ಮಸ್ಕಿಯಲ್ಲಿ ನಡೆಯದ ಜಾದೂ: ಮಂಕಾಗುವುದೇ ವಿಜಯೇಂದ್ರ ಭವಿಷ್ಯ?
ಬಸವಕಲ್ಯಾಣದಲ್ಲಾದರೂ ಒಂದು ವೇಳೆ ಸೋಲಾಗಬಹುದು ಆದರೆ ಮಸ್ಕಿಯಲ್ಲಿ ಬಿಜೆಪಿ ಗೆದ್ದೇ ಗೆಲ್ಲುತ್ತೆ ಎನ್ನುವ ಮಾತಿತ್ತು. ಅದಕ್ಕೆ, ಒಂದು ಕಾರಣವೆಂದರೆ ಕ್ಷೇತ್ರದ ಉಸ್ತುವಾರಿಯನ್ನು ಸಿಎಂ ಯಡಿಯೂರಪ್ಪ ಪುತ್ರ ಬಿ.ವೈ.ವಿಜಯೇಂದ್ರಗೆ ವಹಿಸಿದ್ದು.
Recommended Video
ಈ ಹಿಂದಿನ ಉಪ ಚುನಾವಣೆಯಲ್ಲಿ ವಹಿಸಲಾಗಿದ್ದ ಎರಡೂ ಕ್ಷೇತ್ರದ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸಿದ್ದ ವಿಜಯೇಂದ್ರ, ಮಸ್ಕಿಯಲ್ಲೂ ಜಾದೂ ಮಾಡಬಹುದು ಎಂದೇ ವ್ಯಾಖ್ಯಾನಿಸಲಾಗಿತ್ತು.
ಉಪ ಚುನಾವಣೆ ಸ್ಪೆಷಲಿಸ್ಟ್ ಎಂದೇ ಪಕ್ಷದಲ್ಲಿ ಹೆಸರು ಪಡೆದಿದ್ದ ವಿಜಯೇಂದ್ರ, ಹಳೆಯ ತಂತ್ರವನ್ನೇ ಮಸ್ಕಿಯಲ್ಲೂ ಪ್ರಯೋಗಿಸಿದ್ದರು. ಹಾಸನ ಶಾಸಕ ಪ್ರೀತಂ ಗೌಡ ಜೊತೆ ಒಂದು ತಂಡವಾಗಿ ಕೆಲಸ ಮಾಡಿದ್ದ ವಿಜಯೇಂದ್ರ, ಮಸ್ಕಿಯಲ್ಲಿ ಜಾದೂ ಮಾಡುವಲ್ಲಿ ವಿಫಲರಾಗಿದ್ದಾರೆ.
ಉಪ ಚುನಾವಣೆಯಲ್ಲಿನ ಈ ಸೋಲು ಮುಂದಿನ ದಿನಗಳಲ್ಲಿ ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷರೂ ಆಗಿರುವ ವಿಜಯೇಂದ್ರ ಅವರ ಭವಿಷ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿಲ್ಲದಿಲ್ಲ. ಅದಕ್ಕೆ ಕಾರಣಗಳೂ ಇವೆ:

ಮಸ್ಕಿಯಲ್ಲಿ ಬಿಜೆಪಿ ಅಭ್ಯರ್ಥಿ ಪ್ರತಾಪ್ ಗೌಡ ಪಾಟೀಲ್ ಗೆ ಭಾರೀ ಅಂತರದಿಂದ ಸೋಲು
ಮಸ್ಕಿಯಲ್ಲಿ ಬಿಜೆಪಿ ಅಭ್ಯರ್ಥಿ ಪ್ರತಾಪ್ ಗೌಡ ಪಾಟೀಲ್ ಸುಮಾರು 25ಸಾವಿರಕ್ಕೂ ಅಧಿಕ ಮತಗಳ ಭಾರೀ ಅಂತರದಿಂದ ಸೋಲು ಅನುಭವಿಸಿದ್ದಾರೆ. ಇಷ್ಟು ಮಟ್ಟಿನ ಅಂತರದಿಂದ ಪಕ್ಷದ ಅಭ್ಯರ್ಥಿಗೆ ಸೋಲಾಗುವುದರೊಂದಿಗೆ ವಿಜಯೇಂದ್ರ ಅವರ ತಂತ್ರಗಾರಿಕೆ ವರ್ಕೌಟ್ ಆಗಲಿಲ್ಲ. ಇದು, ಪಕ್ಷದಲ್ಲಿನ ಅವರ ವಿರೋಧಿಗಳಿಗೆ ಮುಂದಿನ ದಿನಗಳಲ್ಲಿ ಬಲವನ್ನು ನೀಡಬಹುದು.

