ರಾಯಚೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಅಮಿತ್ ಶಾ ಬಂದು ಹೋದ ಮೇಲೆ ರಾಜ್ಯದಲ್ಲಿ ಕೋಮು ಗಲಭೆ: ಸಚಿವ ರೇವಣ್ಣ

By ರಾಯಚೂರು ಪ್ರತಿನಿಧಿ
|
Google Oneindia Kannada News

ರಾಯಚೂರು, ಜನವರಿ 9: ಕರ್ನಾಟಕಕ್ಕೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಬಂದು ಹೋದ ಬಳಿಕ ಕೋಮು ಗಲಭೆ ಆಗುತ್ತಿದೆ ಎಂದು ಸಾರಿಗೆ ಸಚಿವ ಎಚ್.ಎಂ.ರೇವಣ್ಣ ಇಲ್ಲಿ ಮಂಗಳವಾರ ಆರೋಪ ಮಾಡಿದರು.

ಅಮಿತ್ ಶಾ ಸೂಚನೆಯ ಪ್ರಕಾರವೇ ಬಿಜೆಪಿ ನಾಯಕರು ಪ್ರಚೋದನಾಕಾರಿ ಹೇಳಿಕೆ ನೀಡುತ್ತಿದ್ದಾರೆ ಎಂದು ಕೂಡ ರೇವಣ್ಣ ಹೇಳಿದ್ದಾರೆ.

ಕರ್ನಾಟಕದಲ್ಲಿ ಮತಬೇಟೆಗೆ ಅಮಿತ್ ಶಾ ಹೊಸ ತಂತ್ರ!ಕರ್ನಾಟಕದಲ್ಲಿ ಮತಬೇಟೆಗೆ ಅಮಿತ್ ಶಾ ಹೊಸ ತಂತ್ರ!

ಇಷ್ಟು ಕಾಲ ಸುಮ್ಮನಿದ್ದ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಸಂವಿಧಾನ ಬದಲಿಸುವ ಮಾತನಾಡುತ್ತಿದ್ದಾರೆ. ಹರಕು ಬಾಯಿಯ ಶೋಭಾ ಕರಂದ್ಲಾಜೆ, ಪ್ರತಾಪ ಸಿಂಹ ಹೀಗೆ ಅನೇಕರು ಪ್ರಚೋದನಕಾರಿಯಾದಂಥ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಸಚಿವರು ಹೇಳಿದರು.

After Amit Shah visit communal riot in Karnataka: Minister Revanna

ರಾಜ್ಯದಲ್ಲಿ ಯಾರೇ ಸತ್ತರೂ ಅವರು ಬಿಜೆಪಿ ಕಾರ್ಯಕರ್ತರು ಎಂದು ಬಿಂಬಿಸುತ್ತಿದ್ದಾರೆ. ನಾವೂ ಹಿಂದುಗಳೇ. ಆದರೆ ಮತ್ತೊಂದು ಸಮಾಜವನ್ನು ದ್ವೇಷಿಸುವ ಹಿಂದೂಗಳಲ್ಲ. ಇನ್ನು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಮಹತ್ವಾಕಾಂಕ್ಷೆ ಈಡೇರುವುದಿಲ್ಲ. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದಿಲ್ಲ ಎಂದು ಸಚಿವ ಎಚ್.ಎಂ.ರೇವಣ್ಣ ಹೇಳಿದರು.

English summary
After the visit of BJP national president Amit Shah, communal riot erupted in Karnataka, BJP state leaders like Anantkumar Hegde, Shobha Karandlaje, Pratap Simha try to provoke communal clashes, says minister HM Revanna in Raichur on Tuesday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X