ ಸಂಭವಿಸಿದೆ. ಹೊರ ರಾಜ್ಯಗಳಿಂದ ಕಾರ್ಮಿಕರನ್ನು ಕರೆಸಿಕೊಂಡು ಕೆಲಸ ಮಾಡಿಸುತ್ತಿದ್ದಾರೆ. ಸ್ಥಳೀಯರಿಗೆ ಕೆಲಸ ನೀಡುತ್ತಿಲ್ಲ ಎನ್ನುವ ಆರೋಪಗಳು ಕೂಡ ಕೇಳಿಬಂದವು.

ಕಲ್ಲಿದ್ದಲು ಸಮಸ್ಯೆ ಎದುರಾಗಿದೆ
ಇನ್ನು ಶಾಖೋತ್ಪನ್ನ ವಿದ್ಯುತ್ ಸ್ಥಾವರದ (ಆರ್ಟಿಪಿಎಸ್) ಒಂದನೇ ವಿದ್ಯುತ್ ಉತ್ಪಾದನೆಯ ಘಟಕದ ಆಧುನೀಕರಣಕ್ಕೆ ಕರ್ನಾಟಕ ವಿದ್ಯುತ್ ನಿಗಮ (ಕೆಪಿಸಿ) ಯೋಜಿಸಿದೆ. 30 ವರ್ಷಗಳಷ್ಟು ಹಳೆಯದಾದ ಆರ್ಟಿಪಿಎಸ್ನ ಮೊದಲೆರಡು ಘಟಕಗಳ ಪೈಕಿ 210 ಮೆಗಾವಾಟ್ ಸಾಮರ್ಥ್ಯದ ಒಂದನೇ ವಿದ್ಯುತ್ ಘಟಕವನ್ನು ಆಧುನೀಕರಣ ಕೈಗೆತ್ತಿಕೊಳ್ಳಲು ಚಿಂತನೆ ನಡೆಸಿದೆ. ಬೇಡಿಕೆಗೆ ತಕ್ಕಂತೆ ವಿದ್ಯುತ್ ಪೂರೈಕೆ ಮಾಡುವುದು ಕೆಪಿಸಿಗೆ ಸವಾಲಾಗಿದೆ. ಹೊಸ ಯೋಜನೆಗಳಿಗೆ ಕಲ್ಲಿದ್ದಲು ಲಭ್ಯತೆ ಸಮಸ್ಯೆಯೂ ಎದುರಾಗಿದೆ. ವಿದ್ಯುತ್ ಉತ್ಪಾದಿಸುತ್ತಿರುವ ಹಾಲಿ ವಿದ್ಯುತ್ ಘಟಕಗಳೂ ಸುಮಾರು 25ವರ್ಷ ದಾಟಿದ್ದರಿಂದ ಜೀವ ತುಂಬುವ ಕಾರ್ಯಕ್ಕೆ ಕೆಪಿಸಿ ಮುಂದಾಗಿದೆ.
-
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Trisha Krishnan: ದಳಪತಿ ವಿಜಯ್ ಜೊತೆಗಿನ ಸಂಬಂಧ, ಡಿವೋರ್ಸ್ ಬಗ್ಗೆ ಮಾಧ್ಯಮಗಳ ಪ್ರಶ್ನೆ: ನಟಿ ತ್ರಿಶಾ ಕೊಟ್ಟ ಉತ್ತರವೇನು? -
92,00,00,000 ರೂಪಾಯಿ ಬಹುಮಾನ, ಈತನ ಬಗ್ಗೆ ಸುಳಿವು ನೀಡಿದರೆ ನಿಮಗೂ ಸಿಗಲಿದೆ ಹಣ... Mojtaba Khamenei -
Shri Gandhada Gudi Serial: "ಶ್ರೀಗಂಧದಗುಡಿ" ಸೀರಿಯಲ್ಗೆ ಗುಡ್ಬೈ ಹೇಳಿದ ಸಂಜನಾ ಬುರ್ಲಿ, ಕಾರಣ ಇಲ್ಲಿದೆ












Click it and Unblock the Notifications