ಬಿಜೆಪಿ ವರಿಷ್ಠರು ವಿಜಯೇಂದ್ರ ವಿಚಾರದಲ್ಲಿ ಹೆಚ್ಚು ತಲೆಕೆಡಿಸಿಕೊಂಡಿರಲಿಲ್ಲ
ವಿಜಯೇಂದ್ರ ಅವರು ಸರಕಾರದ ಆಡಳಿತದಲ್ಲಿ ಮೂಗು ತೂರಿಸುತ್ತಿದ್ದಾರೆ ಎನ್ನುವ ಆರೋಪ ದೆಹಲಿಯ ವರಿಷ್ಠರ ಬಳಿಗೆ ಹೋಗಿದ್ದು ಗೊತ್ತಿರುವ ವಿಚಾರ. ಆದರೆ, ಬಿಜೆಪಿಗೆ ಬುನಾದಿಯೇ ಇಲ್ಲದ ಕೆ.ಆರ್.ಪೇಟೆ ಮತ್ತು ಶಿರಾದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ವಿಜಯೇಂದ್ರ ಗೆಲ್ಲಿಸಿಕೊಂಡು ಬರುವ ಮೂಲಕ, ವರಿಷ್ಠರು ಈ ವಿಚಾರದಲ್ಲಿ ಹೆಚ್ಚು ತಲೆಕೆಡಿಸಿಕೊಂಡಿರಲಿಲ್ಲ.

ಯಡಿಯೂರಪ್ಪ ಕೆಳಗೆ ಇಳಿಯಲಿದ್ದಾರೆ ಎಂದು ಹೇಳುತ್ತಲೇ ಬರುತ್ತಿರುವ ಯತ್ನಾಳ್
ಇದರ ಜೊತೆಗೆ, ಮುಖ್ಯಮಂತ್ರಿಗಳ ಅವರ ಕುಟುಂಬದ ಕಟ್ಟಾ ವಿರೋಧಿ ಬಸನಗೌಡ ಪಾಟೀಲ್ ಯತ್ನಾಳ್ ಅವರ ಸಿಎಂ ವಿರೋಧಿ ನಿಲುವು ಇನ್ನೂ ತೀವ್ರಗೊಳ್ಳುವ ಸಾಧ್ಯತೆಯಿದೆ. ಯಡಿಯೂರಪ್ಪ ಕೆಳಗೆ ಇಳಿಯಲಿದ್ದಾರೆ ಎಂದು ಹೇಳುತ್ತಲೇ ಬರುತ್ತಿರುವ ಯತ್ನಾಳ್ ಅವರ ಹೇಳಿಕೆಗೆ ಉಪ ಚುನಾವಣೆಯ ಫಲಿತಾಂಶದ ನಂತರ ಏನಾದರೂ ತಿರುವು ಸಿಗಲಿದೆಯೇ ಎನ್ನುವುದು ಗೊತ್ತಾಗಲಿದೆ.
