ಹಟ್ಟಿ ಚಿನ್ನದ ಗಣಿ ಕ್ಯಾಂಪಿನಲ್ಲಿ ಆಫ್ರಿಕನ್ ಸ್ವೈನ್ ಫ್ಲೂ ಪತ್ತೆ: ನಿವಾಸಿಗಳಲ್ಲಿ ಆತಂಕ
ರಾಯಚೂರು, ಸೆಪ್ಟೆಂಬರ್ 30: ರಾಜ್ಯದಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆಯಾಗಿದ್ದು, ಆತಂಕವನ್ನು ಮೂಡಿಸಿದೆ. ಬಿಸಿಲೂರು ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಹಟ್ಟಿ ಚಿನ್ನದಗಣಿ ಕ್ಯಾಂಪ್ನಲ್ಲಿ ಹಂದಿಗಳಲ್ಲಿ ಈ ಜ್ವರ ಕಾಣಿಸಿಕೊಂಡಿರುವುದು ಸಾರ್ವಜನಿಕರಲ್ಲಿ ಆತಂಕಕ್ಕೆ ಕಾರಣವಾಗಿದೆ.
ಪ್ರಾಣಿಯಲ್ಲಿ ಕಾಣಿಸಿಕೊಂಡ ಈ ಜ್ವರವು ಮನುಷ್ಯರಿಗೆ ಹರಡುವುದಿಲ್ಲ. ಹೀಗಾಗಿ ಯಾವುದೇ ರೀತಿಯ ಆತಂಕ ಬೇಡ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಕಳೆದ ಒಂದು ತಿಂಗಳನಿಂದ ಹಟ್ಟಿಚಿನ್ನದ ಗಣಿಯಲ್ಲಿ 100ಕ್ಕೂ ಹೆಚ್ಚು ಹಂದಿಗಳು ಮೃತಪಟ್ಟಿವೆ. ಇದರಿಂದಾಗಿ ಅಲ್ಲಿನ ನಿವಾಸಿಗಳನ್ನು ಭಯಭೀತಿಯನ್ನಗೊಳಿಸಿದೆ.

ಹಂದಿಗಳ ಸಾವಿನ ಹಿನ್ನೆಲೆಯಲ್ಲಿ, ಹಂದಿಗಳ ಮಾದರಿ ಪರೀಕ್ಷೆಗೆ ಮಾಡಿದಾಗ ಆಫ್ರಿಕನ್ ಹಂದಿ ಜ್ವರ ಪತ್ತೆಯಾಗಿದೆ. ಹಟ್ಟಿ ಚಿನ್ನದ ಗಣಿಯ ಕ್ಯಾಂಪ್ನಲ್ಲಿ ಹೆಚ್ಚು ಹಂದಿಗಳು ಸಾವನ್ನಪ್ಪಿವೆ. ದುರುಗಪ್ಪ ಎಂಬವರ ಖಾಸಗಿ ಹಂದಿ ಸಾಗಾಣಿಕೆ ಕೇಂದ್ರದಲ್ಲಿನ ಒಂದು ಹಂದಿಗೆ ಆಫ್ರಿಕನ್ ಸ್ವೈನ್ ಫ್ಲೂ ಇರುವುದು ಖಾತರಿಯಾಗಿದೆ. ಹೀಗಾಗಿ ಹಂದಿ ಸಾಗಾಣಿಕೆ ಕೇಂದ್ರದ ಸುತ್ತ ಹಟ್ಟಿ ಪಟ್ಟಣದ ಕಿಲೋ ಮೀಟರ್ ವ್ಯಾಪ್ತಿಯನ್ನು ರೋಗಪೀಡಿತ ವಲಯ ಎಂದು ಘೋಷಿಸಲಾಗಿದೆ.
10 ಕಿಲೋ ಮೀಟರ್ ವ್ಯಾಪ್ತಿಯ ಪ್ರದೇಶವನ್ನು ಜಾಗೃತ ವಲಯ ಎಂದು ಘೋಷಣೆ ಮಾಡಲಾಗಿದೆ. ಹಂದಿ ಸಾಗಾಣಿಕೆ ಕೇಂದ್ರದವರು ಮತ್ತು ನಾಗರಿಕರು ಮುಂಜಾಗ್ರತೆಯನ್ನು ತೆಗೆದುಬೇಕೆಂದು ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತ ಪ್ರಕಟಣೆಯಲ್ಲಿ ತಿಳಿಸಿದೆ.

