ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ: ನಟಿ ಪೂಜಾ ಗಾಂಧಿ ಖುಲಾಸೆ
ರಾಯಚೂರು, ಡಿಸೆಂಬರ್ 23: 2013ರ ವಿಧಾನಸಭಾ ಚುನಾವಣೆಯಲ್ಲಿ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್ ವುಡ್ ನಟಿ ಪೂಜಾ ಗಾಂಧಿ ಖುಲಾಸೆಗೊಂಡಿದ್ದಾರೆ.
ಪ್ರಕರಣಕ್ಕೆ ಸಾಕ್ಷಿಗಳ ಕೊರತೆಯಿಂದ ಪೂಜಾ ಗಾಂದಿ ಅವರನ್ನು ಖುಲಾಸೆಗೊಳಿಸಿ ರಾಯಚೂರು 2ನೇ ಜೆಎಮ್ಎಫ್ ಸಿ ನ್ಯಾಯಾಲಯ ತೀರ್ಪು ನೀಡಿ ಶನಿವಾರ ಆದೇಶ ಹೊರಡಿಸಿದೆ. ಇದರಿಂದ ಸಂತಸ ವ್ಯಕ್ತಪಡಿಸಿದ ಮಳೆ ಹುಡುಗಿ ಪೂಜಾ ಗಾಂಧಿ, ಆಗಾಗ ರಾಯಚೂರಿಗೆ ಬರುತ್ತೇನೆ ಎಂದರು.

ಚುನಾವಣೆಯಲ್ಲಿ ಬಿಎಸ್ ಆರ್ ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದ ಪೂಜಾ ಗಾಂಧಿ ಅನುಮತಿ ಇಲ್ಲದ ವಾಹನವನ್ನ ಚುನಾವಣಾ ಪ್ರಚಾರಕ್ಕೆ ಬಳಸಿ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದರು. ಈ ಕುರಿತಂತೆ ಸದರಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
2013ರ ವಿಧಾನಸಭಾ ಚುನಾವಣೆಯಲ್ಲಿ ರಾಯಚೂರು ನಗರ ಕ್ಷೇತ್ರದಿಂದ ಬಿಎಸ್ ಆರ್ ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದ ಮಳೆ ಹುಡುಗಿ ಪೂಜಾ ಗಾಂಧಿ ಠೇವಣಿ ಕಳೆದುಕೊಂಡಿದ್ದರು.












Click it and Unblock the Notifications