|
ಮತದಾರ ಬಂಧುಗಳಿಗೆ ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸುವೆ, ವಿಜಯೇಂದ್ರ ಟ್ವೀಟ್
"ಮಸ್ಕಿ ಕ್ಷೇತ್ರದ ಸಹೃದಯ ಕಾರ್ಯಕರ್ತ ಬಂಧುಗಳೇ, ಸೋಲು,ಗೆಲುವಿನ ಮೆಟ್ಟಿಲು. ಫಲಿತಾಂಶವನ್ನು ಸಕಾರಾತ್ಮಕವಾಗಿ ಸ್ವೀಕರಿಸೋಣ, ಪ್ರಚಾರದ ವೇಳೆ ನೀವು ತೋರಿದ ಪ್ರೀತಿ, ವಹಿಸಿದ ಪರಿಶ್ರಮ ನಾನೆಂದೂ ಮರೆಯಲಾಗದು. ಆತ್ಮವಿಶ್ವಾಸ ನಿಮ್ಮೊಂದಿರಲಿ, ನಿಮ್ಮೊಂದಿಗೆ ನಾನಿರುವೆ. ಬಿಜೆಪಿ ಬೆಂಬಲಿಸಿದ ಮತದಾರ ಬಂಧುಗಳಿಗೆ ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸುವೆ"ಎಂದು ವಿಜಯೇಂದ್ರ ಟ್ವೀಟ್ ಮಾಡಿದ್ದಾರೆ. ಒಟ್ಟಿನಲ್ಲಿ, ಮಸ್ಕಿ ಸೋಲಿನ ನಂತರ ವಿಜಯೇಂದ್ರ ಭವಿಷ್ಯ ಏನಾಗಲಿದೆ ಎನ್ನುವುದು ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ.
-
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
ಡಿವೋರ್ಸ್ವರೆಗೆ ಪತಿಯ ನಿವಾಸದಲ್ಲೇ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿ: ನಟ ವಿಜಯ್ ಪತ್ನಿ ಕೋರ್ಟ್ಗೆ ಮನವಿ -
Yash: ಪತ್ನಿ ರಾಧಿಕಾ ಪಂಡಿತ್ ಹುಟ್ಟುಹಬ್ಬಕ್ಕೆ ಹೊಸ ಲುಕ್ನಲ್ಲಿ ಯಶ್ ಪ್ರತ್ಯಕ್ಷ -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
ಟಿ20 ವಿಶ್ವಕಪ್ 2026 ಫೈನಲ್ ನಂತರ ಎಲ್ಲಾ ಮಾದರಿಯ ಕ್ರಿಕೆಟ್ಗೆ ಸೂರ್ಯಕುಮಾರ್ ಯಾದವ್ ನಿವೃತ್ತಿ ಘೋಷಣೆ ವದಂತಿ -
Vijay Divorce: ಡಿವೋರ್ಸ್ ವದಂತಿ ನಡುವೆಯೇ ನಟಿ ತ್ರಿಶಾ ಜೊತೆ ಕಾಣಿಸಿಕೊಂಡ ದಳಪತಿ ವಿಜಯ್; ವಿಡಿಯೋ ವೈರಲ್ -
UPSC Results: ಯಾದಗಿರಿ ಜಿಲ್ಲೆ ಒಂದರಲ್ಲೇ 4 ಮಂದಿ ಯುಪಿಎಸ್ಸಿ ಪಾಸ್, ಯಾರವರು? ಹಿನ್ನೆಲೆ ಏನು -
Karnataka Weather: ಕಲಬುರಗಿಯಲ್ಲಿ 39 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಸಿಲ ಬೇಗೆ -
ದುಬೈ ವಿಮಾನ ನಿಲ್ದಾಣಕ್ಕೆ ನುಗ್ಗಿದ ಡ್ರೋನ್, ಎಲ್ಲಾ ವಿಮಾನ ಹಾರಾಟ ದಿಢೀರ್ ಸ್ಥಗಿತ | Operation Roaring Lion -
LPG Price Hike: ಗೃಹಬಳಕೆ ಎಲ್ಪಿಜಿ ಸಿಲಿಂಡರ್ ಬೆಲೆ 60 ರೂಪಾಯಿ ಏರಿಕೆ, ವಾಣಿಜ್ಯ ಸಿಲಿಂಡರ್ ದರ 115 ರೂಪಾಯಿ ಹೆಚ್ಚಳ -
SWR: ಬೆಂಗಳೂರಿನಿಂದ ಇಲ್ಲಿಗೆ ಮಾ.10ರಿಂದ ವಿಶೇಷ ರೈಲುಗಳ ಸಂಚಾರ, ವೇಳಾಪಟ್ಟಿ ಹೀಗಿದೆ












Click it and Unblock the Notifications