ಹಂದಿಗಳ ಸಾವಿನ ಸಂಖ್ಯೆ ಹೆಚ್ಚಾಗಿ ಕಂಡು ಬಂದಿರುವುದ್ದರಿಂದ ಸಾರ್ವಜನಿಕರು ಸಹ ಭಯಭೀತರಾಗಿದ್ದಾರೆ. ಹಟ್ಟಿ ಸೇರಿದಂತೆ ಜಿಲ್ಲೆಯ ನಾನಾ ಕಡೆಗಳಲ್ಲಿ ಭಯ ಎದುರಾಗಿದೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ. ಆದರೆ ಈ ಬಗ್ಗೆ ಸ್ಪಷ್ಟನೆ ನೀಡಿರುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಜಿಲ್ಲಾ ಆರೋಗ್ಯಧಿಕಾರಿ ಡಾ.ಸುರೇಂದ್ರಬಾಬು, ಆಫ್ರಿಕನ್ ಹಂದಿ ಜ್ವರ ಕೇವಲ ಹಂದಿಗಳಿಗೆ ಮಾತ್ರ ಕಾಣಿಸಿಕೊಳ್ಳುತ್ತಿದೆ. ಮನುಷ್ಯರಿಗೆ ಹರಡುವುದಿಲ್ಲ. ಜನ ಯಾವುದೇ ರೀತಿಯಲ್ಲಿ ಆತಂಕ ಪಡುವುದುಬೇಡ ಎಂದಿದ್ದಾರೆ.
ಜನರು ತಾವು ವಾಸಿಸುವ ಹಾಗೂ ಸುತ್ತಮುತ್ತಲಿನ ವಾತಾವರಣವನ್ನ ಶುಚಿಯಾಗಿಡುವುದರ ಕಡೆ ಗಮನ ಹರಿಸಬೇಕು. ಜೊತೆಗೆ ಮನುಷ್ಯರಿಗೆ ಆಫ್ರಿಕನ್ ಹಂದಿ ಜ್ವರ ಬಂದಿರುವ ಹರಡಿರುವುದು ಇಲ್ಲಿಯವರೆಗೆ ಎಲ್ಲಿ ವರದಿಯಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಕೇರಳದಲ್ಲಿ ನಿಫಾ ಹೆಚ್ಚಳ: ಗಡಿ ಪ್ರದೇಶಗಳಲ್ಲಿ ಕಟ್ಟೆಚ್ಚರ
ಈಗಾಗಲೇ ಕೇರಳದಲ್ಲಿ ನಿಫಾ ಜ್ವರ ಹೆಚ್ಚಾಗಿರುವುದರಿಂದ ಕೇರಳದೊಂದಿಗೆ ನಿಕಟ ಸಂಪರ್ಕ ಹೊಂದಿರುವ ರಾಜ್ಯದ 4 ಜಿಲ್ಲೆಗಳಲ್ಲಿ ಅಕ್ಟೋಬರ್ 10ರವರೆಗೆ ರಾಜ್ಯ ಸರ್ಕಾರ ಹೈ ಅಲರ್ಟ್ ಘೋಷಿಸಿತ್ತು. ಈ ಬಗ್ಗೆ ಮಂಗಳೂರಲ್ಲಿ ಇತ್ತೀಚಿಗೆ ದಕ್ಷಿಣ ಕನ್ನಡ, ಉಡುಪಿ, ಕೊಡಗು ಮತ್ತು ಮೈಸೂರು ಜಿಲ್ಲೆಯ ಅಧಿಕಾರಿಗಳ ಸಭೆ ನಡೆಸಿದ್ದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕೆಲ ಸಲಹೆ ಸೂಚನೆಗಳನ್ನು ನೀಡಿದ್ದರು.
ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಗಳು ಕೇರಳದ ಸಮೀಪದಲ್ಲಿರುವುದರಿಂದ ಎಲ್ಲಾದರೂ ನಿಫಾ ಪ್ರಕರಣಗಳು ಕಂಡುಬಂದರೆ ಎಂದು ಮುಂಜಾಗ್ರತೆ ಕ್ರಮವಾಗಿ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದೇವೆ. ಕ್ವಾರಂಟೈನ್, ಬೆಡ್ಗಳ ವ್ಯವಸ್ಥೆ ಸೇರಿದಂತೆ ಎಲ್ಲವೂ ಇದೆ. ಖಾಸಗಿ ಆಸ್ಪತ್ರೆ ಸೇರಿದಂತೆ ಕೇರಳದ ಗಡಿ ಭಾಗಗಳಲ್ಲಿ ತಪಾಸಣೆ ಸೇರಿದಂತೆ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications